Homeಮುಖಪುಟಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -
- Advertisement -

ಕೇರಳ ಕೊರೊನಾ ಸೋಂಕಿನ ವಿರುದ್ದ ಹೊಸ ಸಾಧನೆ ಮಾಡಿದೆ. ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಕೊರೊನಾ ಪತ್ತೆಯಾಗಿಲ್ಲ. ಆ ಮೂಲಕ ಕೇರಳ ಈ ದಾಖಲೆಯನ್ನು ಎರಡನೇ ಬಾರಿಗೆ ಮಾಡಿದೆ. ಈ ಹಿಂದೆ ಮಾರ್ಚ್ 3 ಕ್ಕೆ ಸಹ ಯಾವುದೇ ಪ್ರಕರಣಗಳು ವರದಿಯಾಗಿರಲಿಲ್ಲ.

ಕೇರಳದಲ್ಲಿ ಭಾನುವಾರ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಮಾರ್ಚ್ 3 ರ ನಂತರ ಇದು ಎರಡನೇ ಬಾರಿಯಾಗಿದ್ದು, ಪಥನಂತಿಟ್ಟ ಜಿಲ್ಲೆಗೆ ಇಟಲಿಯಿಂದ ಹಿಂದಿರುಗಿದವರೊಬ್ಬರ ಕುಟುಂಬದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾದ ಮೇ 1 ರ ನಂತರ ಕೇರಳದಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಿಟ್ಟಿನಲ್ಲಿ ಕೇರಳದ್ದು ದಾಖಲೆ ಎಂದೇ ಹೇಳಬಹುದು. ಅತಿ ಹೆಚ್ಚು ಜನರನ್ನು ಗುಣಮುಖರನ್ನಾಗಿ ಮಾಡಿರುವ ಸಾಧನೆ ಈ ರಾಜ್ಯದ್ದಾಗಿದೆ. ಇದರ ಹಿಂದಿರುವ ಅಲ್ಲಿನ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಯ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಆದರೂ ಕೇರಳವನ್ನು ಕಾಲೆಳೆಯುವವರ ಸಂಖ್ಯೆಯೇನು ಕಡಿಮೆಯಿಲ್ಲ. ಕರ್ನಾಟಕದ ಮೂಲದ ದೆಹಲಿ ನಿವಾಸಿ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಬಿ.ಎಲ್‌ ಸಂತೋಷ್‌ರವರು ಏಪ್ರಿಲ್‌ 29 ರಂದು ಟ್ವೀಟ್‌ ಮಾಡಿ “ಕೇರಳ ರೆಡ್‌ ಝೋನ್‌ನತ್ತ ದಾಪುಗಾಲಿಡುತ್ತಿದೆ. ಇಡುಕ್ಕಿ, ಕೊಟ್ಟಾಯಂ ಮತ್ತು ಕೊಲ್ಲಂನಲ್ಲಿ ಹೊಸ ಪ್ರಕರಣಗಳು ದಾಖಲಾಗಿವೆ. 20 ಸಾವಿರ ಕೋಟಿ ಪ್ಯಾಕೇಜ್‌ ಗಾಳಿಗೆ ತೂರಿಹೋಗಿದೆ. ಹಾಗಾಗಿ ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ಹಾಕುತ್ತಿರುವ ಮೊದಲ ರಾಜ್ಯ ಎಂದು ಟೀಕಿಸಿದ್ದರು.

ಅವರ ಮತ್ತೊಂದು ಟ್ವೀಟ್‌ನಲ್ಲಿ “ನಾವು ಬಿಲ್ವಾಲ ಮಾದರಿ, ಕೇರಳ ಮಾದರಿ, ಪ್ರಪಂಚದ ಬೆಸ್ಟ್‌ ಸಿಎಂ ಎಂದು ಚರ್ಚಿಸುತ್ತಿರುವಾಗಲೇ ಹಿಮಾಚಲ ಪ್ರದೇಶ ಸಾಧನೆ ಮಾಡಿದೆ. ಕೇವಲ 08 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ ಎಂದು ಹಿಮಾಚಲ ಪ್ರದೇಶವನ್ನು ಹೊಗಳಿದ್ದರು.

ಆದರೆ ಕೇರಳ ಈಗ ಸತತ ಎರಡು ದಿನದಿಂದ ಒಂದೂ ಪ್ರಕರಣಗಳನ್ನು ದಾಖಲಿಸಿದೆ ಸಾಧನೆ ಮೆರೆದಿದ್ದರೂ ಬಿ.ಎಲ್ ಸಂತೋಷ್‌ ಯಾವುದೇ ಟ್ವೀಟ್‌ ಮಾಡಿಲ್ಲ.

ಇನ್ನು ಕೇರಳದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ 80 ಹಾಟ್‌ಸ್ಪಾಟ್‌ಗಳ ಪಟ್ಟಿಗೆ ಇನ್ನೂ ನಾಲ್ಕು ಹಾಟ್‌ಸ್ಪಾಟ್‌ಗಳನ್ನು ಸೇರಿಸಲಾಗಿದೆ. ಮನಂತವಾಡಿ ಪುರಸಭೆಯನ್ನು ಹಾಟ್‌ಸ್ಪಾಟ್ ಎಂದು ಹೆಸರಿಸಲಾಗಿದೆ. ಕೇರಳದಲ್ಲಿ ಹಾಟ್‌ಸ್ಪಾಟ್ ಎಂದು ಮೊದಲು ಗುರುತಿಸಿದ ವಯನಾಡ್‌ನಲ್ಲಿ ಸುಮಾರು ಒಂದು ತಿಂಗಳ ನಂತರ ಮೇ 2 ರಂದು ಒಂದು ಕೊರೊನಾ ಪ್ರಕರಣ ದಾಖಲಾಗಿದೆ. ಸಕಾರಾತ್ಮಕ ಪ್ರಕರಣವನ್ನು ಕಂಡಿತು.

ಸದ್ಯಕ್ಕೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದ ಎರ್ನಾಕುಲಂ ಜಿಲ್ಲೆಯ ಎಡಕಟ್ಟುವಾಯಲ್ ಮತ್ತು ಮಂಜಲ್ಲೂರು ಪಂಚಾಯತುಗಳನ್ನು ಹೊಸ ಹಾಟ್‌ಸ್ಪಾಟ್‌ಗಳೆಂದು ಗುರುತಿಸಲಾಗಿದೆ. ಎಡಕ್ಕಟ್ಟುವಾಯಲ್ ಪಂಚಾಯತಿನಲ್ಲಿ ನಾಲ್ವರು ಕೊರೊನಾ ಶಂಕಿತ ವ್ಯಕ್ತಿಗಳು ಭಾನುವಾರ ನೆಗೆಟಿವ್ ಪರೀಕ್ಷೆ ನಡೆಸಿದ್ದರು. ಇವರೆಡು ಪಂಚಾಯತುಗಳು ಇಡುಕ್ಕಿ ಜಿಲ್ಲೆಯ ಗಡಿಯಾಗಿರುವ ಕಾರಣ ಎರಡೂ ಪಂಚಾಯಿತಿಗಳನ್ನು ಹಾಟ್‌ಸ್ಪಾಟ್‌ಗಳಾಗಿ ಗೊತ್ತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಈಗಾಗಲೇ ಗೋವಾ ಹಾಗೂ ಈಶಾನ್ಯ ಭಾರತದ ಐದು ರಾಜ್ಯಗಳು ಕೊರೊನಾ ಮುಕ್ತ ರಾಜ್ಯಗಳು ಎಂದು ಘೋಷಸಿವೆ. ದೇಶದಲ್ಲಿ ಮೊದಲ ಭಾರಿಗೆ ಕೇರಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿ ಅವರು ಗುಣಮುಖರಾಗಿದ್ದರು. ನಂತರದಲ್ಲಿ ಕೇರಳವೂ ಭಾರತದಲ್ಲೇ ಹೆಚ್ಚಿನ ಕೊರೊನಾ ಸೋಂಕಿತರನ್ನು ಹೊಂದಿದ್ದ ರಾಜ್ಯವಾಗಿತ್ತಾದರೂ ಈಗ ಆಶ್ಚರ್ಯಕರ ರೀತಿಯಲ್ಲಿ ಕೊರೊನಾವನ್ನು ನಿಯಂತ್ರಣ ಮಾಡುತ್ತಿದೆ.


ಇದನ್ನೂ ಓದಿ: ಕೇರಳ ಸೇಫ್ ಎಂದು ಕೇರಳದಲ್ಲಿ ಉಳಿಯಲು ಕೋರ್ಟ್ ಮೊರೆ ಹೋದ ಅಮೆರಿಕಾ ಪ್ರಜೆ


ವಿಡಿಯೋ ನೋಡಿ: ಕೊರೊನಾ ಸಮಯದಲ್ಲಿ ಮಿಡಿಯಾಗಳು ಏನು ಮಾಡುತ್ತಿದ್ದವು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...