Homeಮುಖಪುಟಕೇರಳ | ನವ ವಿವಾಹಿತೆ ಸಾವು ಪ್ರಕರಣ : ಪತಿ ಬಂಧನ

ಕೇರಳ | ನವ ವಿವಾಹಿತೆ ಸಾವು ಪ್ರಕರಣ : ಪತಿ ಬಂಧನ

ಮದುವೆಯಾಗಿ ತಿಂಗಳು ಕಳೆಯುವುದೊರಳಗೆ 'ಮೈ ಬಣ್ಣ' ಮುಂದಿಟ್ಟು ಕಿರುಕುಳ ಆರೋಪ

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯ ಕೊಂಡೋಟ್ಟಿಯಲ್ಲಿ ನವ ವಿವಾಹಿತೆ ಶಹಾನಾ ಮುಮ್ತಾಝ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಕೆಯ ಪತಿ ಅಬ್ದುಲ್ ವಾಹಿದ್‌ನನ್ನು ಪೊಲೀಸರು ಸೋಮವಾರ (ಜ.20) ಬಂಧಿಸಿದ್ದಾರೆ.

ತಾನು ಕೆಲಸ ಮಾಡುತ್ತಿದ್ದ ಮಧ್ಯಪ್ರಾಚ್ಯದಿಂದ ಊರಿಗೆ ವಾಪಾಸಾಗುತ್ತಿದ್ದ ಅಬ್ದುಲ್ ವಾಹಿದ್‌ನನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಸೆರೆ ಹಿಡಿದಿದ್ದಾರೆ.

ಬಿಎಸ್ಸಿ ಮ್ಯಾಥ್‌ಮ್ಯಾಟಿಕ್ಸ್ ವಿದ್ಯಾರ್ಥಿನಿಯಾಗಿದ್ದ 19 ವರ್ಷದ ಶಹಾನಾ ಮತ್ತು ಯುಎಇಯಲ್ಲಿ ಉದ್ಯೋಗದಲ್ಲಿದ್ದ 25 ವರ್ಷದ ಅಬ್ದುಲ್ ವಾಹಿದ್ ವಿವಾಹ ಮೇ 27, 2024ರಲ್ಲಿ ನಡೆದಿತ್ತು. ಮದುವೆಯಾಗಿ 22 ದಿನದಲ್ಲಿ ವಾಹಿದ್ ಯುಎಇಗೆ ತೆರಳಿದ್ದ.

“ಯುಎಇಗೆ ಹೋದ ಬಳಿಕ ವಾಹಿದ್ ಪತ್ನಿ ಶಹಾನಾಳನ್ನು ನಿರ್ಲಕ್ಷ್ಯ ಮಾಡುತ್ತಿದ್ದ. ಆಕೆ ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಆತನೂ ಕರೆ ಮಾಡುತ್ತಿರಲಿಲ್ಲ. “ನೀನು ಕಪ್ಪಗಿದ್ದೀಯ, ಇಂಗ್ಲಿಷ್ ಮಾತನಾಡೋಕೆ ಬರಲ್ಲ” ಎಂದು ಅವಮಾನಿಸುತ್ತಿದ್ದ. ಈ ವಿಚಾರವನ್ನು ಶಹಾನಾ ತನ್ನ ಅತ್ತೆಯ ಬಳಿ ಹೇಳಿದಾಗ, ಅವರೂ ಜಾಸ್ತಿ ತಲೆ ಕೆಡಿಸಿಕೊಂಡಿಲ್ಲ. ಬದಲಾಗಿ, “ಮಗ ವಾಹಿದ್‌ಗೆ ನಿನಗಿಂತ ಬುದ್ದಿವಂತೆ ಮತ್ತು ಸುಂದರವಾದ ಸಂಗಾತಿ ಸಿಗಬೇಕಿತ್ತು” ಎಂದು ನಿಂದಿಸಿದ್ದಾರೆ. ಈ ಕಾರಣಕ್ಕೆ ಮನೊಂದು ಶಹಾನಾ ಸಾವಿಗೆ ಶರಣಾಗಿದ್ದಾಳೆ” ಎಂದು ಆಕೆಯ ಚಿಕ್ಕಪ್ಪ ಅಬ್ದುಲ್ ಸಲಾಂ ಆರೋಪಿಸಿದ್ದಾರೆ.

ಜನವರಿ 14, 2025ರಂದು ಕೊಂಡೋಟ್ಟಿಯ ಪತಿ ವಾಹಿದ್ ಮನೆಯಲ್ಲಿ ಶಹಾನಾ ಶವವಾಗಿ ಪತ್ತೆಯಾಗಿದ್ದಾರೆ. ಪತಿ ಮತ್ತು ಆತನ ಕುಟುಂಬಸ್ಥರ ಕಿರುಕುಳ ಶಹಾನಾ ಸಾವಿಗೆ ಕಾರಣ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಹಾನಾ ಸಾವನ್ನಪ್ಪಿದ ದಿನದಂದೇ ಕೊಂಡೋಟ್ಟಿ ಪೊಲೀಸರು ಪತಿ ಅಬ್ದುಲ್ ವಾಹಿದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪತ್ನಿಯ ಮೇಲಿನ ದೌರ್ಜನ್ಯದ ಆರೋಪ ಹೊರಿಸಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ಇದಕ್ಕೂ ಮೊದಲು, ಕೇರಳ ಮಹಿಳಾ ಆಯೋಗವು ಶಹಾನಾ ಸಾವಿನ ಬಗ್ಗೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿತ್ತು. ಆಯೋಗದ ಅಧ್ಯಕ್ಷೆ ಅಡ್ವೊಕೇಟ್ ಪಿ ಸತೀದೇವಿ ಅವರು ಪ್ರಕರಣ ದಾಖಲಿಸಿಕೊಂಡು ವರದಿ ಸಲ್ಲಿಸುವಂತೆ ಆಯೋಗದ ನಿರ್ದೇಶಕರು ಮತ್ತು ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಶಹಾನಾ ಅವರ ಅಂತ್ಯಕ್ರಿಯೆ ಜನವರಿ 15, 2025ರಂದು ನಡೆದಿದೆ. ತನಿಖೆ ಮುಂದುವರೆದಿದ್ದು, ಆಕೆಯ ಕುಟುಂಬಸ್ಥರು ಮಾಡಿರುವ ಆರೋಪಗಳ ಬಗ್ಗೆ ಪೊಲೀಸರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಶಹಾನ ಸಾವು ಆತ್ಮಹತ್ಯೆಯಿಂದ ಆಗಿದೆ ಎಂದು ವರದಿಗಳು ಹೇಳಿವೆ. ಅದು ಆತ್ಮಹತ್ಯೆಯೂ.. ಕೊಲೆಯೂ? ಅಥವಾ ಇನ್ಯಾವುದೇ ಕಾರಣಕ್ಕೆ ಸಾವಾಗಿದೆಯೂ ಇನ್ನೂ ಖಚಿತವಾಗಿಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ನಾವು ಇತ್ಯರ್ಥಕ್ಕೆ ಬರಲು ಸಾಧ್ಯವಿಲ್ಲ. ಹಾಗಾಗಿ, ‘ಆತ್ಮಹತ್ಯೆ’ ಬದಲಾಗಿ ಸುದ್ದಿಯಲ್ಲಿ ‘ಸಾವು’ ಎಂದಷ್ಟೇ ಉಲ್ಲೇಖಿಸಲಾಗಿದೆ. 

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...