Homeಮುಖಪುಟಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -
- Advertisement -

ಕೇರಳ ಕೊರೊನಾ ಸೋಂಕಿನ ವಿರುದ್ದ ಹೊಸ ಸಾಧನೆ ಮಾಡಿದೆ. ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಕೊರೊನಾ ಪತ್ತೆಯಾಗಿಲ್ಲ. ಆ ಮೂಲಕ ಕೇರಳ ಈ ದಾಖಲೆಯನ್ನು ಎರಡನೇ ಬಾರಿಗೆ ಮಾಡಿದೆ. ಈ ಹಿಂದೆ ಮಾರ್ಚ್ 3 ಕ್ಕೆ ಸಹ ಯಾವುದೇ ಪ್ರಕರಣಗಳು ವರದಿಯಾಗಿರಲಿಲ್ಲ.

ಕೇರಳದಲ್ಲಿ ಭಾನುವಾರ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಮಾರ್ಚ್ 3 ರ ನಂತರ ಇದು ಎರಡನೇ ಬಾರಿಯಾಗಿದ್ದು, ಪಥನಂತಿಟ್ಟ ಜಿಲ್ಲೆಗೆ ಇಟಲಿಯಿಂದ ಹಿಂದಿರುಗಿದವರೊಬ್ಬರ ಕುಟುಂಬದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾದ ಮೇ 1 ರ ನಂತರ ಕೇರಳದಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಿಟ್ಟಿನಲ್ಲಿ ಕೇರಳದ್ದು ದಾಖಲೆ ಎಂದೇ ಹೇಳಬಹುದು. ಅತಿ ಹೆಚ್ಚು ಜನರನ್ನು ಗುಣಮುಖರನ್ನಾಗಿ ಮಾಡಿರುವ ಸಾಧನೆ ಈ ರಾಜ್ಯದ್ದಾಗಿದೆ. ಇದರ ಹಿಂದಿರುವ ಅಲ್ಲಿನ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಯ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಆದರೂ ಕೇರಳವನ್ನು ಕಾಲೆಳೆಯುವವರ ಸಂಖ್ಯೆಯೇನು ಕಡಿಮೆಯಿಲ್ಲ. ಕರ್ನಾಟಕದ ಮೂಲದ ದೆಹಲಿ ನಿವಾಸಿ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಬಿ.ಎಲ್‌ ಸಂತೋಷ್‌ರವರು ಏಪ್ರಿಲ್‌ 29 ರಂದು ಟ್ವೀಟ್‌ ಮಾಡಿ “ಕೇರಳ ರೆಡ್‌ ಝೋನ್‌ನತ್ತ ದಾಪುಗಾಲಿಡುತ್ತಿದೆ. ಇಡುಕ್ಕಿ, ಕೊಟ್ಟಾಯಂ ಮತ್ತು ಕೊಲ್ಲಂನಲ್ಲಿ ಹೊಸ ಪ್ರಕರಣಗಳು ದಾಖಲಾಗಿವೆ. 20 ಸಾವಿರ ಕೋಟಿ ಪ್ಯಾಕೇಜ್‌ ಗಾಳಿಗೆ ತೂರಿಹೋಗಿದೆ. ಹಾಗಾಗಿ ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ಹಾಕುತ್ತಿರುವ ಮೊದಲ ರಾಜ್ಯ ಎಂದು ಟೀಕಿಸಿದ್ದರು.

ಅವರ ಮತ್ತೊಂದು ಟ್ವೀಟ್‌ನಲ್ಲಿ “ನಾವು ಬಿಲ್ವಾಲ ಮಾದರಿ, ಕೇರಳ ಮಾದರಿ, ಪ್ರಪಂಚದ ಬೆಸ್ಟ್‌ ಸಿಎಂ ಎಂದು ಚರ್ಚಿಸುತ್ತಿರುವಾಗಲೇ ಹಿಮಾಚಲ ಪ್ರದೇಶ ಸಾಧನೆ ಮಾಡಿದೆ. ಕೇವಲ 08 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ ಎಂದು ಹಿಮಾಚಲ ಪ್ರದೇಶವನ್ನು ಹೊಗಳಿದ್ದರು.

ಆದರೆ ಕೇರಳ ಈಗ ಸತತ ಎರಡು ದಿನದಿಂದ ಒಂದೂ ಪ್ರಕರಣಗಳನ್ನು ದಾಖಲಿಸಿದೆ ಸಾಧನೆ ಮೆರೆದಿದ್ದರೂ ಬಿ.ಎಲ್ ಸಂತೋಷ್‌ ಯಾವುದೇ ಟ್ವೀಟ್‌ ಮಾಡಿಲ್ಲ.

ಇನ್ನು ಕೇರಳದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ 80 ಹಾಟ್‌ಸ್ಪಾಟ್‌ಗಳ ಪಟ್ಟಿಗೆ ಇನ್ನೂ ನಾಲ್ಕು ಹಾಟ್‌ಸ್ಪಾಟ್‌ಗಳನ್ನು ಸೇರಿಸಲಾಗಿದೆ. ಮನಂತವಾಡಿ ಪುರಸಭೆಯನ್ನು ಹಾಟ್‌ಸ್ಪಾಟ್ ಎಂದು ಹೆಸರಿಸಲಾಗಿದೆ. ಕೇರಳದಲ್ಲಿ ಹಾಟ್‌ಸ್ಪಾಟ್ ಎಂದು ಮೊದಲು ಗುರುತಿಸಿದ ವಯನಾಡ್‌ನಲ್ಲಿ ಸುಮಾರು ಒಂದು ತಿಂಗಳ ನಂತರ ಮೇ 2 ರಂದು ಒಂದು ಕೊರೊನಾ ಪ್ರಕರಣ ದಾಖಲಾಗಿದೆ. ಸಕಾರಾತ್ಮಕ ಪ್ರಕರಣವನ್ನು ಕಂಡಿತು.

ಸದ್ಯಕ್ಕೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದ ಎರ್ನಾಕುಲಂ ಜಿಲ್ಲೆಯ ಎಡಕಟ್ಟುವಾಯಲ್ ಮತ್ತು ಮಂಜಲ್ಲೂರು ಪಂಚಾಯತುಗಳನ್ನು ಹೊಸ ಹಾಟ್‌ಸ್ಪಾಟ್‌ಗಳೆಂದು ಗುರುತಿಸಲಾಗಿದೆ. ಎಡಕ್ಕಟ್ಟುವಾಯಲ್ ಪಂಚಾಯತಿನಲ್ಲಿ ನಾಲ್ವರು ಕೊರೊನಾ ಶಂಕಿತ ವ್ಯಕ್ತಿಗಳು ಭಾನುವಾರ ನೆಗೆಟಿವ್ ಪರೀಕ್ಷೆ ನಡೆಸಿದ್ದರು. ಇವರೆಡು ಪಂಚಾಯತುಗಳು ಇಡುಕ್ಕಿ ಜಿಲ್ಲೆಯ ಗಡಿಯಾಗಿರುವ ಕಾರಣ ಎರಡೂ ಪಂಚಾಯಿತಿಗಳನ್ನು ಹಾಟ್‌ಸ್ಪಾಟ್‌ಗಳಾಗಿ ಗೊತ್ತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಈಗಾಗಲೇ ಗೋವಾ ಹಾಗೂ ಈಶಾನ್ಯ ಭಾರತದ ಐದು ರಾಜ್ಯಗಳು ಕೊರೊನಾ ಮುಕ್ತ ರಾಜ್ಯಗಳು ಎಂದು ಘೋಷಸಿವೆ. ದೇಶದಲ್ಲಿ ಮೊದಲ ಭಾರಿಗೆ ಕೇರಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿ ಅವರು ಗುಣಮುಖರಾಗಿದ್ದರು. ನಂತರದಲ್ಲಿ ಕೇರಳವೂ ಭಾರತದಲ್ಲೇ ಹೆಚ್ಚಿನ ಕೊರೊನಾ ಸೋಂಕಿತರನ್ನು ಹೊಂದಿದ್ದ ರಾಜ್ಯವಾಗಿತ್ತಾದರೂ ಈಗ ಆಶ್ಚರ್ಯಕರ ರೀತಿಯಲ್ಲಿ ಕೊರೊನಾವನ್ನು ನಿಯಂತ್ರಣ ಮಾಡುತ್ತಿದೆ.


ಇದನ್ನೂ ಓದಿ: ಕೇರಳ ಸೇಫ್ ಎಂದು ಕೇರಳದಲ್ಲಿ ಉಳಿಯಲು ಕೋರ್ಟ್ ಮೊರೆ ಹೋದ ಅಮೆರಿಕಾ ಪ್ರಜೆ


ವಿಡಿಯೋ ನೋಡಿ: ಕೊರೊನಾ ಸಮಯದಲ್ಲಿ ಮಿಡಿಯಾಗಳು ಏನು ಮಾಡುತ್ತಿದ್ದವು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...