Homeರಾಷ್ಟ್ರೀಯಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

ಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

- Advertisement -
- Advertisement -

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ತಮ್ಮ ಒಳವಸ್ತ್ರವನ್ನು ತೆಗೆದು ಪರೀಕ್ಷೆ ಬರೆಯುವಂತೆ ಕೇಳಿ, ಮಹಿಳೆಯರ ಘನತೆಗೆ ಕುಂದುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 354 (ಹೆಣ್ಣಿನ ಸ್ವಾಭಿಮಾನಕ್ಕೆ ಕುಂದುಂಟು ಮಾಡುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು 509 (ಮಹಿಳೆಯರ ಸ್ವಾಭಿಮಾನಕ್ಕೆ ಅವಮಾನ ಮಾಡುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯ)ದ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲ್ಲಂ ಜಿಲ್ಲೆಯ ಆಯುರ್‌ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ ಹಾಜರಾಗುವ ವೇಳೆ ವಿದ್ಯಾರ್ಥಿನಿಯರ ವಿರುದ್ಧ ಈ ಅವಮಾನಕರ ಘಟನೆ ನಡೆದಿದ್ದು, ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣದ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಮಹಿಳಾ ಅಧಿಕಾರಿಗಳ ತಂಡವು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನೀಟ್ ಪರೀಕ್ಷೆಗೆ ಕುಳಿತಿದ್ದ 17 ವರ್ಷದ ಬಾಲಕಿಯ ತಂದೆಯೊಬ್ಬರು ತನ್ನ ಮಗಳು ಮೂರು ಗಂಟೆಗಳ ಕಾಲ ಒಳವಸ್ತ್ರ ಇಲ್ಲದೆ ಪರೀಕ್ಷೆಗೆ ಕುಳಿತಿದ್ದ ಆಘಾತಕಾರಿ ಅನುಭವವನ್ನು ಮಾಧ್ಯಮಗಳ ಮುಂದೆ ತಿಳಿಸಿದ ನಂತರ ಪ್ರಕರಣವು ಬೆಳಕಿಗೆ ಬಂದಿತ್ತು. ತನ್ನ ಮಗಳು ನೀಟ್‌‌ ಬುಲೆಟಿನ್‌ನಲ್ಲಿ ಉಲ್ಲೇಖಿಸಲಾದ ಡ್ರೆಸ್ ಕೋಡ್‌ನಂತೆ ಬಟ್ಟೆ ಧರಿಸಿದ್ದಳು, ಆದರೆ ಅದರಲ್ಲಿ ಒಳ ಉಡುಪುಗಳ ಬಗ್ಗೆ ಏನೂ ಉಲ್ಲೇಖಿಸಿರಲಿಲ್ಲ ಎಂದು ತಂದೆ ಟಿವಿ ಚಾನೆಲ್‌ಗೆ ತಿಳಿಸಿದ್ದರು.

ಈ ಘಟನೆಯನ್ನು ಖಂಡಿಸಿ ವಿವಿಧ ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದವು. ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವೂ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ. 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಕೊಲ್ಲಂ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗೆ ಆಯೋಗ ಸೂಚಿಸಿದೆ.

ಇದನ್ನೂ ಓದಿ: ಕೊರೊನಾ ಕರ್ತವ್ಯ: ನೀಟ್ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ 5,000 ವೈದ್ಯಕೀಯ ಇಂಟರ್ನ್‌ಗಳು

ಸಾವಿರಾರು ವೈದ್ಯಕೀಯ ಆಕಾಂಕ್ಷಿಗಳಿಗೆ, NEET ಭದ್ರತಾ ತಪಾಸಣೆಯನ್ನು ತೆರವುಗೊಳಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಭ್ಯರ್ಥಿಗಳು ಸ್ಟೇಷನರಿಯನ್ನು ಕೊಂಡೊಯ್ಯದಂತೆ ಮತ್ತು ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ಅನುಸರಿಸಲು ಕೇಳಿಕೊಳ್ಳಲಾಗಿದ್ದು, ಇದರಲ್ಲಿ ವ್ಯಾಲೆಟ್‌ಗಳು, ಕೈಚೀಲಗಳು, ಬೆಲ್ಟ್‌ಗಳು, ಕ್ಯಾಪ್‌ಗಳು, ಆಭರಣಗಳು, ಶೂಗಳು ಮತ್ತು ಹೀಲ್ಸ್ ಧರಿಸುವುದನ್ನು ನಿಷೇಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...