Homeಮುಖಪುಟಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -
- Advertisement -

ಕೇರಳ ಕೊರೊನಾ ಸೋಂಕಿನ ವಿರುದ್ದ ಹೊಸ ಸಾಧನೆ ಮಾಡಿದೆ. ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಕೊರೊನಾ ಪತ್ತೆಯಾಗಿಲ್ಲ. ಆ ಮೂಲಕ ಕೇರಳ ಈ ದಾಖಲೆಯನ್ನು ಎರಡನೇ ಬಾರಿಗೆ ಮಾಡಿದೆ. ಈ ಹಿಂದೆ ಮಾರ್ಚ್ 3 ಕ್ಕೆ ಸಹ ಯಾವುದೇ ಪ್ರಕರಣಗಳು ವರದಿಯಾಗಿರಲಿಲ್ಲ.

ಕೇರಳದಲ್ಲಿ ಭಾನುವಾರ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಮಾರ್ಚ್ 3 ರ ನಂತರ ಇದು ಎರಡನೇ ಬಾರಿಯಾಗಿದ್ದು, ಪಥನಂತಿಟ್ಟ ಜಿಲ್ಲೆಗೆ ಇಟಲಿಯಿಂದ ಹಿಂದಿರುಗಿದವರೊಬ್ಬರ ಕುಟುಂಬದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾದ ಮೇ 1 ರ ನಂತರ ಕೇರಳದಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಿಟ್ಟಿನಲ್ಲಿ ಕೇರಳದ್ದು ದಾಖಲೆ ಎಂದೇ ಹೇಳಬಹುದು. ಅತಿ ಹೆಚ್ಚು ಜನರನ್ನು ಗುಣಮುಖರನ್ನಾಗಿ ಮಾಡಿರುವ ಸಾಧನೆ ಈ ರಾಜ್ಯದ್ದಾಗಿದೆ. ಇದರ ಹಿಂದಿರುವ ಅಲ್ಲಿನ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಯ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಆದರೂ ಕೇರಳವನ್ನು ಕಾಲೆಳೆಯುವವರ ಸಂಖ್ಯೆಯೇನು ಕಡಿಮೆಯಿಲ್ಲ. ಕರ್ನಾಟಕದ ಮೂಲದ ದೆಹಲಿ ನಿವಾಸಿ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಬಿ.ಎಲ್‌ ಸಂತೋಷ್‌ರವರು ಏಪ್ರಿಲ್‌ 29 ರಂದು ಟ್ವೀಟ್‌ ಮಾಡಿ “ಕೇರಳ ರೆಡ್‌ ಝೋನ್‌ನತ್ತ ದಾಪುಗಾಲಿಡುತ್ತಿದೆ. ಇಡುಕ್ಕಿ, ಕೊಟ್ಟಾಯಂ ಮತ್ತು ಕೊಲ್ಲಂನಲ್ಲಿ ಹೊಸ ಪ್ರಕರಣಗಳು ದಾಖಲಾಗಿವೆ. 20 ಸಾವಿರ ಕೋಟಿ ಪ್ಯಾಕೇಜ್‌ ಗಾಳಿಗೆ ತೂರಿಹೋಗಿದೆ. ಹಾಗಾಗಿ ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ಹಾಕುತ್ತಿರುವ ಮೊದಲ ರಾಜ್ಯ ಎಂದು ಟೀಕಿಸಿದ್ದರು.

ಅವರ ಮತ್ತೊಂದು ಟ್ವೀಟ್‌ನಲ್ಲಿ “ನಾವು ಬಿಲ್ವಾಲ ಮಾದರಿ, ಕೇರಳ ಮಾದರಿ, ಪ್ರಪಂಚದ ಬೆಸ್ಟ್‌ ಸಿಎಂ ಎಂದು ಚರ್ಚಿಸುತ್ತಿರುವಾಗಲೇ ಹಿಮಾಚಲ ಪ್ರದೇಶ ಸಾಧನೆ ಮಾಡಿದೆ. ಕೇವಲ 08 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ ಎಂದು ಹಿಮಾಚಲ ಪ್ರದೇಶವನ್ನು ಹೊಗಳಿದ್ದರು.

ಆದರೆ ಕೇರಳ ಈಗ ಸತತ ಎರಡು ದಿನದಿಂದ ಒಂದೂ ಪ್ರಕರಣಗಳನ್ನು ದಾಖಲಿಸಿದೆ ಸಾಧನೆ ಮೆರೆದಿದ್ದರೂ ಬಿ.ಎಲ್ ಸಂತೋಷ್‌ ಯಾವುದೇ ಟ್ವೀಟ್‌ ಮಾಡಿಲ್ಲ.

ಇನ್ನು ಕೇರಳದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ 80 ಹಾಟ್‌ಸ್ಪಾಟ್‌ಗಳ ಪಟ್ಟಿಗೆ ಇನ್ನೂ ನಾಲ್ಕು ಹಾಟ್‌ಸ್ಪಾಟ್‌ಗಳನ್ನು ಸೇರಿಸಲಾಗಿದೆ. ಮನಂತವಾಡಿ ಪುರಸಭೆಯನ್ನು ಹಾಟ್‌ಸ್ಪಾಟ್ ಎಂದು ಹೆಸರಿಸಲಾಗಿದೆ. ಕೇರಳದಲ್ಲಿ ಹಾಟ್‌ಸ್ಪಾಟ್ ಎಂದು ಮೊದಲು ಗುರುತಿಸಿದ ವಯನಾಡ್‌ನಲ್ಲಿ ಸುಮಾರು ಒಂದು ತಿಂಗಳ ನಂತರ ಮೇ 2 ರಂದು ಒಂದು ಕೊರೊನಾ ಪ್ರಕರಣ ದಾಖಲಾಗಿದೆ. ಸಕಾರಾತ್ಮಕ ಪ್ರಕರಣವನ್ನು ಕಂಡಿತು.

ಸದ್ಯಕ್ಕೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದ ಎರ್ನಾಕುಲಂ ಜಿಲ್ಲೆಯ ಎಡಕಟ್ಟುವಾಯಲ್ ಮತ್ತು ಮಂಜಲ್ಲೂರು ಪಂಚಾಯತುಗಳನ್ನು ಹೊಸ ಹಾಟ್‌ಸ್ಪಾಟ್‌ಗಳೆಂದು ಗುರುತಿಸಲಾಗಿದೆ. ಎಡಕ್ಕಟ್ಟುವಾಯಲ್ ಪಂಚಾಯತಿನಲ್ಲಿ ನಾಲ್ವರು ಕೊರೊನಾ ಶಂಕಿತ ವ್ಯಕ್ತಿಗಳು ಭಾನುವಾರ ನೆಗೆಟಿವ್ ಪರೀಕ್ಷೆ ನಡೆಸಿದ್ದರು. ಇವರೆಡು ಪಂಚಾಯತುಗಳು ಇಡುಕ್ಕಿ ಜಿಲ್ಲೆಯ ಗಡಿಯಾಗಿರುವ ಕಾರಣ ಎರಡೂ ಪಂಚಾಯಿತಿಗಳನ್ನು ಹಾಟ್‌ಸ್ಪಾಟ್‌ಗಳಾಗಿ ಗೊತ್ತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಈಗಾಗಲೇ ಗೋವಾ ಹಾಗೂ ಈಶಾನ್ಯ ಭಾರತದ ಐದು ರಾಜ್ಯಗಳು ಕೊರೊನಾ ಮುಕ್ತ ರಾಜ್ಯಗಳು ಎಂದು ಘೋಷಸಿವೆ. ದೇಶದಲ್ಲಿ ಮೊದಲ ಭಾರಿಗೆ ಕೇರಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿ ಅವರು ಗುಣಮುಖರಾಗಿದ್ದರು. ನಂತರದಲ್ಲಿ ಕೇರಳವೂ ಭಾರತದಲ್ಲೇ ಹೆಚ್ಚಿನ ಕೊರೊನಾ ಸೋಂಕಿತರನ್ನು ಹೊಂದಿದ್ದ ರಾಜ್ಯವಾಗಿತ್ತಾದರೂ ಈಗ ಆಶ್ಚರ್ಯಕರ ರೀತಿಯಲ್ಲಿ ಕೊರೊನಾವನ್ನು ನಿಯಂತ್ರಣ ಮಾಡುತ್ತಿದೆ.


ಇದನ್ನೂ ಓದಿ: ಕೇರಳ ಸೇಫ್ ಎಂದು ಕೇರಳದಲ್ಲಿ ಉಳಿಯಲು ಕೋರ್ಟ್ ಮೊರೆ ಹೋದ ಅಮೆರಿಕಾ ಪ್ರಜೆ


ವಿಡಿಯೋ ನೋಡಿ: ಕೊರೊನಾ ಸಮಯದಲ್ಲಿ ಮಿಡಿಯಾಗಳು ಏನು ಮಾಡುತ್ತಿದ್ದವು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...