Homeಮುಖಪುಟಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

ಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

- Advertisement -
- Advertisement -

ಎರಡು ವರ್ಷಗಳಲ್ಲಿ ಸನ್ಯಾಸಿನಿಯೊಬ್ಬರ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ ಆರೋಪ ಹೊತ್ತಿದ್ದ ಮಾಜಿ ಪಾದ್ರಿ ಬಿಷಪ್ ಫ್ರಾಂಕೋ ಮುಲಕ್ಕಲ್ ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಈ ಪ್ರಕರಣ ಕೇರಳದಲ್ಲಿ ಭಾರೀ ಆಕ್ರೋಶ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿತ್ತು.

57 ವರ್ಷದ ಫ್ರಾಂಕೋ ಮುಲಕ್ಕಲ್ ಅವರು ಸನ್ಯಾಸಿನಿಯೊಬ್ಬರ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣೆಗೆ ಒಳಗಾದ ಭಾರತದ ಮೊದಲ ಕ್ಯಾಥೋಲಿಕ್ ಬಿಷಪ್ ಆಗಿದ್ದರು. 100 ದಿನಗಳಿಗಿಂತ ಹೆಚ್ಚು ನಡೆದ ವಿಚಾರಣೆಯ ನಂತರ, ಕೊಟ್ಟಾಯಂನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅವರನ್ನು ತಪ್ಪಿತಸ್ಥರಲ್ಲ ಎಂದು ಹೇಳಿ ಖುಲಾಸೆಗೊಳಿಸಿದೆ.

ನ್ಯಾಯಾಧೀಶ ಜಿ.ಗೋಪಕುಮಾರ್ ಶುಕ್ರವಾರ ‘ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ’ ಎಂಬ ಒಂದು ಸಾಲಿನೊಂದಿಗೆ ತೀರ್ಪು ನೀಡಿದ್ದಾರೆ. “ಅಂತಿಮವಾಗಿ ಸತ್ಯ ಗೆದ್ದಿದೆ” ಎಂದ ಬಿಷಪ್, ನಗುಮೊಗದಿಂದ ಕೊಟ್ಟಾಯಂನ ನ್ಯಾಯಾಲಯದಿಂದ ನಿರ್ಗಮಿಸಿದ್ದಾರೆ.

ಆಗ ಕೊಟ್ಟಾಯಂ ಪೊಲೀಸ್ ಮುಖ್ಯಸ್ಥರಾಗಿದ್ದ ಎಸ್ ಹರಿ ಶಂಕರ್ ಅವರು ಇಂದಿನ ತೀರ್ಪಿಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಈ ಪ್ರಕರಣದಲ್ಲಿ ಬಲವಾದ ಪುರಾವೆಗಳಿವೆ. ಯಾವುದೇ ಸಾಕ್ಷಿಗಳು ಪ್ರತಿಕೂಲವಾಗಿರಲಿಲ್ಲ” ಎಂದಿದ್ದಾರೆ ಎಂದು NDTV ಉಲ್ಲೇಖಿಸಿದೆ.

ಇದನ್ನೂ ಓದಿ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಜನವರಿ 14 ರಂದು ತೀರ್ಪು ಪ್ರಕಟ

ಘಟನೆಯ ಹಿನ್ನೆಲೆ

ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ, ಮಿಷನರೀಸ್ ಆಫ್ ಜೀಸಸ್ ಸಭೆಗೆ ಸೇರಿದ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಫ್ರಾಂಕೋ ಮೇಲೆ ಹೊರಿಸಲಾಗಿತ್ತು. 2014 ಮತ್ತು 2016 ರ ನಡುವೆ ಕೇರಳಕ್ಕೆ ಭೇಟಿ ನೀಡಿದಾಗ, 43 ವರ್ಷದ ಸನ್ಯಾಸಿನಿಯ ಮೇಲೆ 13 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪ ಹೊರಿಸಲಾಗಿತ್ತು. ಈ ಆರೋಪದ ನಂತರ ಫ್ರಾಂಕೊ ಅವರನ್ನು ಜಲಂಧರ್ ಡಯಾಸಿಸ್ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು.

ಕ್ರೈಸ್ತ ಸನ್ಯಾಸಿನಿಯರು ತೀವ್ರ ರಸ್ತೆ ಪ್ರತಿಭಟನೆಗಳನ್ನು ನಡೆಸಿದ್ದರು. ಚರ್ಚ್, ಪೊಲೀಸರು ಮತ್ತು ಕೇರಳ ಸರ್ಕಾರದಿಂದ ಕ್ರಮಕ್ಕೆ ಒತ್ತಾಯಿಸಿದ್ದರು. ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಜೂನ್ 2018 ರಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಇದರ ನಂತರ ಆರೋಪಿಯನ್ನು ಸೆಪ್ಟೆಂಬರ್ 21, 2018 ರಂದು ಬಂಧಿಸಲಾಯಿತು. ಅಕ್ಟೋಬರ್ 16, 2018 ರಂದು ಜಾಮೀನು ಪಡೆದಿದ್ದರು.

ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ತನ್ನ ಅನುಮತಿಯಿಲ್ಲದೆ ಪ್ರಕಟಿಸದಂತೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ಪ್ರಕರಣದ ವಿಚಾರಣೆ ನವೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಸಿರೋ-ಮಲಬಾರ್ ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ, ಮೂವರು ಬಿಷಪ್‌ಗಳು, 11 ಪಾದ್ರಿಗಳು ಮತ್ತು 22 ಸನ್ಯಾಸಿನಿಯರು ಸೇರಿದಂತೆ 83 ಸಾಕ್ಷಿಗಳನ್ನು ಚಾರ್ಜ್‌ಶೀಟ್‌‌ ಹೆಸರಿಸಿದೆ. 83 ಸಾಕ್ಷಿಗಳ ಪೈಕಿ 39 ಮಂದಿಯನ್ನು ಕರೆಸಿ ವಿಚಾರಣೆ ನಡೆಸಲಾಯಿತು.

ಈ ಮಧ್ಯೆ, ಫ್ರಾಂಕೋ ತನ್ನ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ ಎರಡೂ ನ್ಯಾಯಾಲಯಗಳು ಇದನ್ನು ನಿರಾಕರಿಸಿದ್ದವು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನ್ಯಾಯಾಲಯ ನಿನ್ನನ್ನು ನಿರ್ಧೋಷಿ ಎಂದು ಖುಲಾಸೆ ಮಾಡಿರಬಹುದು. ಆದರೆ ನೀನು ಮಾಡಿರುವ ಕೃತ್ಯ ಸುಳ್ಳಾಗಲು ಸಾಧ್ಯವಿಲ್ಲ. ಏಕೆಂದರೆ ಒಬ್ಬ ಸನ್ಯಾಸಿನಿ ತನ್ನ ಮಾನವನ್ನು ಪಣಕ್ಕಿಟ್ಟು ತನ್ನ ಮೇಲೆ ಮಾನಭಂಗದಂತಹ ಕೃತ್ಯ ಹೊತ್ತುಕೊಳ್ಳಲಾರಳು. ಘನ ನ್ಯಾಯಾಲಯ ಸಾಕ್ಷಿಯ ಮೇಲೆ ತೀರ್ಪು ಕೊಟ್ಟಿರುತ್ತದೆ. ಆ ಸಾಕ್ಷಿಗಳನ್ನೇ ನೀನು ಕೊಂಡುಕೊಂಡಿರಲಿಕ್ಕೆ ಸಾಧ್ಯ. ನೀನು ಸಮಾಜದ ದೃಷ್ಟಿಯಲ್ಲಿ ನೀನು ಹತ್ಯಾಚಾರಿಯೆ. ನಿನ್ನ ಕೃತ್ಯದಿಂದ ಧರ್ಮವನ್ನು ಅಪವಿತ್ರಗೊಳಿಸಿದೆ. ನಿನಗೆ ಯಾವತ್ತೂ ಕ್ಷಮೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...