Homeಮುಖಪುಟಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಕೇರಳದ ಇತರ ಮೂವರು ಮಲಯಾಳಂ ನಿರ್ದೇಶಕರು "ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ" ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

- Advertisement -
- Advertisement -

20 ನೇ ಶತಮಾನದ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕೇರಳದ ಮಲಬಾರ್ ಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ”ಯ ಜೀವನಾಧಾರಿತ ಸಿನೆಮಾ ಮಾಡುವುದಾಗಿ ಘೋಷಣೆಯಾಗುತ್ತಿದ್ದಂತೆ, ಬಲಪಂಥೀಯರು ಇದರ ವಿರುದ್ಧ ದ್ವೇಷದ ಅಭಿಯಾನ ಪ್ರಾರಂಭಿಸಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಘೋಷಿತ ಸಿನಿಮಾದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

‘ವಾರಿಯಂಕುನ್ನನ್’ ಎಂದು ಹೆಸರಿಸಲಾಗಿರುವ ಈ ಚಿತ್ರವನ್ನು ಮಲಯಾಳಂ ಚಿತ್ರ ರಂಗದ ಖ್ಯಾತ ನಿರ್ದೇಶಕ ಆಶಿಕ್ ಅಬು ನಿರ್ದೇಶಿಸಲಿದ್ದು, ‘ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ’ ಪಾತ್ರವನ್ನು ಪೃಥ್ವಿರಾಜ್ ಸುಕುಮಾರನ್ ನಿರ್ವಹಿಸಲಿದ್ದಾರೆ. ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ ನೇತೃತ್ವದ ಮಲಬಾರ್ ದಂಗೆಯ 100 ನೇ ವರ್ಷಾಚರಣೆಯಾದ 2021 ರಲ್ಲಿ ಈ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

“ಅವರು ವಿಶ್ವದ ಕಾಲು ಭಾಗವನ್ನು ಆಳಿದ ಸಾಮ್ರಾಜ್ಯದ ವಿರುದ್ಧ ನಿಂತರು. ಬ್ರಿಟಿಷರ ವಿರುದ್ಧ ಹಿಂದೆಂದೂ ಯುದ್ಧ ಮಾಡದ ಸೈನ್ಯದೊಂದಿಗೆ ತನ್ನದೇ ದೇಶವನ್ನು ಕಟ್ಟಿಕೊಂಡರು. ಇತಿಹಾಸವನ್ನು ಸುಟ್ಟು ಹೂಳಲಾಗಿದ್ದರೂ, ದಂತಕಥೆಯು ಜೀವಂತವಾಗಿದೆ! ನಾಯಕ, ಸೈನಿಕ, ದೇಶಭಕ್ತನ ದಂತಕಥೆ. 1921 ರ ಮಲಬಾರ್ ಕ್ರಾಂತಿಯ ಮುಖವಾದ ವ್ಯಕ್ತಿಯ ಚಿತ್ರ ‘ವಾರಿಯಂಕುನ್ನನ್’. ಮಲಬಾರ್ ಕ್ರಾಂತಿಯ 100 ನೇ ವಾರ್ಷಿಕೋತ್ಸವವಾದ 2021 ರಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ.” ನಟ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದು, ಚಿತ್ರದ ವಿರುದ್ದ ಈಗಾಗಲೇ ಧ್ವೇಷಾಭಿಯಾನ ಪ್ರಾರಂಭವಾಗಿದೆ. ಬಲಪಂಥೀಯ ವೆಬ್ಸೈಟ್ ಒಪಿಇಂಡಿಯಾ ಜೂನ್ 23 ರಂದು ಪೋಸ್ಟ್ ಮಾಡಿದ ಲೇಖನವೊಂದರಲ್ಲಿ ವಾರಿಯಂಕುನ್ನತ್ ಅವರನ್ನು ‘ಜಿಹಾದಿ’ ಹಾಗೂ ‘ಭಯೋತ್ಪಾದಕ’ ಎಂದು ಉಲ್ಲೇಖಿಸಿದೆ. ಈ ಸ್ವಾತಂತ್ರ್ಯ ಹೋರಾಟಗಾರ 1921 ರಲ್ಲಿ ಸಾವಿರಾರು ಹಿಂದೂಗಳನ್ನು ಹತ್ಯೆ ಮಾಡಿದ್ದಾರೆಂದು ಮತ್ತು ನೂರಾರು ಹಿಂದೂ ದೇವಾಲಯಗಳ ನಾಶಕ್ಕೆ ಕಾರಣವಾಗಿದ್ದಾರೆಂದು ಅದು ಆರೋಪಿಸಿದೆ.

ಇತ್ತ ಕಡೆ ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಇತರ ಮೂವರು ಮಲಯಾಳಂ ನಿರ್ದೇಶಕರು “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಅಲಿ ಅಕ್ಬರ್ ಎಂಬ ನಿರ್ದೇಶಕ “ತಾನು ‘ಅಹ್ಮದ್ ಹಾಜಿ’ಯನ್ನು ಖಳನಾಯಕನಾಗಿ ತೋರಿಸಲಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಖಿಲಾಫತ್ ಚಳವಳಿಯ ಮುಖಂಡ ಅಲಿ ಮುಸ್ಲಿಯಾರ್ ಅವರನ್ನು ಬಂಧಿಸಿದ ನಂತರ ಖ್ಯಾತ ವಿದ್ವಾಂಸರಾಗಿದ್ದ ಮತ್ತು ಬ್ರಿಟಿಷರ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದ ವಾರಿಯಂಕುನ್ನತ್ ಶಸ್ತ್ರಾಸ್ತ್ರ ಕೈಗೊಳ್ಳಲು ನಿರ್ಧರಿಸಿದ್ದರು. ನಂತರ ಅವರು ಕೆಲವು ಸಿಪಾಯಿಗಳ ಸಹಾಯದಿಂದ ಸೈನ್ಯವನ್ನು ಸಂಘಟಿಸಿ ದಂಗೆಗೆ ಕಾರಣರಾದರು, ಇದು ಕೇರಳದ ಮಲಬಾರ್ ನಾದ್ಯಂತ ಹರಡಿತು.

ಇದರ ನಂತರ ಈ ಸೇನಾನಿಗಳು ಬ್ರಿಟಿಷ್ ಅಧಿಕಾರಿಗಳು ಓಡಿಸಿ ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಅಲ್ಲಿ ”ಮಲಬಾರ್ ರಾಜ್ಯ” ಎಂಬ ಸ್ವತಂತ್ರ ರಾಜ್ಯವನ್ನು ಘೋಷಿಸಿ 1921 ರಲ್ಲಿ “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅದರ ಆಡಳಿತಗಾರನಾದರು.

ಈ ಚಳವಳಿಯೊಳಗೆ ವಿಭಜನೆಗಳನ್ನು ಸೃಷ್ಟಿಸಲು ಬ್ರಿಟಿಷರು ಹಿಂದೂ-ಮುಸ್ಲಿಂ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸಿ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ” ಅವರನ್ನು ‘ಮುಸ್ಲಿಂ ಮತಾಂಧ’ ಎಂದು ಚಿತ್ರಿಸಲು ಪ್ರಯತ್ನಿಸಿದ್ದರು. ಆದರೆ ಈ ಸ್ವಾತಂತ್ರ್ಯ ಹೋರಾಟಗಾರ ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ಪರಿಗಣಿಸಿದ್ದಾರೆಂದು ಇತಿಹಾಸ ತಜ್ಞರು ಉಲ್ಲೇಖಿಸಿದ್ದಾರೆ.

1922 ರಲ್ಲಿ, ಅವರ ಸ್ನೇಹಿತನೊಬ್ಬ ಸ್ವಾತಂತ್ರ ಹೋರಾಟಗಾರರಿಗೆ ದ್ರೋಹವೆಸಗಿ ಬ್ರಿಟಿಷರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಅವರ ಆಳ್ವಿಕೆಯು ಕೊನೆಗೊಂಡಿತು. ನಂತರ ಅವರನ್ನು ಬಂಧಿಸಿ ಮರಣದಂಡನೆ ವಿಧಿಸಲಾಯಿತು.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...