Homeರಾಜಕೀಯಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

ಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

- Advertisement -
- Advertisement -

ತೆಲಂಗಾಣ ಆಡಳಿತರೂಢ ಪಕ್ಷ ಟಿಆರ್‌ಎಸ್‌ನ ಶಾಸಕರನ್ನು ಆಪರೇಷನ್‌ ಕಮಲ ನಡೆಸಲು ಯತ್ನಿಸಿದ ಆರೋಪದ ಮೇಲೆ ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೇರಳ ಮೂಲದ ರಾಜಕಾರಣಿ, ಉದ್ಯಮಿ ತುಷಾರ್ ವೆಲ್ಲಪಲ್ಲಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ತುಷಾರ್ ಅವರ ಪಕ್ಷವಾದ ಭಾರತ ಧರ್ಮ ಜನ ಸೇನೆಯ (ಬಿಡಿಜೆಎಸ್)ಯು ಕೇರಳದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಂಚಾಲಕರೂ ಆಗಿರುವ ತುಷಾರ್ ಮತ್ತು ಡಾ.ಜಗ್ಗಿ ಸ್ವಾಮಿ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಲುಕ್‌ಔಟ್‌‌ ನೋಟಿಸ್ ಜಾರಿ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತುಷಾರ್ ಅವರು ವಿಪಕ್ಷಗಳ ಶಾಸಕರನ್ನು ಆಪರೇಷನ್ ಕಮಲ ಮೂಲಕ ಪಕ್ಷಾಂತರ ನಡೆಸಲು ತ್ರಂತ್ರ ರೂಪಿಸಿದ್ದಾರೆ ಎಂದು ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಆರೋಪಿಸಿದ್ದರು. ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರ ಮೇಲ್ವಿಚಾರಣೆಯಲ್ಲಿ ತುಷಾರ್ ಅವರು ರಾಜ್ಯದ ನಾಲ್ವರು ಟಿಆರ್‌ಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು 100 ಕೋಟಿ ರೂ. ಆಫರ್‌ ಮಾಡಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: TRS ಶಾಸಕರ ಅಪರೇಷನ್ ಕಮಲ ಪ್ರಕರಣ: ತನಿಖೆ ಮೇಲಿನ ತಡೆಯಾಜ್ಞೆ ಹಿಂಪಡೆದ ತೆಲಂಗಾಣ ಹೈಕೋರ್ಟ್

ಟಿಆರ್‌ಎಸ್‌ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಐದು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅರ್ಧ ಗಂಟೆ ಕಾಲ ತುಷಾರ್ ಅವರ ಏಜೆಂಟ್‌ಗಳು ಟಿಆರ್‌ಎಸ್ ಶಾಸಕರಿಗೆ ಆಫರ್ ಬಗ್ಗೆ ಮಾತನಾಡುತ್ತಿರುವುದು ದಾಖಲಾಗಿದೆ. ಈ ವೇಳೆ ಅವರು ಅಮಿತ್ ಶಾ ಜೊತೆಗೆ ತುಷಾರ್ ಇರುವ ಕೆಲವು ಫೋಟೋಗಳು ಮತ್ತು ಇತರ ಕೆಲವು ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದರು.

ಟಿಆರ್‌ಎಸ್ ಶಾಸಕರನ್ನು ಆಪರೇಷನ್ ಕಮಲ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಹಿಂದೆ ತುಷಾರ್ ಇದ್ದಾರೆ ಎಂದು ಟಿಆರ್‌ಎಸ್‌ ಆರೋಪಿಸಿತ್ತು.

ನೋಟಿಸ್‌ ನೀಡಿದ ಬೆನ್ನಲ್ಲೇ ತೆಲಂಗಾಣ ಪೊಲೀಸರು ಕೊಚ್ಚಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯ ಕಣಿಚುಕುಲಂಗರದಲ್ಲಿರುವ ತುಷಾರ್ ಅವರ ಮನೆಗೆ ಕಳೆದ ದಿನ ಎಸ್‌ಐಟಿ ತಂಡ ತಲುಪಿದ್ದು, ವಿಚಾರಣೆಗಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಈ ದಾಳಿಯನ್ನು ನಲ್ಗೊಂಡ ಪೊಲೀಸ್ ವರಿಷ್ಠಾಧಿಕಾರಿ ರಮಾ ಮಹೇಶ್ವರಿ ನೇತೃತ್ವದಲ್ಲಿ ನಡೆದಿತ್ತು.

ಬಿಜೆಪಿಗೆ ಪಕ್ಷಾಂತರ ಮಾಡಲು 100 ಕೋಟಿ ಆಮಿಷ ಒಡ್ಡಲಾಗಿದೆ ಎಂದು ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರಾಮಚಂದ್ರ ಭಾರತಿ, ಕೋರೆ ನಂದು ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಬಂಧನಕ್ಕೆ ಒಳಗಾದವರು ನಾಲ್ವರು ಶಾಸಕರಿಗೆ ಟಿಆರ್‌ಎಸ್ ತೊರೆದ ನಂತರ ಬಿಜೆಪಿ ಸೇರುವುದರಿಂದ ಆಗುವ ಲಾಭಗಳ ಕುರಿತು ವಿವರಿಸುತ್ತಿರುವ ವಿಡಿಯೋ ತುಣುಕುಗಳನ್ನು ಟಿಆರ್‌ಎಸ್‌ ಬಿಡುಗಡೆ ಮಾಡಿವೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್…

ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ಅವರು ಮೊಬೈಲ್ ಸ್ಪೀಕರ್ ಆನ್ ಮಾಡಿ ತುಷಾರ್ ಎಂದು ಹೇಳಿಕೊಂಡಿರುವ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ದಾಖಲಾಗಿದೆ. ಫೋನ್‌ನ ಇನ್ನೊಂದು ಕಡೆಯಲ್ಲಿ ತುಷಾರ್ ಅವರ ಧ್ವನಿಯನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕೇಳಬಹುದು ಎಂದು ಮುಖ್ಯಮಂತ್ರಿ ರಾವ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...