Homeಮುಖಪುಟಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳ ಸಾಧನೆ: ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣವಿಲ್ಲ!!

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -
- Advertisement -

ಕೇರಳ ಕೊರೊನಾ ಸೋಂಕಿನ ವಿರುದ್ದ ಹೊಸ ಸಾಧನೆ ಮಾಡಿದೆ. ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಕೊರೊನಾ ಪತ್ತೆಯಾಗಿಲ್ಲ. ಆ ಮೂಲಕ ಕೇರಳ ಈ ದಾಖಲೆಯನ್ನು ಎರಡನೇ ಬಾರಿಗೆ ಮಾಡಿದೆ. ಈ ಹಿಂದೆ ಮಾರ್ಚ್ 3 ಕ್ಕೆ ಸಹ ಯಾವುದೇ ಪ್ರಕರಣಗಳು ವರದಿಯಾಗಿರಲಿಲ್ಲ.

ಕೇರಳದಲ್ಲಿ ಭಾನುವಾರ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಮಾರ್ಚ್ 3 ರ ನಂತರ ಇದು ಎರಡನೇ ಬಾರಿಯಾಗಿದ್ದು, ಪಥನಂತಿಟ್ಟ ಜಿಲ್ಲೆಗೆ ಇಟಲಿಯಿಂದ ಹಿಂದಿರುಗಿದವರೊಬ್ಬರ ಕುಟುಂಬದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾದ ಮೇ 1 ರ ನಂತರ ಕೇರಳದಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

ಕೇರಳದಲ್ಲಿ ಇದುವರೆಗೂ ಒಟ್ಟು 499 ಕೊರೊನಾ ಪ್ರಕರಣಗಳು ದೃಡಪಟ್ಟಿದ್ದರೂ ಅದರಲ್ಲಿ 401 ರೋಗಿಗಳು ಗುಣಮುಖರಾಗಿದ್ದಾರೆ. ನಾಲ್ವರು ಮರಣ ಹೊಂದಿದ್ದು, 95 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಿಟ್ಟಿನಲ್ಲಿ ಕೇರಳದ್ದು ದಾಖಲೆ ಎಂದೇ ಹೇಳಬಹುದು. ಅತಿ ಹೆಚ್ಚು ಜನರನ್ನು ಗುಣಮುಖರನ್ನಾಗಿ ಮಾಡಿರುವ ಸಾಧನೆ ಈ ರಾಜ್ಯದ್ದಾಗಿದೆ. ಇದರ ಹಿಂದಿರುವ ಅಲ್ಲಿನ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಯ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಆದರೂ ಕೇರಳವನ್ನು ಕಾಲೆಳೆಯುವವರ ಸಂಖ್ಯೆಯೇನು ಕಡಿಮೆಯಿಲ್ಲ. ಕರ್ನಾಟಕದ ಮೂಲದ ದೆಹಲಿ ನಿವಾಸಿ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಬಿ.ಎಲ್‌ ಸಂತೋಷ್‌ರವರು ಏಪ್ರಿಲ್‌ 29 ರಂದು ಟ್ವೀಟ್‌ ಮಾಡಿ “ಕೇರಳ ರೆಡ್‌ ಝೋನ್‌ನತ್ತ ದಾಪುಗಾಲಿಡುತ್ತಿದೆ. ಇಡುಕ್ಕಿ, ಕೊಟ್ಟಾಯಂ ಮತ್ತು ಕೊಲ್ಲಂನಲ್ಲಿ ಹೊಸ ಪ್ರಕರಣಗಳು ದಾಖಲಾಗಿವೆ. 20 ಸಾವಿರ ಕೋಟಿ ಪ್ಯಾಕೇಜ್‌ ಗಾಳಿಗೆ ತೂರಿಹೋಗಿದೆ. ಹಾಗಾಗಿ ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ಹಾಕುತ್ತಿರುವ ಮೊದಲ ರಾಜ್ಯ ಎಂದು ಟೀಕಿಸಿದ್ದರು.

ಅವರ ಮತ್ತೊಂದು ಟ್ವೀಟ್‌ನಲ್ಲಿ “ನಾವು ಬಿಲ್ವಾಲ ಮಾದರಿ, ಕೇರಳ ಮಾದರಿ, ಪ್ರಪಂಚದ ಬೆಸ್ಟ್‌ ಸಿಎಂ ಎಂದು ಚರ್ಚಿಸುತ್ತಿರುವಾಗಲೇ ಹಿಮಾಚಲ ಪ್ರದೇಶ ಸಾಧನೆ ಮಾಡಿದೆ. ಕೇವಲ 08 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ ಎಂದು ಹಿಮಾಚಲ ಪ್ರದೇಶವನ್ನು ಹೊಗಳಿದ್ದರು.

ಆದರೆ ಕೇರಳ ಈಗ ಸತತ ಎರಡು ದಿನದಿಂದ ಒಂದೂ ಪ್ರಕರಣಗಳನ್ನು ದಾಖಲಿಸಿದೆ ಸಾಧನೆ ಮೆರೆದಿದ್ದರೂ ಬಿ.ಎಲ್ ಸಂತೋಷ್‌ ಯಾವುದೇ ಟ್ವೀಟ್‌ ಮಾಡಿಲ್ಲ.

ಇನ್ನು ಕೇರಳದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ 80 ಹಾಟ್‌ಸ್ಪಾಟ್‌ಗಳ ಪಟ್ಟಿಗೆ ಇನ್ನೂ ನಾಲ್ಕು ಹಾಟ್‌ಸ್ಪಾಟ್‌ಗಳನ್ನು ಸೇರಿಸಲಾಗಿದೆ. ಮನಂತವಾಡಿ ಪುರಸಭೆಯನ್ನು ಹಾಟ್‌ಸ್ಪಾಟ್ ಎಂದು ಹೆಸರಿಸಲಾಗಿದೆ. ಕೇರಳದಲ್ಲಿ ಹಾಟ್‌ಸ್ಪಾಟ್ ಎಂದು ಮೊದಲು ಗುರುತಿಸಿದ ವಯನಾಡ್‌ನಲ್ಲಿ ಸುಮಾರು ಒಂದು ತಿಂಗಳ ನಂತರ ಮೇ 2 ರಂದು ಒಂದು ಕೊರೊನಾ ಪ್ರಕರಣ ದಾಖಲಾಗಿದೆ. ಸಕಾರಾತ್ಮಕ ಪ್ರಕರಣವನ್ನು ಕಂಡಿತು.

ಸದ್ಯಕ್ಕೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದ ಎರ್ನಾಕುಲಂ ಜಿಲ್ಲೆಯ ಎಡಕಟ್ಟುವಾಯಲ್ ಮತ್ತು ಮಂಜಲ್ಲೂರು ಪಂಚಾಯತುಗಳನ್ನು ಹೊಸ ಹಾಟ್‌ಸ್ಪಾಟ್‌ಗಳೆಂದು ಗುರುತಿಸಲಾಗಿದೆ. ಎಡಕ್ಕಟ್ಟುವಾಯಲ್ ಪಂಚಾಯತಿನಲ್ಲಿ ನಾಲ್ವರು ಕೊರೊನಾ ಶಂಕಿತ ವ್ಯಕ್ತಿಗಳು ಭಾನುವಾರ ನೆಗೆಟಿವ್ ಪರೀಕ್ಷೆ ನಡೆಸಿದ್ದರು. ಇವರೆಡು ಪಂಚಾಯತುಗಳು ಇಡುಕ್ಕಿ ಜಿಲ್ಲೆಯ ಗಡಿಯಾಗಿರುವ ಕಾರಣ ಎರಡೂ ಪಂಚಾಯಿತಿಗಳನ್ನು ಹಾಟ್‌ಸ್ಪಾಟ್‌ಗಳಾಗಿ ಗೊತ್ತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಈಗಾಗಲೇ ಗೋವಾ ಹಾಗೂ ಈಶಾನ್ಯ ಭಾರತದ ಐದು ರಾಜ್ಯಗಳು ಕೊರೊನಾ ಮುಕ್ತ ರಾಜ್ಯಗಳು ಎಂದು ಘೋಷಸಿವೆ. ದೇಶದಲ್ಲಿ ಮೊದಲ ಭಾರಿಗೆ ಕೇರಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿ ಅವರು ಗುಣಮುಖರಾಗಿದ್ದರು. ನಂತರದಲ್ಲಿ ಕೇರಳವೂ ಭಾರತದಲ್ಲೇ ಹೆಚ್ಚಿನ ಕೊರೊನಾ ಸೋಂಕಿತರನ್ನು ಹೊಂದಿದ್ದ ರಾಜ್ಯವಾಗಿತ್ತಾದರೂ ಈಗ ಆಶ್ಚರ್ಯಕರ ರೀತಿಯಲ್ಲಿ ಕೊರೊನಾವನ್ನು ನಿಯಂತ್ರಣ ಮಾಡುತ್ತಿದೆ.


ಇದನ್ನೂ ಓದಿ: ಕೇರಳ ಸೇಫ್ ಎಂದು ಕೇರಳದಲ್ಲಿ ಉಳಿಯಲು ಕೋರ್ಟ್ ಮೊರೆ ಹೋದ ಅಮೆರಿಕಾ ಪ್ರಜೆ


ವಿಡಿಯೋ ನೋಡಿ: ಕೊರೊನಾ ಸಮಯದಲ್ಲಿ ಮಿಡಿಯಾಗಳು ಏನು ಮಾಡುತ್ತಿದ್ದವು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...