Homeರಾಷ್ಟ್ರೀಯಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

ಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

- Advertisement -
- Advertisement -

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ತಮ್ಮ ಒಳವಸ್ತ್ರವನ್ನು ತೆಗೆದು ಪರೀಕ್ಷೆ ಬರೆಯುವಂತೆ ಕೇಳಿ, ಮಹಿಳೆಯರ ಘನತೆಗೆ ಕುಂದುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 354 (ಹೆಣ್ಣಿನ ಸ್ವಾಭಿಮಾನಕ್ಕೆ ಕುಂದುಂಟು ಮಾಡುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು 509 (ಮಹಿಳೆಯರ ಸ್ವಾಭಿಮಾನಕ್ಕೆ ಅವಮಾನ ಮಾಡುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯ)ದ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲ್ಲಂ ಜಿಲ್ಲೆಯ ಆಯುರ್‌ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ ಹಾಜರಾಗುವ ವೇಳೆ ವಿದ್ಯಾರ್ಥಿನಿಯರ ವಿರುದ್ಧ ಈ ಅವಮಾನಕರ ಘಟನೆ ನಡೆದಿದ್ದು, ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣದ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಮಹಿಳಾ ಅಧಿಕಾರಿಗಳ ತಂಡವು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನೀಟ್ ಪರೀಕ್ಷೆಗೆ ಕುಳಿತಿದ್ದ 17 ವರ್ಷದ ಬಾಲಕಿಯ ತಂದೆಯೊಬ್ಬರು ತನ್ನ ಮಗಳು ಮೂರು ಗಂಟೆಗಳ ಕಾಲ ಒಳವಸ್ತ್ರ ಇಲ್ಲದೆ ಪರೀಕ್ಷೆಗೆ ಕುಳಿತಿದ್ದ ಆಘಾತಕಾರಿ ಅನುಭವವನ್ನು ಮಾಧ್ಯಮಗಳ ಮುಂದೆ ತಿಳಿಸಿದ ನಂತರ ಪ್ರಕರಣವು ಬೆಳಕಿಗೆ ಬಂದಿತ್ತು. ತನ್ನ ಮಗಳು ನೀಟ್‌‌ ಬುಲೆಟಿನ್‌ನಲ್ಲಿ ಉಲ್ಲೇಖಿಸಲಾದ ಡ್ರೆಸ್ ಕೋಡ್‌ನಂತೆ ಬಟ್ಟೆ ಧರಿಸಿದ್ದಳು, ಆದರೆ ಅದರಲ್ಲಿ ಒಳ ಉಡುಪುಗಳ ಬಗ್ಗೆ ಏನೂ ಉಲ್ಲೇಖಿಸಿರಲಿಲ್ಲ ಎಂದು ತಂದೆ ಟಿವಿ ಚಾನೆಲ್‌ಗೆ ತಿಳಿಸಿದ್ದರು.

ಈ ಘಟನೆಯನ್ನು ಖಂಡಿಸಿ ವಿವಿಧ ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದವು. ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವೂ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ. 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಕೊಲ್ಲಂ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗೆ ಆಯೋಗ ಸೂಚಿಸಿದೆ.

ಇದನ್ನೂ ಓದಿ: ಕೊರೊನಾ ಕರ್ತವ್ಯ: ನೀಟ್ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ 5,000 ವೈದ್ಯಕೀಯ ಇಂಟರ್ನ್‌ಗಳು

ಸಾವಿರಾರು ವೈದ್ಯಕೀಯ ಆಕಾಂಕ್ಷಿಗಳಿಗೆ, NEET ಭದ್ರತಾ ತಪಾಸಣೆಯನ್ನು ತೆರವುಗೊಳಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಭ್ಯರ್ಥಿಗಳು ಸ್ಟೇಷನರಿಯನ್ನು ಕೊಂಡೊಯ್ಯದಂತೆ ಮತ್ತು ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ಅನುಸರಿಸಲು ಕೇಳಿಕೊಳ್ಳಲಾಗಿದ್ದು, ಇದರಲ್ಲಿ ವ್ಯಾಲೆಟ್‌ಗಳು, ಕೈಚೀಲಗಳು, ಬೆಲ್ಟ್‌ಗಳು, ಕ್ಯಾಪ್‌ಗಳು, ಆಭರಣಗಳು, ಶೂಗಳು ಮತ್ತು ಹೀಲ್ಸ್ ಧರಿಸುವುದನ್ನು ನಿಷೇಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...