Homeರಾಜಕೀಯಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

ಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

- Advertisement -
- Advertisement -

ತೆಲಂಗಾಣ ಆಡಳಿತರೂಢ ಪಕ್ಷ ಟಿಆರ್‌ಎಸ್‌ನ ಶಾಸಕರನ್ನು ಆಪರೇಷನ್‌ ಕಮಲ ನಡೆಸಲು ಯತ್ನಿಸಿದ ಆರೋಪದ ಮೇಲೆ ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೇರಳ ಮೂಲದ ರಾಜಕಾರಣಿ, ಉದ್ಯಮಿ ತುಷಾರ್ ವೆಲ್ಲಪಲ್ಲಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ತುಷಾರ್ ಅವರ ಪಕ್ಷವಾದ ಭಾರತ ಧರ್ಮ ಜನ ಸೇನೆಯ (ಬಿಡಿಜೆಎಸ್)ಯು ಕೇರಳದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಂಚಾಲಕರೂ ಆಗಿರುವ ತುಷಾರ್ ಮತ್ತು ಡಾ.ಜಗ್ಗಿ ಸ್ವಾಮಿ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಲುಕ್‌ಔಟ್‌‌ ನೋಟಿಸ್ ಜಾರಿ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತುಷಾರ್ ಅವರು ವಿಪಕ್ಷಗಳ ಶಾಸಕರನ್ನು ಆಪರೇಷನ್ ಕಮಲ ಮೂಲಕ ಪಕ್ಷಾಂತರ ನಡೆಸಲು ತ್ರಂತ್ರ ರೂಪಿಸಿದ್ದಾರೆ ಎಂದು ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಆರೋಪಿಸಿದ್ದರು. ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರ ಮೇಲ್ವಿಚಾರಣೆಯಲ್ಲಿ ತುಷಾರ್ ಅವರು ರಾಜ್ಯದ ನಾಲ್ವರು ಟಿಆರ್‌ಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು 100 ಕೋಟಿ ರೂ. ಆಫರ್‌ ಮಾಡಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: TRS ಶಾಸಕರ ಅಪರೇಷನ್ ಕಮಲ ಪ್ರಕರಣ: ತನಿಖೆ ಮೇಲಿನ ತಡೆಯಾಜ್ಞೆ ಹಿಂಪಡೆದ ತೆಲಂಗಾಣ ಹೈಕೋರ್ಟ್

ಟಿಆರ್‌ಎಸ್‌ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಐದು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅರ್ಧ ಗಂಟೆ ಕಾಲ ತುಷಾರ್ ಅವರ ಏಜೆಂಟ್‌ಗಳು ಟಿಆರ್‌ಎಸ್ ಶಾಸಕರಿಗೆ ಆಫರ್ ಬಗ್ಗೆ ಮಾತನಾಡುತ್ತಿರುವುದು ದಾಖಲಾಗಿದೆ. ಈ ವೇಳೆ ಅವರು ಅಮಿತ್ ಶಾ ಜೊತೆಗೆ ತುಷಾರ್ ಇರುವ ಕೆಲವು ಫೋಟೋಗಳು ಮತ್ತು ಇತರ ಕೆಲವು ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದರು.

ಟಿಆರ್‌ಎಸ್ ಶಾಸಕರನ್ನು ಆಪರೇಷನ್ ಕಮಲ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಹಿಂದೆ ತುಷಾರ್ ಇದ್ದಾರೆ ಎಂದು ಟಿಆರ್‌ಎಸ್‌ ಆರೋಪಿಸಿತ್ತು.

ನೋಟಿಸ್‌ ನೀಡಿದ ಬೆನ್ನಲ್ಲೇ ತೆಲಂಗಾಣ ಪೊಲೀಸರು ಕೊಚ್ಚಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯ ಕಣಿಚುಕುಲಂಗರದಲ್ಲಿರುವ ತುಷಾರ್ ಅವರ ಮನೆಗೆ ಕಳೆದ ದಿನ ಎಸ್‌ಐಟಿ ತಂಡ ತಲುಪಿದ್ದು, ವಿಚಾರಣೆಗಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಈ ದಾಳಿಯನ್ನು ನಲ್ಗೊಂಡ ಪೊಲೀಸ್ ವರಿಷ್ಠಾಧಿಕಾರಿ ರಮಾ ಮಹೇಶ್ವರಿ ನೇತೃತ್ವದಲ್ಲಿ ನಡೆದಿತ್ತು.

ಬಿಜೆಪಿಗೆ ಪಕ್ಷಾಂತರ ಮಾಡಲು 100 ಕೋಟಿ ಆಮಿಷ ಒಡ್ಡಲಾಗಿದೆ ಎಂದು ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರಾಮಚಂದ್ರ ಭಾರತಿ, ಕೋರೆ ನಂದು ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಬಂಧನಕ್ಕೆ ಒಳಗಾದವರು ನಾಲ್ವರು ಶಾಸಕರಿಗೆ ಟಿಆರ್‌ಎಸ್ ತೊರೆದ ನಂತರ ಬಿಜೆಪಿ ಸೇರುವುದರಿಂದ ಆಗುವ ಲಾಭಗಳ ಕುರಿತು ವಿವರಿಸುತ್ತಿರುವ ವಿಡಿಯೋ ತುಣುಕುಗಳನ್ನು ಟಿಆರ್‌ಎಸ್‌ ಬಿಡುಗಡೆ ಮಾಡಿವೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್…

ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ಅವರು ಮೊಬೈಲ್ ಸ್ಪೀಕರ್ ಆನ್ ಮಾಡಿ ತುಷಾರ್ ಎಂದು ಹೇಳಿಕೊಂಡಿರುವ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ದಾಖಲಾಗಿದೆ. ಫೋನ್‌ನ ಇನ್ನೊಂದು ಕಡೆಯಲ್ಲಿ ತುಷಾರ್ ಅವರ ಧ್ವನಿಯನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕೇಳಬಹುದು ಎಂದು ಮುಖ್ಯಮಂತ್ರಿ ರಾವ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...