Homeಮುಖಪುಟಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಕೇರಳದ ಇತರ ಮೂವರು ಮಲಯಾಳಂ ನಿರ್ದೇಶಕರು "ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ" ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

- Advertisement -
- Advertisement -

20 ನೇ ಶತಮಾನದ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕೇರಳದ ಮಲಬಾರ್ ಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ”ಯ ಜೀವನಾಧಾರಿತ ಸಿನೆಮಾ ಮಾಡುವುದಾಗಿ ಘೋಷಣೆಯಾಗುತ್ತಿದ್ದಂತೆ, ಬಲಪಂಥೀಯರು ಇದರ ವಿರುದ್ಧ ದ್ವೇಷದ ಅಭಿಯಾನ ಪ್ರಾರಂಭಿಸಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಘೋಷಿತ ಸಿನಿಮಾದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

‘ವಾರಿಯಂಕುನ್ನನ್’ ಎಂದು ಹೆಸರಿಸಲಾಗಿರುವ ಈ ಚಿತ್ರವನ್ನು ಮಲಯಾಳಂ ಚಿತ್ರ ರಂಗದ ಖ್ಯಾತ ನಿರ್ದೇಶಕ ಆಶಿಕ್ ಅಬು ನಿರ್ದೇಶಿಸಲಿದ್ದು, ‘ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ’ ಪಾತ್ರವನ್ನು ಪೃಥ್ವಿರಾಜ್ ಸುಕುಮಾರನ್ ನಿರ್ವಹಿಸಲಿದ್ದಾರೆ. ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ ನೇತೃತ್ವದ ಮಲಬಾರ್ ದಂಗೆಯ 100 ನೇ ವರ್ಷಾಚರಣೆಯಾದ 2021 ರಲ್ಲಿ ಈ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

“ಅವರು ವಿಶ್ವದ ಕಾಲು ಭಾಗವನ್ನು ಆಳಿದ ಸಾಮ್ರಾಜ್ಯದ ವಿರುದ್ಧ ನಿಂತರು. ಬ್ರಿಟಿಷರ ವಿರುದ್ಧ ಹಿಂದೆಂದೂ ಯುದ್ಧ ಮಾಡದ ಸೈನ್ಯದೊಂದಿಗೆ ತನ್ನದೇ ದೇಶವನ್ನು ಕಟ್ಟಿಕೊಂಡರು. ಇತಿಹಾಸವನ್ನು ಸುಟ್ಟು ಹೂಳಲಾಗಿದ್ದರೂ, ದಂತಕಥೆಯು ಜೀವಂತವಾಗಿದೆ! ನಾಯಕ, ಸೈನಿಕ, ದೇಶಭಕ್ತನ ದಂತಕಥೆ. 1921 ರ ಮಲಬಾರ್ ಕ್ರಾಂತಿಯ ಮುಖವಾದ ವ್ಯಕ್ತಿಯ ಚಿತ್ರ ‘ವಾರಿಯಂಕುನ್ನನ್’. ಮಲಬಾರ್ ಕ್ರಾಂತಿಯ 100 ನೇ ವಾರ್ಷಿಕೋತ್ಸವವಾದ 2021 ರಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ.” ನಟ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದು, ಚಿತ್ರದ ವಿರುದ್ದ ಈಗಾಗಲೇ ಧ್ವೇಷಾಭಿಯಾನ ಪ್ರಾರಂಭವಾಗಿದೆ. ಬಲಪಂಥೀಯ ವೆಬ್ಸೈಟ್ ಒಪಿಇಂಡಿಯಾ ಜೂನ್ 23 ರಂದು ಪೋಸ್ಟ್ ಮಾಡಿದ ಲೇಖನವೊಂದರಲ್ಲಿ ವಾರಿಯಂಕುನ್ನತ್ ಅವರನ್ನು ‘ಜಿಹಾದಿ’ ಹಾಗೂ ‘ಭಯೋತ್ಪಾದಕ’ ಎಂದು ಉಲ್ಲೇಖಿಸಿದೆ. ಈ ಸ್ವಾತಂತ್ರ್ಯ ಹೋರಾಟಗಾರ 1921 ರಲ್ಲಿ ಸಾವಿರಾರು ಹಿಂದೂಗಳನ್ನು ಹತ್ಯೆ ಮಾಡಿದ್ದಾರೆಂದು ಮತ್ತು ನೂರಾರು ಹಿಂದೂ ದೇವಾಲಯಗಳ ನಾಶಕ್ಕೆ ಕಾರಣವಾಗಿದ್ದಾರೆಂದು ಅದು ಆರೋಪಿಸಿದೆ.

ಇತ್ತ ಕಡೆ ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಇತರ ಮೂವರು ಮಲಯಾಳಂ ನಿರ್ದೇಶಕರು “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಅಲಿ ಅಕ್ಬರ್ ಎಂಬ ನಿರ್ದೇಶಕ “ತಾನು ‘ಅಹ್ಮದ್ ಹಾಜಿ’ಯನ್ನು ಖಳನಾಯಕನಾಗಿ ತೋರಿಸಲಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಖಿಲಾಫತ್ ಚಳವಳಿಯ ಮುಖಂಡ ಅಲಿ ಮುಸ್ಲಿಯಾರ್ ಅವರನ್ನು ಬಂಧಿಸಿದ ನಂತರ ಖ್ಯಾತ ವಿದ್ವಾಂಸರಾಗಿದ್ದ ಮತ್ತು ಬ್ರಿಟಿಷರ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದ ವಾರಿಯಂಕುನ್ನತ್ ಶಸ್ತ್ರಾಸ್ತ್ರ ಕೈಗೊಳ್ಳಲು ನಿರ್ಧರಿಸಿದ್ದರು. ನಂತರ ಅವರು ಕೆಲವು ಸಿಪಾಯಿಗಳ ಸಹಾಯದಿಂದ ಸೈನ್ಯವನ್ನು ಸಂಘಟಿಸಿ ದಂಗೆಗೆ ಕಾರಣರಾದರು, ಇದು ಕೇರಳದ ಮಲಬಾರ್ ನಾದ್ಯಂತ ಹರಡಿತು.

ಇದರ ನಂತರ ಈ ಸೇನಾನಿಗಳು ಬ್ರಿಟಿಷ್ ಅಧಿಕಾರಿಗಳು ಓಡಿಸಿ ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಅಲ್ಲಿ ”ಮಲಬಾರ್ ರಾಜ್ಯ” ಎಂಬ ಸ್ವತಂತ್ರ ರಾಜ್ಯವನ್ನು ಘೋಷಿಸಿ 1921 ರಲ್ಲಿ “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅದರ ಆಡಳಿತಗಾರನಾದರು.

ಈ ಚಳವಳಿಯೊಳಗೆ ವಿಭಜನೆಗಳನ್ನು ಸೃಷ್ಟಿಸಲು ಬ್ರಿಟಿಷರು ಹಿಂದೂ-ಮುಸ್ಲಿಂ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸಿ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ” ಅವರನ್ನು ‘ಮುಸ್ಲಿಂ ಮತಾಂಧ’ ಎಂದು ಚಿತ್ರಿಸಲು ಪ್ರಯತ್ನಿಸಿದ್ದರು. ಆದರೆ ಈ ಸ್ವಾತಂತ್ರ್ಯ ಹೋರಾಟಗಾರ ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ಪರಿಗಣಿಸಿದ್ದಾರೆಂದು ಇತಿಹಾಸ ತಜ್ಞರು ಉಲ್ಲೇಖಿಸಿದ್ದಾರೆ.

1922 ರಲ್ಲಿ, ಅವರ ಸ್ನೇಹಿತನೊಬ್ಬ ಸ್ವಾತಂತ್ರ ಹೋರಾಟಗಾರರಿಗೆ ದ್ರೋಹವೆಸಗಿ ಬ್ರಿಟಿಷರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಅವರ ಆಳ್ವಿಕೆಯು ಕೊನೆಗೊಂಡಿತು. ನಂತರ ಅವರನ್ನು ಬಂಧಿಸಿ ಮರಣದಂಡನೆ ವಿಧಿಸಲಾಯಿತು.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...