Homeಮುಖಪುಟಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಕೇರಳದ ಇತರ ಮೂವರು ಮಲಯಾಳಂ ನಿರ್ದೇಶಕರು "ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ" ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

- Advertisement -
- Advertisement -

20 ನೇ ಶತಮಾನದ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕೇರಳದ ಮಲಬಾರ್ ಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ”ಯ ಜೀವನಾಧಾರಿತ ಸಿನೆಮಾ ಮಾಡುವುದಾಗಿ ಘೋಷಣೆಯಾಗುತ್ತಿದ್ದಂತೆ, ಬಲಪಂಥೀಯರು ಇದರ ವಿರುದ್ಧ ದ್ವೇಷದ ಅಭಿಯಾನ ಪ್ರಾರಂಭಿಸಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಘೋಷಿತ ಸಿನಿಮಾದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

‘ವಾರಿಯಂಕುನ್ನನ್’ ಎಂದು ಹೆಸರಿಸಲಾಗಿರುವ ಈ ಚಿತ್ರವನ್ನು ಮಲಯಾಳಂ ಚಿತ್ರ ರಂಗದ ಖ್ಯಾತ ನಿರ್ದೇಶಕ ಆಶಿಕ್ ಅಬು ನಿರ್ದೇಶಿಸಲಿದ್ದು, ‘ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ’ ಪಾತ್ರವನ್ನು ಪೃಥ್ವಿರಾಜ್ ಸುಕುಮಾರನ್ ನಿರ್ವಹಿಸಲಿದ್ದಾರೆ. ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ ನೇತೃತ್ವದ ಮಲಬಾರ್ ದಂಗೆಯ 100 ನೇ ವರ್ಷಾಚರಣೆಯಾದ 2021 ರಲ್ಲಿ ಈ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

“ಅವರು ವಿಶ್ವದ ಕಾಲು ಭಾಗವನ್ನು ಆಳಿದ ಸಾಮ್ರಾಜ್ಯದ ವಿರುದ್ಧ ನಿಂತರು. ಬ್ರಿಟಿಷರ ವಿರುದ್ಧ ಹಿಂದೆಂದೂ ಯುದ್ಧ ಮಾಡದ ಸೈನ್ಯದೊಂದಿಗೆ ತನ್ನದೇ ದೇಶವನ್ನು ಕಟ್ಟಿಕೊಂಡರು. ಇತಿಹಾಸವನ್ನು ಸುಟ್ಟು ಹೂಳಲಾಗಿದ್ದರೂ, ದಂತಕಥೆಯು ಜೀವಂತವಾಗಿದೆ! ನಾಯಕ, ಸೈನಿಕ, ದೇಶಭಕ್ತನ ದಂತಕಥೆ. 1921 ರ ಮಲಬಾರ್ ಕ್ರಾಂತಿಯ ಮುಖವಾದ ವ್ಯಕ್ತಿಯ ಚಿತ್ರ ‘ವಾರಿಯಂಕುನ್ನನ್’. ಮಲಬಾರ್ ಕ್ರಾಂತಿಯ 100 ನೇ ವಾರ್ಷಿಕೋತ್ಸವವಾದ 2021 ರಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ.” ನಟ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದು, ಚಿತ್ರದ ವಿರುದ್ದ ಈಗಾಗಲೇ ಧ್ವೇಷಾಭಿಯಾನ ಪ್ರಾರಂಭವಾಗಿದೆ. ಬಲಪಂಥೀಯ ವೆಬ್ಸೈಟ್ ಒಪಿಇಂಡಿಯಾ ಜೂನ್ 23 ರಂದು ಪೋಸ್ಟ್ ಮಾಡಿದ ಲೇಖನವೊಂದರಲ್ಲಿ ವಾರಿಯಂಕುನ್ನತ್ ಅವರನ್ನು ‘ಜಿಹಾದಿ’ ಹಾಗೂ ‘ಭಯೋತ್ಪಾದಕ’ ಎಂದು ಉಲ್ಲೇಖಿಸಿದೆ. ಈ ಸ್ವಾತಂತ್ರ್ಯ ಹೋರಾಟಗಾರ 1921 ರಲ್ಲಿ ಸಾವಿರಾರು ಹಿಂದೂಗಳನ್ನು ಹತ್ಯೆ ಮಾಡಿದ್ದಾರೆಂದು ಮತ್ತು ನೂರಾರು ಹಿಂದೂ ದೇವಾಲಯಗಳ ನಾಶಕ್ಕೆ ಕಾರಣವಾಗಿದ್ದಾರೆಂದು ಅದು ಆರೋಪಿಸಿದೆ.

ಇತ್ತ ಕಡೆ ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಇತರ ಮೂವರು ಮಲಯಾಳಂ ನಿರ್ದೇಶಕರು “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಅಲಿ ಅಕ್ಬರ್ ಎಂಬ ನಿರ್ದೇಶಕ “ತಾನು ‘ಅಹ್ಮದ್ ಹಾಜಿ’ಯನ್ನು ಖಳನಾಯಕನಾಗಿ ತೋರಿಸಲಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಖಿಲಾಫತ್ ಚಳವಳಿಯ ಮುಖಂಡ ಅಲಿ ಮುಸ್ಲಿಯಾರ್ ಅವರನ್ನು ಬಂಧಿಸಿದ ನಂತರ ಖ್ಯಾತ ವಿದ್ವಾಂಸರಾಗಿದ್ದ ಮತ್ತು ಬ್ರಿಟಿಷರ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದ ವಾರಿಯಂಕುನ್ನತ್ ಶಸ್ತ್ರಾಸ್ತ್ರ ಕೈಗೊಳ್ಳಲು ನಿರ್ಧರಿಸಿದ್ದರು. ನಂತರ ಅವರು ಕೆಲವು ಸಿಪಾಯಿಗಳ ಸಹಾಯದಿಂದ ಸೈನ್ಯವನ್ನು ಸಂಘಟಿಸಿ ದಂಗೆಗೆ ಕಾರಣರಾದರು, ಇದು ಕೇರಳದ ಮಲಬಾರ್ ನಾದ್ಯಂತ ಹರಡಿತು.

ಇದರ ನಂತರ ಈ ಸೇನಾನಿಗಳು ಬ್ರಿಟಿಷ್ ಅಧಿಕಾರಿಗಳು ಓಡಿಸಿ ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಅಲ್ಲಿ ”ಮಲಬಾರ್ ರಾಜ್ಯ” ಎಂಬ ಸ್ವತಂತ್ರ ರಾಜ್ಯವನ್ನು ಘೋಷಿಸಿ 1921 ರಲ್ಲಿ “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅದರ ಆಡಳಿತಗಾರನಾದರು.

ಈ ಚಳವಳಿಯೊಳಗೆ ವಿಭಜನೆಗಳನ್ನು ಸೃಷ್ಟಿಸಲು ಬ್ರಿಟಿಷರು ಹಿಂದೂ-ಮುಸ್ಲಿಂ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸಿ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ” ಅವರನ್ನು ‘ಮುಸ್ಲಿಂ ಮತಾಂಧ’ ಎಂದು ಚಿತ್ರಿಸಲು ಪ್ರಯತ್ನಿಸಿದ್ದರು. ಆದರೆ ಈ ಸ್ವಾತಂತ್ರ್ಯ ಹೋರಾಟಗಾರ ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ಪರಿಗಣಿಸಿದ್ದಾರೆಂದು ಇತಿಹಾಸ ತಜ್ಞರು ಉಲ್ಲೇಖಿಸಿದ್ದಾರೆ.

1922 ರಲ್ಲಿ, ಅವರ ಸ್ನೇಹಿತನೊಬ್ಬ ಸ್ವಾತಂತ್ರ ಹೋರಾಟಗಾರರಿಗೆ ದ್ರೋಹವೆಸಗಿ ಬ್ರಿಟಿಷರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಅವರ ಆಳ್ವಿಕೆಯು ಕೊನೆಗೊಂಡಿತು. ನಂತರ ಅವರನ್ನು ಬಂಧಿಸಿ ಮರಣದಂಡನೆ ವಿಧಿಸಲಾಯಿತು.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...