Homeಮುಖಪುಟಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -
- Advertisement -

ಕೇರಳ ಕೊರೊನಾ ಸೋಂಕಿನ ವಿರುದ್ದ ಹೊಸ ಸಾಧನೆ ಮಾಡಿದೆ. ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಕೊರೊನಾ ಪತ್ತೆಯಾಗಿಲ್ಲ. ಆ ಮೂಲಕ ಕೇರಳ ಈ ದಾಖಲೆಯನ್ನು ಎರಡನೇ ಬಾರಿಗೆ ಮಾಡಿದೆ. ಈ ಹಿಂದೆ ಮಾರ್ಚ್ 3 ಕ್ಕೆ ಸಹ ಯಾವುದೇ ಪ್ರಕರಣಗಳು ವರದಿಯಾಗಿರಲಿಲ್ಲ.

ಕೇರಳದಲ್ಲಿ ಭಾನುವಾರ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಮಾರ್ಚ್ 3 ರ ನಂತರ ಇದು ಎರಡನೇ ಬಾರಿಯಾಗಿದ್ದು, ಪಥನಂತಿಟ್ಟ ಜಿಲ್ಲೆಗೆ ಇಟಲಿಯಿಂದ ಹಿಂದಿರುಗಿದವರೊಬ್ಬರ ಕುಟುಂಬದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾದ ಮೇ 1 ರ ನಂತರ ಕೇರಳದಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಿಟ್ಟಿನಲ್ಲಿ ಕೇರಳದ್ದು ದಾಖಲೆ ಎಂದೇ ಹೇಳಬಹುದು. ಅತಿ ಹೆಚ್ಚು ಜನರನ್ನು ಗುಣಮುಖರನ್ನಾಗಿ ಮಾಡಿರುವ ಸಾಧನೆ ಈ ರಾಜ್ಯದ್ದಾಗಿದೆ. ಇದರ ಹಿಂದಿರುವ ಅಲ್ಲಿನ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಯ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಆದರೂ ಕೇರಳವನ್ನು ಕಾಲೆಳೆಯುವವರ ಸಂಖ್ಯೆಯೇನು ಕಡಿಮೆಯಿಲ್ಲ. ಕರ್ನಾಟಕದ ಮೂಲದ ದೆಹಲಿ ನಿವಾಸಿ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಬಿ.ಎಲ್‌ ಸಂತೋಷ್‌ರವರು ಏಪ್ರಿಲ್‌ 29 ರಂದು ಟ್ವೀಟ್‌ ಮಾಡಿ “ಕೇರಳ ರೆಡ್‌ ಝೋನ್‌ನತ್ತ ದಾಪುಗಾಲಿಡುತ್ತಿದೆ. ಇಡುಕ್ಕಿ, ಕೊಟ್ಟಾಯಂ ಮತ್ತು ಕೊಲ್ಲಂನಲ್ಲಿ ಹೊಸ ಪ್ರಕರಣಗಳು ದಾಖಲಾಗಿವೆ. 20 ಸಾವಿರ ಕೋಟಿ ಪ್ಯಾಕೇಜ್‌ ಗಾಳಿಗೆ ತೂರಿಹೋಗಿದೆ. ಹಾಗಾಗಿ ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ಹಾಕುತ್ತಿರುವ ಮೊದಲ ರಾಜ್ಯ ಎಂದು ಟೀಕಿಸಿದ್ದರು.

ಅವರ ಮತ್ತೊಂದು ಟ್ವೀಟ್‌ನಲ್ಲಿ “ನಾವು ಬಿಲ್ವಾಲ ಮಾದರಿ, ಕೇರಳ ಮಾದರಿ, ಪ್ರಪಂಚದ ಬೆಸ್ಟ್‌ ಸಿಎಂ ಎಂದು ಚರ್ಚಿಸುತ್ತಿರುವಾಗಲೇ ಹಿಮಾಚಲ ಪ್ರದೇಶ ಸಾಧನೆ ಮಾಡಿದೆ. ಕೇವಲ 08 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ ಎಂದು ಹಿಮಾಚಲ ಪ್ರದೇಶವನ್ನು ಹೊಗಳಿದ್ದರು.

ಆದರೆ ಕೇರಳ ಈಗ ಸತತ ಎರಡು ದಿನದಿಂದ ಒಂದೂ ಪ್ರಕರಣಗಳನ್ನು ದಾಖಲಿಸಿದೆ ಸಾಧನೆ ಮೆರೆದಿದ್ದರೂ ಬಿ.ಎಲ್ ಸಂತೋಷ್‌ ಯಾವುದೇ ಟ್ವೀಟ್‌ ಮಾಡಿಲ್ಲ.

ಇನ್ನು ಕೇರಳದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ 80 ಹಾಟ್‌ಸ್ಪಾಟ್‌ಗಳ ಪಟ್ಟಿಗೆ ಇನ್ನೂ ನಾಲ್ಕು ಹಾಟ್‌ಸ್ಪಾಟ್‌ಗಳನ್ನು ಸೇರಿಸಲಾಗಿದೆ. ಮನಂತವಾಡಿ ಪುರಸಭೆಯನ್ನು ಹಾಟ್‌ಸ್ಪಾಟ್ ಎಂದು ಹೆಸರಿಸಲಾಗಿದೆ. ಕೇರಳದಲ್ಲಿ ಹಾಟ್‌ಸ್ಪಾಟ್ ಎಂದು ಮೊದಲು ಗುರುತಿಸಿದ ವಯನಾಡ್‌ನಲ್ಲಿ ಸುಮಾರು ಒಂದು ತಿಂಗಳ ನಂತರ ಮೇ 2 ರಂದು ಒಂದು ಕೊರೊನಾ ಪ್ರಕರಣ ದಾಖಲಾಗಿದೆ. ಸಕಾರಾತ್ಮಕ ಪ್ರಕರಣವನ್ನು ಕಂಡಿತು.

ಸದ್ಯಕ್ಕೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದ ಎರ್ನಾಕುಲಂ ಜಿಲ್ಲೆಯ ಎಡಕಟ್ಟುವಾಯಲ್ ಮತ್ತು ಮಂಜಲ್ಲೂರು ಪಂಚಾಯತುಗಳನ್ನು ಹೊಸ ಹಾಟ್‌ಸ್ಪಾಟ್‌ಗಳೆಂದು ಗುರುತಿಸಲಾಗಿದೆ. ಎಡಕ್ಕಟ್ಟುವಾಯಲ್ ಪಂಚಾಯತಿನಲ್ಲಿ ನಾಲ್ವರು ಕೊರೊನಾ ಶಂಕಿತ ವ್ಯಕ್ತಿಗಳು ಭಾನುವಾರ ನೆಗೆಟಿವ್ ಪರೀಕ್ಷೆ ನಡೆಸಿದ್ದರು. ಇವರೆಡು ಪಂಚಾಯತುಗಳು ಇಡುಕ್ಕಿ ಜಿಲ್ಲೆಯ ಗಡಿಯಾಗಿರುವ ಕಾರಣ ಎರಡೂ ಪಂಚಾಯಿತಿಗಳನ್ನು ಹಾಟ್‌ಸ್ಪಾಟ್‌ಗಳಾಗಿ ಗೊತ್ತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಈಗಾಗಲೇ ಗೋವಾ ಹಾಗೂ ಈಶಾನ್ಯ ಭಾರತದ ಐದು ರಾಜ್ಯಗಳು ಕೊರೊನಾ ಮುಕ್ತ ರಾಜ್ಯಗಳು ಎಂದು ಘೋಷಸಿವೆ. ದೇಶದಲ್ಲಿ ಮೊದಲ ಭಾರಿಗೆ ಕೇರಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿ ಅವರು ಗುಣಮುಖರಾಗಿದ್ದರು. ನಂತರದಲ್ಲಿ ಕೇರಳವೂ ಭಾರತದಲ್ಲೇ ಹೆಚ್ಚಿನ ಕೊರೊನಾ ಸೋಂಕಿತರನ್ನು ಹೊಂದಿದ್ದ ರಾಜ್ಯವಾಗಿತ್ತಾದರೂ ಈಗ ಆಶ್ಚರ್ಯಕರ ರೀತಿಯಲ್ಲಿ ಕೊರೊನಾವನ್ನು ನಿಯಂತ್ರಣ ಮಾಡುತ್ತಿದೆ.


ಇದನ್ನೂ ಓದಿ: ಕೇರಳ ಸೇಫ್ ಎಂದು ಕೇರಳದಲ್ಲಿ ಉಳಿಯಲು ಕೋರ್ಟ್ ಮೊರೆ ಹೋದ ಅಮೆರಿಕಾ ಪ್ರಜೆ


ವಿಡಿಯೋ ನೋಡಿ: ಕೊರೊನಾ ಸಮಯದಲ್ಲಿ ಮಿಡಿಯಾಗಳು ಏನು ಮಾಡುತ್ತಿದ್ದವು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...