Homeಮುಖಪುಟಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -
- Advertisement -

ಕೇರಳ ಕೊರೊನಾ ಸೋಂಕಿನ ವಿರುದ್ದ ಹೊಸ ಸಾಧನೆ ಮಾಡಿದೆ. ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಕೊರೊನಾ ಪತ್ತೆಯಾಗಿಲ್ಲ. ಆ ಮೂಲಕ ಕೇರಳ ಈ ದಾಖಲೆಯನ್ನು ಎರಡನೇ ಬಾರಿಗೆ ಮಾಡಿದೆ. ಈ ಹಿಂದೆ ಮಾರ್ಚ್ 3 ಕ್ಕೆ ಸಹ ಯಾವುದೇ ಪ್ರಕರಣಗಳು ವರದಿಯಾಗಿರಲಿಲ್ಲ.

ಕೇರಳದಲ್ಲಿ ಭಾನುವಾರ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಮಾರ್ಚ್ 3 ರ ನಂತರ ಇದು ಎರಡನೇ ಬಾರಿಯಾಗಿದ್ದು, ಪಥನಂತಿಟ್ಟ ಜಿಲ್ಲೆಗೆ ಇಟಲಿಯಿಂದ ಹಿಂದಿರುಗಿದವರೊಬ್ಬರ ಕುಟುಂಬದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾದ ಮೇ 1 ರ ನಂತರ ಕೇರಳದಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಿಟ್ಟಿನಲ್ಲಿ ಕೇರಳದ್ದು ದಾಖಲೆ ಎಂದೇ ಹೇಳಬಹುದು. ಅತಿ ಹೆಚ್ಚು ಜನರನ್ನು ಗುಣಮುಖರನ್ನಾಗಿ ಮಾಡಿರುವ ಸಾಧನೆ ಈ ರಾಜ್ಯದ್ದಾಗಿದೆ. ಇದರ ಹಿಂದಿರುವ ಅಲ್ಲಿನ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಯ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಆದರೂ ಕೇರಳವನ್ನು ಕಾಲೆಳೆಯುವವರ ಸಂಖ್ಯೆಯೇನು ಕಡಿಮೆಯಿಲ್ಲ. ಕರ್ನಾಟಕದ ಮೂಲದ ದೆಹಲಿ ನಿವಾಸಿ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಬಿ.ಎಲ್‌ ಸಂತೋಷ್‌ರವರು ಏಪ್ರಿಲ್‌ 29 ರಂದು ಟ್ವೀಟ್‌ ಮಾಡಿ “ಕೇರಳ ರೆಡ್‌ ಝೋನ್‌ನತ್ತ ದಾಪುಗಾಲಿಡುತ್ತಿದೆ. ಇಡುಕ್ಕಿ, ಕೊಟ್ಟಾಯಂ ಮತ್ತು ಕೊಲ್ಲಂನಲ್ಲಿ ಹೊಸ ಪ್ರಕರಣಗಳು ದಾಖಲಾಗಿವೆ. 20 ಸಾವಿರ ಕೋಟಿ ಪ್ಯಾಕೇಜ್‌ ಗಾಳಿಗೆ ತೂರಿಹೋಗಿದೆ. ಹಾಗಾಗಿ ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ಹಾಕುತ್ತಿರುವ ಮೊದಲ ರಾಜ್ಯ ಎಂದು ಟೀಕಿಸಿದ್ದರು.

ಅವರ ಮತ್ತೊಂದು ಟ್ವೀಟ್‌ನಲ್ಲಿ “ನಾವು ಬಿಲ್ವಾಲ ಮಾದರಿ, ಕೇರಳ ಮಾದರಿ, ಪ್ರಪಂಚದ ಬೆಸ್ಟ್‌ ಸಿಎಂ ಎಂದು ಚರ್ಚಿಸುತ್ತಿರುವಾಗಲೇ ಹಿಮಾಚಲ ಪ್ರದೇಶ ಸಾಧನೆ ಮಾಡಿದೆ. ಕೇವಲ 08 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ ಎಂದು ಹಿಮಾಚಲ ಪ್ರದೇಶವನ್ನು ಹೊಗಳಿದ್ದರು.

ಆದರೆ ಕೇರಳ ಈಗ ಸತತ ಎರಡು ದಿನದಿಂದ ಒಂದೂ ಪ್ರಕರಣಗಳನ್ನು ದಾಖಲಿಸಿದೆ ಸಾಧನೆ ಮೆರೆದಿದ್ದರೂ ಬಿ.ಎಲ್ ಸಂತೋಷ್‌ ಯಾವುದೇ ಟ್ವೀಟ್‌ ಮಾಡಿಲ್ಲ.

ಇನ್ನು ಕೇರಳದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ 80 ಹಾಟ್‌ಸ್ಪಾಟ್‌ಗಳ ಪಟ್ಟಿಗೆ ಇನ್ನೂ ನಾಲ್ಕು ಹಾಟ್‌ಸ್ಪಾಟ್‌ಗಳನ್ನು ಸೇರಿಸಲಾಗಿದೆ. ಮನಂತವಾಡಿ ಪುರಸಭೆಯನ್ನು ಹಾಟ್‌ಸ್ಪಾಟ್ ಎಂದು ಹೆಸರಿಸಲಾಗಿದೆ. ಕೇರಳದಲ್ಲಿ ಹಾಟ್‌ಸ್ಪಾಟ್ ಎಂದು ಮೊದಲು ಗುರುತಿಸಿದ ವಯನಾಡ್‌ನಲ್ಲಿ ಸುಮಾರು ಒಂದು ತಿಂಗಳ ನಂತರ ಮೇ 2 ರಂದು ಒಂದು ಕೊರೊನಾ ಪ್ರಕರಣ ದಾಖಲಾಗಿದೆ. ಸಕಾರಾತ್ಮಕ ಪ್ರಕರಣವನ್ನು ಕಂಡಿತು.

ಸದ್ಯಕ್ಕೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದ ಎರ್ನಾಕುಲಂ ಜಿಲ್ಲೆಯ ಎಡಕಟ್ಟುವಾಯಲ್ ಮತ್ತು ಮಂಜಲ್ಲೂರು ಪಂಚಾಯತುಗಳನ್ನು ಹೊಸ ಹಾಟ್‌ಸ್ಪಾಟ್‌ಗಳೆಂದು ಗುರುತಿಸಲಾಗಿದೆ. ಎಡಕ್ಕಟ್ಟುವಾಯಲ್ ಪಂಚಾಯತಿನಲ್ಲಿ ನಾಲ್ವರು ಕೊರೊನಾ ಶಂಕಿತ ವ್ಯಕ್ತಿಗಳು ಭಾನುವಾರ ನೆಗೆಟಿವ್ ಪರೀಕ್ಷೆ ನಡೆಸಿದ್ದರು. ಇವರೆಡು ಪಂಚಾಯತುಗಳು ಇಡುಕ್ಕಿ ಜಿಲ್ಲೆಯ ಗಡಿಯಾಗಿರುವ ಕಾರಣ ಎರಡೂ ಪಂಚಾಯಿತಿಗಳನ್ನು ಹಾಟ್‌ಸ್ಪಾಟ್‌ಗಳಾಗಿ ಗೊತ್ತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಈಗಾಗಲೇ ಗೋವಾ ಹಾಗೂ ಈಶಾನ್ಯ ಭಾರತದ ಐದು ರಾಜ್ಯಗಳು ಕೊರೊನಾ ಮುಕ್ತ ರಾಜ್ಯಗಳು ಎಂದು ಘೋಷಸಿವೆ. ದೇಶದಲ್ಲಿ ಮೊದಲ ಭಾರಿಗೆ ಕೇರಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿ ಅವರು ಗುಣಮುಖರಾಗಿದ್ದರು. ನಂತರದಲ್ಲಿ ಕೇರಳವೂ ಭಾರತದಲ್ಲೇ ಹೆಚ್ಚಿನ ಕೊರೊನಾ ಸೋಂಕಿತರನ್ನು ಹೊಂದಿದ್ದ ರಾಜ್ಯವಾಗಿತ್ತಾದರೂ ಈಗ ಆಶ್ಚರ್ಯಕರ ರೀತಿಯಲ್ಲಿ ಕೊರೊನಾವನ್ನು ನಿಯಂತ್ರಣ ಮಾಡುತ್ತಿದೆ.


ಇದನ್ನೂ ಓದಿ: ಕೇರಳ ಸೇಫ್ ಎಂದು ಕೇರಳದಲ್ಲಿ ಉಳಿಯಲು ಕೋರ್ಟ್ ಮೊರೆ ಹೋದ ಅಮೆರಿಕಾ ಪ್ರಜೆ


ವಿಡಿಯೋ ನೋಡಿ: ಕೊರೊನಾ ಸಮಯದಲ್ಲಿ ಮಿಡಿಯಾಗಳು ಏನು ಮಾಡುತ್ತಿದ್ದವು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...