Homeಮುಖಪುಟಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

- Advertisement -
- Advertisement -

ಕೇರಳ ರಾಜ್ಯಕ್ಕೆ ಈಗ ಹೆಚ್ಚು ಆಕ್ಸಿಜನ್ ಅವಶ್ಯಕತೆ ಇದ್ದು, ಈಗಾಗಲೇ ಹೆಚ್ಚುವರಿಯಿದ್ದ ಸ್ಟಾಕ್‌ ಅನ್ನು ಬೇರೆ ರಾಜ್ಯಗಳಿಗೆ ನೀಡಲಾಗಿದೆ. ಇನ್ನು ಮುಂದೆ ಬೇರೆ ರಾಜ್ಯಗಳಿಗೆ ಆಕ್ಸಿಜನ್ ಪೂರೈಸಲಾಗದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ತಮ್ಮ ರಾಜ್ಯದಲ್ಲಿ ಅವಶ್ಯಕತೆಗಿಂತ ಹೆಚ್ಚಿದ್ದ ಆಕ್ಸಿಜನ್ ಸ್ಟಾಕ್ ಅನ್ನು ನೆರೆಯ ರಾಜ್ಯಗಳಿಗೆ ಪೂರೈಸಿದ್ದೇವೆ. ಇನ್ನು ಕೇವಲ 86 ಮೆಟ್ರಿಕ್ ಟನ್ ಸ್ಟಾಕ್ ಉಳಿದಿದ್ದು, ಕೇರಳಕ್ಕೆ ಬೇಕಾಗಿದೆ. ಹೀಗಾಗಿ ಬೇರೆ ರಾಜ್ಯಗಳಿಗೆ ಪೂರೈಸಲು ಸಾಧ್ಯವಿಲ್ಲ ಎಂದಿದ್ದಾರೆ.

ಆಕ್ಸಿಜನ್ ಹಂಚಿಕೆಯ ಕೇಂದ್ರ ಸಮಿತಿಯ ಮೇ 6 ರ ತೀರ್ಪಿನ ಪ್ರಕಾರ ರಾಜ್ಯವು ಮೇ 10 ರವರೆಗೆ 40 ಮೆಟ್ರಿಕ್ ಟನ್ ಆಮ್ಲಜನಕವನ್ನು ತಮಿಳುನಾಡಿಗೆ ಪೂರೈಸುತ್ತದೆ. ಇದರ ನಂತರ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಆಮ್ಲಜನಕವನ್ನು ರಾಜ್ಯದಿಂದ ಹೊರತೆಗೆಯಲು ಪ್ರಾಯೋಗಿಕವಾಗಿ ಅಸಾಧ್ಯ ಎಂದು ಪತ್ರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬರೆದಿದ್ದಾರೆ.

ಇದನ್ನೂ ಓದಿ: ಹರಿಯಾಣ: ಮೇ 17 ರವರೆಗೆ ಲಾಕ್‌ಡೌನ್, ಬಿಪಿಎಲ್ ಕುಟುಂಗಳಿಗೆ 5 ಸಾವಿರ ರೂ. ಪ್ಯಾಕೇಜ್

ಕೇರಳದಲ್ಲಿ ಪ್ರಸ್ತುತ 4,02,640 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಮೇ 15 ರ ವೇಳೆಗೆ ಈ ಸಂಖ್ಯೆ 6,00,000 ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ. ವೇಗವಾಗಿ ಏರುತ್ತಿರುವ ಕೊರೊನಾ ಪ್ರಕರಣಗಳ ದೃಷ್ಟಿಯಿಂದ, ಮೇ 15 ರ ವೇಳೆಗೆ ರಾಜ್ಯಕ್ಕೆ 450 ಮೆಟ್ರಿಕ್ ಟನ್ ಆಮ್ಲಜನಕ ಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ರಾಜ್ಯದ ಪ್ರಮುಖ ಆಮ್ಲಜನಕ ಉತ್ಪಾದನಾ ಘಟಕವೆಂದರೆ ಐನಾಕ್ಸ್, ಇದು ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿದೆ. ಇದರ ಒಟ್ಟು ಉತ್ಪಾದನಾ ಸಾಮರ್ಥ್ಯ 150 ಮೆಟ್ರಿಕ್ ಟನ್ ಮತ್ತು ಇತರ ಸಣ್ಣ ಘಟಕಗಳೊಂದಿಗೆ ಕೇರಳ ರಾಜ್ಯವು ಪ್ರತಿದಿನ 219 ಮೆಟ್ರಿಕ್ ಟನ್ ಆಮ್ಲಜನಕವನ್ನು ಉತ್ಪಾದಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಬರೆದಿದ್ದಾರೆ.

ರಾಜ್ಯವು ಭೌಗೋಳಿಕವಾಗಿ ಮುಖ್ಯ ಉಕ್ಕಿನ ಸ್ಥಾವರಗಳಿಂದ ದೂರವಿರುವುದರಿಂದ, ಆಮ್ಲಜನಕದ ವರ್ಗಾವಣೆಯನ್ನು ಕಷ್ಟಕರವಾಗಿಸುತ್ತದೆ. ರಾಜ್ಯದಲ್ಲಿ ಉತ್ಪತ್ತಿಯಾಗುವ ಸಂಪೂರ್ಣ ಆಮ್ಲಜನಕವನ್ನು ಅಂದರೆ 219 ಮೆಟ್ರಿಕ್ ಟನ್ ಅನ್ನು ಕೇರಳ ರಾಜ್ಯಕ್ಕೆ ಹಂಚಿಕೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...