Homeರಾಜಕೀಯಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

ಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

- Advertisement -
- Advertisement -

ತೆಲಂಗಾಣ ಆಡಳಿತರೂಢ ಪಕ್ಷ ಟಿಆರ್‌ಎಸ್‌ನ ಶಾಸಕರನ್ನು ಆಪರೇಷನ್‌ ಕಮಲ ನಡೆಸಲು ಯತ್ನಿಸಿದ ಆರೋಪದ ಮೇಲೆ ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೇರಳ ಮೂಲದ ರಾಜಕಾರಣಿ, ಉದ್ಯಮಿ ತುಷಾರ್ ವೆಲ್ಲಪಲ್ಲಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ತುಷಾರ್ ಅವರ ಪಕ್ಷವಾದ ಭಾರತ ಧರ್ಮ ಜನ ಸೇನೆಯ (ಬಿಡಿಜೆಎಸ್)ಯು ಕೇರಳದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಂಚಾಲಕರೂ ಆಗಿರುವ ತುಷಾರ್ ಮತ್ತು ಡಾ.ಜಗ್ಗಿ ಸ್ವಾಮಿ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಲುಕ್‌ಔಟ್‌‌ ನೋಟಿಸ್ ಜಾರಿ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತುಷಾರ್ ಅವರು ವಿಪಕ್ಷಗಳ ಶಾಸಕರನ್ನು ಆಪರೇಷನ್ ಕಮಲ ಮೂಲಕ ಪಕ್ಷಾಂತರ ನಡೆಸಲು ತ್ರಂತ್ರ ರೂಪಿಸಿದ್ದಾರೆ ಎಂದು ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಆರೋಪಿಸಿದ್ದರು. ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರ ಮೇಲ್ವಿಚಾರಣೆಯಲ್ಲಿ ತುಷಾರ್ ಅವರು ರಾಜ್ಯದ ನಾಲ್ವರು ಟಿಆರ್‌ಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು 100 ಕೋಟಿ ರೂ. ಆಫರ್‌ ಮಾಡಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: TRS ಶಾಸಕರ ಅಪರೇಷನ್ ಕಮಲ ಪ್ರಕರಣ: ತನಿಖೆ ಮೇಲಿನ ತಡೆಯಾಜ್ಞೆ ಹಿಂಪಡೆದ ತೆಲಂಗಾಣ ಹೈಕೋರ್ಟ್

ಟಿಆರ್‌ಎಸ್‌ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಐದು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅರ್ಧ ಗಂಟೆ ಕಾಲ ತುಷಾರ್ ಅವರ ಏಜೆಂಟ್‌ಗಳು ಟಿಆರ್‌ಎಸ್ ಶಾಸಕರಿಗೆ ಆಫರ್ ಬಗ್ಗೆ ಮಾತನಾಡುತ್ತಿರುವುದು ದಾಖಲಾಗಿದೆ. ಈ ವೇಳೆ ಅವರು ಅಮಿತ್ ಶಾ ಜೊತೆಗೆ ತುಷಾರ್ ಇರುವ ಕೆಲವು ಫೋಟೋಗಳು ಮತ್ತು ಇತರ ಕೆಲವು ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದರು.

ಟಿಆರ್‌ಎಸ್ ಶಾಸಕರನ್ನು ಆಪರೇಷನ್ ಕಮಲ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಹಿಂದೆ ತುಷಾರ್ ಇದ್ದಾರೆ ಎಂದು ಟಿಆರ್‌ಎಸ್‌ ಆರೋಪಿಸಿತ್ತು.

ನೋಟಿಸ್‌ ನೀಡಿದ ಬೆನ್ನಲ್ಲೇ ತೆಲಂಗಾಣ ಪೊಲೀಸರು ಕೊಚ್ಚಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯ ಕಣಿಚುಕುಲಂಗರದಲ್ಲಿರುವ ತುಷಾರ್ ಅವರ ಮನೆಗೆ ಕಳೆದ ದಿನ ಎಸ್‌ಐಟಿ ತಂಡ ತಲುಪಿದ್ದು, ವಿಚಾರಣೆಗಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಈ ದಾಳಿಯನ್ನು ನಲ್ಗೊಂಡ ಪೊಲೀಸ್ ವರಿಷ್ಠಾಧಿಕಾರಿ ರಮಾ ಮಹೇಶ್ವರಿ ನೇತೃತ್ವದಲ್ಲಿ ನಡೆದಿತ್ತು.

ಬಿಜೆಪಿಗೆ ಪಕ್ಷಾಂತರ ಮಾಡಲು 100 ಕೋಟಿ ಆಮಿಷ ಒಡ್ಡಲಾಗಿದೆ ಎಂದು ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರಾಮಚಂದ್ರ ಭಾರತಿ, ಕೋರೆ ನಂದು ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಬಂಧನಕ್ಕೆ ಒಳಗಾದವರು ನಾಲ್ವರು ಶಾಸಕರಿಗೆ ಟಿಆರ್‌ಎಸ್ ತೊರೆದ ನಂತರ ಬಿಜೆಪಿ ಸೇರುವುದರಿಂದ ಆಗುವ ಲಾಭಗಳ ಕುರಿತು ವಿವರಿಸುತ್ತಿರುವ ವಿಡಿಯೋ ತುಣುಕುಗಳನ್ನು ಟಿಆರ್‌ಎಸ್‌ ಬಿಡುಗಡೆ ಮಾಡಿವೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್…

ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ಅವರು ಮೊಬೈಲ್ ಸ್ಪೀಕರ್ ಆನ್ ಮಾಡಿ ತುಷಾರ್ ಎಂದು ಹೇಳಿಕೊಂಡಿರುವ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ದಾಖಲಾಗಿದೆ. ಫೋನ್‌ನ ಇನ್ನೊಂದು ಕಡೆಯಲ್ಲಿ ತುಷಾರ್ ಅವರ ಧ್ವನಿಯನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕೇಳಬಹುದು ಎಂದು ಮುಖ್ಯಮಂತ್ರಿ ರಾವ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...