Homeಮುಖಪುಟಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಕೇರಳದ ಇತರ ಮೂವರು ಮಲಯಾಳಂ ನಿರ್ದೇಶಕರು "ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ" ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

- Advertisement -
- Advertisement -

20 ನೇ ಶತಮಾನದ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕೇರಳದ ಮಲಬಾರ್ ಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ”ಯ ಜೀವನಾಧಾರಿತ ಸಿನೆಮಾ ಮಾಡುವುದಾಗಿ ಘೋಷಣೆಯಾಗುತ್ತಿದ್ದಂತೆ, ಬಲಪಂಥೀಯರು ಇದರ ವಿರುದ್ಧ ದ್ವೇಷದ ಅಭಿಯಾನ ಪ್ರಾರಂಭಿಸಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಘೋಷಿತ ಸಿನಿಮಾದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

‘ವಾರಿಯಂಕುನ್ನನ್’ ಎಂದು ಹೆಸರಿಸಲಾಗಿರುವ ಈ ಚಿತ್ರವನ್ನು ಮಲಯಾಳಂ ಚಿತ್ರ ರಂಗದ ಖ್ಯಾತ ನಿರ್ದೇಶಕ ಆಶಿಕ್ ಅಬು ನಿರ್ದೇಶಿಸಲಿದ್ದು, ‘ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ’ ಪಾತ್ರವನ್ನು ಪೃಥ್ವಿರಾಜ್ ಸುಕುಮಾರನ್ ನಿರ್ವಹಿಸಲಿದ್ದಾರೆ. ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ ನೇತೃತ್ವದ ಮಲಬಾರ್ ದಂಗೆಯ 100 ನೇ ವರ್ಷಾಚರಣೆಯಾದ 2021 ರಲ್ಲಿ ಈ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

“ಅವರು ವಿಶ್ವದ ಕಾಲು ಭಾಗವನ್ನು ಆಳಿದ ಸಾಮ್ರಾಜ್ಯದ ವಿರುದ್ಧ ನಿಂತರು. ಬ್ರಿಟಿಷರ ವಿರುದ್ಧ ಹಿಂದೆಂದೂ ಯುದ್ಧ ಮಾಡದ ಸೈನ್ಯದೊಂದಿಗೆ ತನ್ನದೇ ದೇಶವನ್ನು ಕಟ್ಟಿಕೊಂಡರು. ಇತಿಹಾಸವನ್ನು ಸುಟ್ಟು ಹೂಳಲಾಗಿದ್ದರೂ, ದಂತಕಥೆಯು ಜೀವಂತವಾಗಿದೆ! ನಾಯಕ, ಸೈನಿಕ, ದೇಶಭಕ್ತನ ದಂತಕಥೆ. 1921 ರ ಮಲಬಾರ್ ಕ್ರಾಂತಿಯ ಮುಖವಾದ ವ್ಯಕ್ತಿಯ ಚಿತ್ರ ‘ವಾರಿಯಂಕುನ್ನನ್’. ಮಲಬಾರ್ ಕ್ರಾಂತಿಯ 100 ನೇ ವಾರ್ಷಿಕೋತ್ಸವವಾದ 2021 ರಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ.” ನಟ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದು, ಚಿತ್ರದ ವಿರುದ್ದ ಈಗಾಗಲೇ ಧ್ವೇಷಾಭಿಯಾನ ಪ್ರಾರಂಭವಾಗಿದೆ. ಬಲಪಂಥೀಯ ವೆಬ್ಸೈಟ್ ಒಪಿಇಂಡಿಯಾ ಜೂನ್ 23 ರಂದು ಪೋಸ್ಟ್ ಮಾಡಿದ ಲೇಖನವೊಂದರಲ್ಲಿ ವಾರಿಯಂಕುನ್ನತ್ ಅವರನ್ನು ‘ಜಿಹಾದಿ’ ಹಾಗೂ ‘ಭಯೋತ್ಪಾದಕ’ ಎಂದು ಉಲ್ಲೇಖಿಸಿದೆ. ಈ ಸ್ವಾತಂತ್ರ್ಯ ಹೋರಾಟಗಾರ 1921 ರಲ್ಲಿ ಸಾವಿರಾರು ಹಿಂದೂಗಳನ್ನು ಹತ್ಯೆ ಮಾಡಿದ್ದಾರೆಂದು ಮತ್ತು ನೂರಾರು ಹಿಂದೂ ದೇವಾಲಯಗಳ ನಾಶಕ್ಕೆ ಕಾರಣವಾಗಿದ್ದಾರೆಂದು ಅದು ಆರೋಪಿಸಿದೆ.

ಇತ್ತ ಕಡೆ ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಇತರ ಮೂವರು ಮಲಯಾಳಂ ನಿರ್ದೇಶಕರು “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಅಲಿ ಅಕ್ಬರ್ ಎಂಬ ನಿರ್ದೇಶಕ “ತಾನು ‘ಅಹ್ಮದ್ ಹಾಜಿ’ಯನ್ನು ಖಳನಾಯಕನಾಗಿ ತೋರಿಸಲಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಖಿಲಾಫತ್ ಚಳವಳಿಯ ಮುಖಂಡ ಅಲಿ ಮುಸ್ಲಿಯಾರ್ ಅವರನ್ನು ಬಂಧಿಸಿದ ನಂತರ ಖ್ಯಾತ ವಿದ್ವಾಂಸರಾಗಿದ್ದ ಮತ್ತು ಬ್ರಿಟಿಷರ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದ ವಾರಿಯಂಕುನ್ನತ್ ಶಸ್ತ್ರಾಸ್ತ್ರ ಕೈಗೊಳ್ಳಲು ನಿರ್ಧರಿಸಿದ್ದರು. ನಂತರ ಅವರು ಕೆಲವು ಸಿಪಾಯಿಗಳ ಸಹಾಯದಿಂದ ಸೈನ್ಯವನ್ನು ಸಂಘಟಿಸಿ ದಂಗೆಗೆ ಕಾರಣರಾದರು, ಇದು ಕೇರಳದ ಮಲಬಾರ್ ನಾದ್ಯಂತ ಹರಡಿತು.

ಇದರ ನಂತರ ಈ ಸೇನಾನಿಗಳು ಬ್ರಿಟಿಷ್ ಅಧಿಕಾರಿಗಳು ಓಡಿಸಿ ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಅಲ್ಲಿ ”ಮಲಬಾರ್ ರಾಜ್ಯ” ಎಂಬ ಸ್ವತಂತ್ರ ರಾಜ್ಯವನ್ನು ಘೋಷಿಸಿ 1921 ರಲ್ಲಿ “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅದರ ಆಡಳಿತಗಾರನಾದರು.

ಈ ಚಳವಳಿಯೊಳಗೆ ವಿಭಜನೆಗಳನ್ನು ಸೃಷ್ಟಿಸಲು ಬ್ರಿಟಿಷರು ಹಿಂದೂ-ಮುಸ್ಲಿಂ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸಿ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ” ಅವರನ್ನು ‘ಮುಸ್ಲಿಂ ಮತಾಂಧ’ ಎಂದು ಚಿತ್ರಿಸಲು ಪ್ರಯತ್ನಿಸಿದ್ದರು. ಆದರೆ ಈ ಸ್ವಾತಂತ್ರ್ಯ ಹೋರಾಟಗಾರ ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ಪರಿಗಣಿಸಿದ್ದಾರೆಂದು ಇತಿಹಾಸ ತಜ್ಞರು ಉಲ್ಲೇಖಿಸಿದ್ದಾರೆ.

1922 ರಲ್ಲಿ, ಅವರ ಸ್ನೇಹಿತನೊಬ್ಬ ಸ್ವಾತಂತ್ರ ಹೋರಾಟಗಾರರಿಗೆ ದ್ರೋಹವೆಸಗಿ ಬ್ರಿಟಿಷರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಅವರ ಆಳ್ವಿಕೆಯು ಕೊನೆಗೊಂಡಿತು. ನಂತರ ಅವರನ್ನು ಬಂಧಿಸಿ ಮರಣದಂಡನೆ ವಿಧಿಸಲಾಯಿತು.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...