Homeಮುಖಪುಟಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

- Advertisement -
- Advertisement -

ಕೇರಳ ರಾಜ್ಯಕ್ಕೆ ಈಗ ಹೆಚ್ಚು ಆಕ್ಸಿಜನ್ ಅವಶ್ಯಕತೆ ಇದ್ದು, ಈಗಾಗಲೇ ಹೆಚ್ಚುವರಿಯಿದ್ದ ಸ್ಟಾಕ್‌ ಅನ್ನು ಬೇರೆ ರಾಜ್ಯಗಳಿಗೆ ನೀಡಲಾಗಿದೆ. ಇನ್ನು ಮುಂದೆ ಬೇರೆ ರಾಜ್ಯಗಳಿಗೆ ಆಕ್ಸಿಜನ್ ಪೂರೈಸಲಾಗದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ತಮ್ಮ ರಾಜ್ಯದಲ್ಲಿ ಅವಶ್ಯಕತೆಗಿಂತ ಹೆಚ್ಚಿದ್ದ ಆಕ್ಸಿಜನ್ ಸ್ಟಾಕ್ ಅನ್ನು ನೆರೆಯ ರಾಜ್ಯಗಳಿಗೆ ಪೂರೈಸಿದ್ದೇವೆ. ಇನ್ನು ಕೇವಲ 86 ಮೆಟ್ರಿಕ್ ಟನ್ ಸ್ಟಾಕ್ ಉಳಿದಿದ್ದು, ಕೇರಳಕ್ಕೆ ಬೇಕಾಗಿದೆ. ಹೀಗಾಗಿ ಬೇರೆ ರಾಜ್ಯಗಳಿಗೆ ಪೂರೈಸಲು ಸಾಧ್ಯವಿಲ್ಲ ಎಂದಿದ್ದಾರೆ.

ಆಕ್ಸಿಜನ್ ಹಂಚಿಕೆಯ ಕೇಂದ್ರ ಸಮಿತಿಯ ಮೇ 6 ರ ತೀರ್ಪಿನ ಪ್ರಕಾರ ರಾಜ್ಯವು ಮೇ 10 ರವರೆಗೆ 40 ಮೆಟ್ರಿಕ್ ಟನ್ ಆಮ್ಲಜನಕವನ್ನು ತಮಿಳುನಾಡಿಗೆ ಪೂರೈಸುತ್ತದೆ. ಇದರ ನಂತರ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಆಮ್ಲಜನಕವನ್ನು ರಾಜ್ಯದಿಂದ ಹೊರತೆಗೆಯಲು ಪ್ರಾಯೋಗಿಕವಾಗಿ ಅಸಾಧ್ಯ ಎಂದು ಪತ್ರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬರೆದಿದ್ದಾರೆ.

ಇದನ್ನೂ ಓದಿ: ಹರಿಯಾಣ: ಮೇ 17 ರವರೆಗೆ ಲಾಕ್‌ಡೌನ್, ಬಿಪಿಎಲ್ ಕುಟುಂಗಳಿಗೆ 5 ಸಾವಿರ ರೂ. ಪ್ಯಾಕೇಜ್

ಕೇರಳದಲ್ಲಿ ಪ್ರಸ್ತುತ 4,02,640 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಮೇ 15 ರ ವೇಳೆಗೆ ಈ ಸಂಖ್ಯೆ 6,00,000 ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ. ವೇಗವಾಗಿ ಏರುತ್ತಿರುವ ಕೊರೊನಾ ಪ್ರಕರಣಗಳ ದೃಷ್ಟಿಯಿಂದ, ಮೇ 15 ರ ವೇಳೆಗೆ ರಾಜ್ಯಕ್ಕೆ 450 ಮೆಟ್ರಿಕ್ ಟನ್ ಆಮ್ಲಜನಕ ಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ರಾಜ್ಯದ ಪ್ರಮುಖ ಆಮ್ಲಜನಕ ಉತ್ಪಾದನಾ ಘಟಕವೆಂದರೆ ಐನಾಕ್ಸ್, ಇದು ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿದೆ. ಇದರ ಒಟ್ಟು ಉತ್ಪಾದನಾ ಸಾಮರ್ಥ್ಯ 150 ಮೆಟ್ರಿಕ್ ಟನ್ ಮತ್ತು ಇತರ ಸಣ್ಣ ಘಟಕಗಳೊಂದಿಗೆ ಕೇರಳ ರಾಜ್ಯವು ಪ್ರತಿದಿನ 219 ಮೆಟ್ರಿಕ್ ಟನ್ ಆಮ್ಲಜನಕವನ್ನು ಉತ್ಪಾದಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಬರೆದಿದ್ದಾರೆ.

ರಾಜ್ಯವು ಭೌಗೋಳಿಕವಾಗಿ ಮುಖ್ಯ ಉಕ್ಕಿನ ಸ್ಥಾವರಗಳಿಂದ ದೂರವಿರುವುದರಿಂದ, ಆಮ್ಲಜನಕದ ವರ್ಗಾವಣೆಯನ್ನು ಕಷ್ಟಕರವಾಗಿಸುತ್ತದೆ. ರಾಜ್ಯದಲ್ಲಿ ಉತ್ಪತ್ತಿಯಾಗುವ ಸಂಪೂರ್ಣ ಆಮ್ಲಜನಕವನ್ನು ಅಂದರೆ 219 ಮೆಟ್ರಿಕ್ ಟನ್ ಅನ್ನು ಕೇರಳ ರಾಜ್ಯಕ್ಕೆ ಹಂಚಿಕೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...