Homeಮುಖಪುಟಕೇರಳ | ನವ ವಿವಾಹಿತೆ ಸಾವು ಪ್ರಕರಣ : ಪತಿ ಬಂಧನ

ಕೇರಳ | ನವ ವಿವಾಹಿತೆ ಸಾವು ಪ್ರಕರಣ : ಪತಿ ಬಂಧನ

ಮದುವೆಯಾಗಿ ತಿಂಗಳು ಕಳೆಯುವುದೊರಳಗೆ 'ಮೈ ಬಣ್ಣ' ಮುಂದಿಟ್ಟು ಕಿರುಕುಳ ಆರೋಪ

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯ ಕೊಂಡೋಟ್ಟಿಯಲ್ಲಿ ನವ ವಿವಾಹಿತೆ ಶಹಾನಾ ಮುಮ್ತಾಝ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಕೆಯ ಪತಿ ಅಬ್ದುಲ್ ವಾಹಿದ್‌ನನ್ನು ಪೊಲೀಸರು ಸೋಮವಾರ (ಜ.20) ಬಂಧಿಸಿದ್ದಾರೆ.

ತಾನು ಕೆಲಸ ಮಾಡುತ್ತಿದ್ದ ಮಧ್ಯಪ್ರಾಚ್ಯದಿಂದ ಊರಿಗೆ ವಾಪಾಸಾಗುತ್ತಿದ್ದ ಅಬ್ದುಲ್ ವಾಹಿದ್‌ನನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಸೆರೆ ಹಿಡಿದಿದ್ದಾರೆ.

ಬಿಎಸ್ಸಿ ಮ್ಯಾಥ್‌ಮ್ಯಾಟಿಕ್ಸ್ ವಿದ್ಯಾರ್ಥಿನಿಯಾಗಿದ್ದ 19 ವರ್ಷದ ಶಹಾನಾ ಮತ್ತು ಯುಎಇಯಲ್ಲಿ ಉದ್ಯೋಗದಲ್ಲಿದ್ದ 25 ವರ್ಷದ ಅಬ್ದುಲ್ ವಾಹಿದ್ ವಿವಾಹ ಮೇ 27, 2024ರಲ್ಲಿ ನಡೆದಿತ್ತು. ಮದುವೆಯಾಗಿ 22 ದಿನದಲ್ಲಿ ವಾಹಿದ್ ಯುಎಇಗೆ ತೆರಳಿದ್ದ.

“ಯುಎಇಗೆ ಹೋದ ಬಳಿಕ ವಾಹಿದ್ ಪತ್ನಿ ಶಹಾನಾಳನ್ನು ನಿರ್ಲಕ್ಷ್ಯ ಮಾಡುತ್ತಿದ್ದ. ಆಕೆ ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಆತನೂ ಕರೆ ಮಾಡುತ್ತಿರಲಿಲ್ಲ. “ನೀನು ಕಪ್ಪಗಿದ್ದೀಯ, ಇಂಗ್ಲಿಷ್ ಮಾತನಾಡೋಕೆ ಬರಲ್ಲ” ಎಂದು ಅವಮಾನಿಸುತ್ತಿದ್ದ. ಈ ವಿಚಾರವನ್ನು ಶಹಾನಾ ತನ್ನ ಅತ್ತೆಯ ಬಳಿ ಹೇಳಿದಾಗ, ಅವರೂ ಜಾಸ್ತಿ ತಲೆ ಕೆಡಿಸಿಕೊಂಡಿಲ್ಲ. ಬದಲಾಗಿ, “ಮಗ ವಾಹಿದ್‌ಗೆ ನಿನಗಿಂತ ಬುದ್ದಿವಂತೆ ಮತ್ತು ಸುಂದರವಾದ ಸಂಗಾತಿ ಸಿಗಬೇಕಿತ್ತು” ಎಂದು ನಿಂದಿಸಿದ್ದಾರೆ. ಈ ಕಾರಣಕ್ಕೆ ಮನೊಂದು ಶಹಾನಾ ಸಾವಿಗೆ ಶರಣಾಗಿದ್ದಾಳೆ” ಎಂದು ಆಕೆಯ ಚಿಕ್ಕಪ್ಪ ಅಬ್ದುಲ್ ಸಲಾಂ ಆರೋಪಿಸಿದ್ದಾರೆ.

ಜನವರಿ 14, 2025ರಂದು ಕೊಂಡೋಟ್ಟಿಯ ಪತಿ ವಾಹಿದ್ ಮನೆಯಲ್ಲಿ ಶಹಾನಾ ಶವವಾಗಿ ಪತ್ತೆಯಾಗಿದ್ದಾರೆ. ಪತಿ ಮತ್ತು ಆತನ ಕುಟುಂಬಸ್ಥರ ಕಿರುಕುಳ ಶಹಾನಾ ಸಾವಿಗೆ ಕಾರಣ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಹಾನಾ ಸಾವನ್ನಪ್ಪಿದ ದಿನದಂದೇ ಕೊಂಡೋಟ್ಟಿ ಪೊಲೀಸರು ಪತಿ ಅಬ್ದುಲ್ ವಾಹಿದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪತ್ನಿಯ ಮೇಲಿನ ದೌರ್ಜನ್ಯದ ಆರೋಪ ಹೊರಿಸಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ಇದಕ್ಕೂ ಮೊದಲು, ಕೇರಳ ಮಹಿಳಾ ಆಯೋಗವು ಶಹಾನಾ ಸಾವಿನ ಬಗ್ಗೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿತ್ತು. ಆಯೋಗದ ಅಧ್ಯಕ್ಷೆ ಅಡ್ವೊಕೇಟ್ ಪಿ ಸತೀದೇವಿ ಅವರು ಪ್ರಕರಣ ದಾಖಲಿಸಿಕೊಂಡು ವರದಿ ಸಲ್ಲಿಸುವಂತೆ ಆಯೋಗದ ನಿರ್ದೇಶಕರು ಮತ್ತು ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಶಹಾನಾ ಅವರ ಅಂತ್ಯಕ್ರಿಯೆ ಜನವರಿ 15, 2025ರಂದು ನಡೆದಿದೆ. ತನಿಖೆ ಮುಂದುವರೆದಿದ್ದು, ಆಕೆಯ ಕುಟುಂಬಸ್ಥರು ಮಾಡಿರುವ ಆರೋಪಗಳ ಬಗ್ಗೆ ಪೊಲೀಸರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಶಹಾನ ಸಾವು ಆತ್ಮಹತ್ಯೆಯಿಂದ ಆಗಿದೆ ಎಂದು ವರದಿಗಳು ಹೇಳಿವೆ. ಅದು ಆತ್ಮಹತ್ಯೆಯೂ.. ಕೊಲೆಯೂ? ಅಥವಾ ಇನ್ಯಾವುದೇ ಕಾರಣಕ್ಕೆ ಸಾವಾಗಿದೆಯೂ ಇನ್ನೂ ಖಚಿತವಾಗಿಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ನಾವು ಇತ್ಯರ್ಥಕ್ಕೆ ಬರಲು ಸಾಧ್ಯವಿಲ್ಲ. ಹಾಗಾಗಿ, ‘ಆತ್ಮಹತ್ಯೆ’ ಬದಲಾಗಿ ಸುದ್ದಿಯಲ್ಲಿ ‘ಸಾವು’ ಎಂದಷ್ಟೇ ಉಲ್ಲೇಖಿಸಲಾಗಿದೆ. 

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...