Homeಮುಖಪುಟಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

ಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

- Advertisement -
- Advertisement -

ಎರಡು ವರ್ಷಗಳಲ್ಲಿ ಸನ್ಯಾಸಿನಿಯೊಬ್ಬರ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ ಆರೋಪ ಹೊತ್ತಿದ್ದ ಮಾಜಿ ಪಾದ್ರಿ ಬಿಷಪ್ ಫ್ರಾಂಕೋ ಮುಲಕ್ಕಲ್ ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಈ ಪ್ರಕರಣ ಕೇರಳದಲ್ಲಿ ಭಾರೀ ಆಕ್ರೋಶ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿತ್ತು.

57 ವರ್ಷದ ಫ್ರಾಂಕೋ ಮುಲಕ್ಕಲ್ ಅವರು ಸನ್ಯಾಸಿನಿಯೊಬ್ಬರ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣೆಗೆ ಒಳಗಾದ ಭಾರತದ ಮೊದಲ ಕ್ಯಾಥೋಲಿಕ್ ಬಿಷಪ್ ಆಗಿದ್ದರು. 100 ದಿನಗಳಿಗಿಂತ ಹೆಚ್ಚು ನಡೆದ ವಿಚಾರಣೆಯ ನಂತರ, ಕೊಟ್ಟಾಯಂನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅವರನ್ನು ತಪ್ಪಿತಸ್ಥರಲ್ಲ ಎಂದು ಹೇಳಿ ಖುಲಾಸೆಗೊಳಿಸಿದೆ.

ನ್ಯಾಯಾಧೀಶ ಜಿ.ಗೋಪಕುಮಾರ್ ಶುಕ್ರವಾರ ‘ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ’ ಎಂಬ ಒಂದು ಸಾಲಿನೊಂದಿಗೆ ತೀರ್ಪು ನೀಡಿದ್ದಾರೆ. “ಅಂತಿಮವಾಗಿ ಸತ್ಯ ಗೆದ್ದಿದೆ” ಎಂದ ಬಿಷಪ್, ನಗುಮೊಗದಿಂದ ಕೊಟ್ಟಾಯಂನ ನ್ಯಾಯಾಲಯದಿಂದ ನಿರ್ಗಮಿಸಿದ್ದಾರೆ.

ಆಗ ಕೊಟ್ಟಾಯಂ ಪೊಲೀಸ್ ಮುಖ್ಯಸ್ಥರಾಗಿದ್ದ ಎಸ್ ಹರಿ ಶಂಕರ್ ಅವರು ಇಂದಿನ ತೀರ್ಪಿಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಈ ಪ್ರಕರಣದಲ್ಲಿ ಬಲವಾದ ಪುರಾವೆಗಳಿವೆ. ಯಾವುದೇ ಸಾಕ್ಷಿಗಳು ಪ್ರತಿಕೂಲವಾಗಿರಲಿಲ್ಲ” ಎಂದಿದ್ದಾರೆ ಎಂದು NDTV ಉಲ್ಲೇಖಿಸಿದೆ.

ಇದನ್ನೂ ಓದಿ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಜನವರಿ 14 ರಂದು ತೀರ್ಪು ಪ್ರಕಟ

ಘಟನೆಯ ಹಿನ್ನೆಲೆ

ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ, ಮಿಷನರೀಸ್ ಆಫ್ ಜೀಸಸ್ ಸಭೆಗೆ ಸೇರಿದ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಫ್ರಾಂಕೋ ಮೇಲೆ ಹೊರಿಸಲಾಗಿತ್ತು. 2014 ಮತ್ತು 2016 ರ ನಡುವೆ ಕೇರಳಕ್ಕೆ ಭೇಟಿ ನೀಡಿದಾಗ, 43 ವರ್ಷದ ಸನ್ಯಾಸಿನಿಯ ಮೇಲೆ 13 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪ ಹೊರಿಸಲಾಗಿತ್ತು. ಈ ಆರೋಪದ ನಂತರ ಫ್ರಾಂಕೊ ಅವರನ್ನು ಜಲಂಧರ್ ಡಯಾಸಿಸ್ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು.

ಕ್ರೈಸ್ತ ಸನ್ಯಾಸಿನಿಯರು ತೀವ್ರ ರಸ್ತೆ ಪ್ರತಿಭಟನೆಗಳನ್ನು ನಡೆಸಿದ್ದರು. ಚರ್ಚ್, ಪೊಲೀಸರು ಮತ್ತು ಕೇರಳ ಸರ್ಕಾರದಿಂದ ಕ್ರಮಕ್ಕೆ ಒತ್ತಾಯಿಸಿದ್ದರು. ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಜೂನ್ 2018 ರಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಇದರ ನಂತರ ಆರೋಪಿಯನ್ನು ಸೆಪ್ಟೆಂಬರ್ 21, 2018 ರಂದು ಬಂಧಿಸಲಾಯಿತು. ಅಕ್ಟೋಬರ್ 16, 2018 ರಂದು ಜಾಮೀನು ಪಡೆದಿದ್ದರು.

ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ತನ್ನ ಅನುಮತಿಯಿಲ್ಲದೆ ಪ್ರಕಟಿಸದಂತೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ಪ್ರಕರಣದ ವಿಚಾರಣೆ ನವೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಸಿರೋ-ಮಲಬಾರ್ ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ, ಮೂವರು ಬಿಷಪ್‌ಗಳು, 11 ಪಾದ್ರಿಗಳು ಮತ್ತು 22 ಸನ್ಯಾಸಿನಿಯರು ಸೇರಿದಂತೆ 83 ಸಾಕ್ಷಿಗಳನ್ನು ಚಾರ್ಜ್‌ಶೀಟ್‌‌ ಹೆಸರಿಸಿದೆ. 83 ಸಾಕ್ಷಿಗಳ ಪೈಕಿ 39 ಮಂದಿಯನ್ನು ಕರೆಸಿ ವಿಚಾರಣೆ ನಡೆಸಲಾಯಿತು.

ಈ ಮಧ್ಯೆ, ಫ್ರಾಂಕೋ ತನ್ನ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ ಎರಡೂ ನ್ಯಾಯಾಲಯಗಳು ಇದನ್ನು ನಿರಾಕರಿಸಿದ್ದವು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನ್ಯಾಯಾಲಯ ನಿನ್ನನ್ನು ನಿರ್ಧೋಷಿ ಎಂದು ಖುಲಾಸೆ ಮಾಡಿರಬಹುದು. ಆದರೆ ನೀನು ಮಾಡಿರುವ ಕೃತ್ಯ ಸುಳ್ಳಾಗಲು ಸಾಧ್ಯವಿಲ್ಲ. ಏಕೆಂದರೆ ಒಬ್ಬ ಸನ್ಯಾಸಿನಿ ತನ್ನ ಮಾನವನ್ನು ಪಣಕ್ಕಿಟ್ಟು ತನ್ನ ಮೇಲೆ ಮಾನಭಂಗದಂತಹ ಕೃತ್ಯ ಹೊತ್ತುಕೊಳ್ಳಲಾರಳು. ಘನ ನ್ಯಾಯಾಲಯ ಸಾಕ್ಷಿಯ ಮೇಲೆ ತೀರ್ಪು ಕೊಟ್ಟಿರುತ್ತದೆ. ಆ ಸಾಕ್ಷಿಗಳನ್ನೇ ನೀನು ಕೊಂಡುಕೊಂಡಿರಲಿಕ್ಕೆ ಸಾಧ್ಯ. ನೀನು ಸಮಾಜದ ದೃಷ್ಟಿಯಲ್ಲಿ ನೀನು ಹತ್ಯಾಚಾರಿಯೆ. ನಿನ್ನ ಕೃತ್ಯದಿಂದ ಧರ್ಮವನ್ನು ಅಪವಿತ್ರಗೊಳಿಸಿದೆ. ನಿನಗೆ ಯಾವತ್ತೂ ಕ್ಷಮೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....