Homeಅಂತರಾಷ್ಟ್ರೀಯಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

- Advertisement -
- Advertisement -

ಕೇರಳ ಮೂಲದ ನಿಮಿಷಾ ಪ್ರಿಯಾಗೆ ವಿಧಿಸಿದ ಮರಣದಂಡನೆ ಶಿಕ್ಷೆಯನ್ನು ದೇಶದ ಅಧ್ಯಕ್ಷ ರಶಾದ್ ಅಲ್-ಅಲಿಮಿ ಅನುಮೋದಿಸಿಲ್ಲ ಎಂದು ಭಾರತದಲ್ಲಿರುವ ಯೆಮೆನ್ ಗಣರಾಜ್ಯದ ರಾಯಭಾರ ಕಚೇರಿ ಸೋಮವಾರ ಹೇಳಿದೆ ಎಂದು ಕಾನ್ಸುಲೇಟ್ ಪತ್ರವನ್ನು ಉಲ್ಲೇಖಿಸಿ ಮನೋರಮಾ ನ್ಯೂಸ್ ವರದಿ ಮಾಡಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಪ್ರಿಯಾ, ಜುಲೈ 2017 ರಲ್ಲಿ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹದಿಯನ್ನು ಹತ್ಯೆಗೈದ ಆರೋಪದಲ್ಲಿ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ. ಕೇರಳ ನರ್ಸ್

“ಇಡೀ ಪ್ರಕರಣವನ್ನು ಹೌತಿ ಬಂಡುಕೋರರು ನಿರ್ವಹಿಸಿದ್ದಾರೆ ಎಂದು ಯೆಮೆನ್ ಸರ್ಕಾರ ಒತ್ತಿಹೇಳುತ್ತದೆ ಮತ್ತು ಆದ್ದರಿಂದ, ಯೆಮೆನ್ ಗಣರಾಜ್ಯದ ಅಧ್ಯಕ್ಷೀಯ ನಾಯಕತ್ವ ಮಂಡಳಿಯ ಅಧ್ಯಕ್ಷರಾದ ಗೌರವಾನ್ವಿತ ಡಾ. ರಶಾದ್ ಅಲ್-ಅಲಿಮಿ ಅವರು ಈ ತೀರ್ಪನ್ನು ಅಂಗೀಕರಿಸಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.

2020 ರಲ್ಲಿ, ರಾಜಧಾನಿ ಸನಾದ ವಿಚಾರಣಾ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತು. ಅವರ ಮನವಿಯನ್ನು ನವೆಂಬರ್ 2023 ರಲ್ಲಿ ಯೆಮೆನ್ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ತಿರಸ್ಕರಿಸಿತ್ತು. ಆದಾಗ್ಯೂ, ಷರಿಯಾ ಅಥವಾ ಇಸ್ಲಾಮಿಕ್ ಕಾನೂನಿನ ಪ್ರಕಾರ, ಹತ್ಯೆಗೀಡಾದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ನೀಡಿದರೆ ಅವರಿಗೆ ಕ್ಷಮೆ ನೀಡುವ ಆಯ್ಕೆಯನ್ನು ಇದು ಮುಕ್ತವಾಗಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 30 ರಂದು, ಯೆಮೆನ್ ಅಧ್ಯಕ್ಷೀಯ ನಾಯಕತ್ವ ಮಂಡಳಿಯ ಅಧ್ಯಕ್ಷರಾಗಿರುವ ಅಲ್-ಅಲಿಮಿ ಅವರು ಪ್ರಿಯಾಗೆ ಮರಣದಂಡನೆ ಶಿಕ್ಷೆಯನ್ನು ಅನುಮೋದಿಸಿದ್ದಾರೆ ಎಂದು  ವರದಿಗಳು ಹೇಳಿತ್ತು. ಈ ವೇಳೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಡಿಸೆಂಬರ್ 31 ರಂದು, ಪರಿಸ್ಥಿತಿಯ ಬಗ್ಗೆ ತಿಳಿದಿದ್ದು, ಈ ಪ್ರಕರಣದಲ್ಲಿ ಪ್ರಿಯಾ ಮತ್ತು ಅವರ ಕುಟುಂಬಕ್ಕೆ ಸಹಾಯವನ್ನು ನೀಡುತ್ತಿದೆ ಎಂದು ಹೇಳಿತ್ತು.

ಈ ನಡುವೆ, ಮರಣದಂಡನೆ ಶಿಕ್ಷೆಯನ್ನು ಮನ್ನಾ ಮಾಡಲು ಪ್ರಿಯಾ ಅವರ ತಾಯಿ ಕೊಲೆಗೀಡಾದ ಮೆಹದಿ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ದಿನಗೂಲಿ ಕಾರ್ಮಿಕರಾಗಿರುವ ತಮ್ಮ ಪೋಷಕರಿಗೆ ಸಹಾಯ ಮಾಡಲು ಪ್ರಿಯಾ ಅವರು 2008 ರಲ್ಲಿ ಯೆಮೆನ್‌ಗೆ ತೆರಳಿದ್ದರು. ಅವರು 2015 ರಲ್ಲಿ ತನ್ನದೆ ಆದ ಕ್ಲಿನಿಕ್ ಅನ್ನು ಪ್ರಾರಂಭಿಸಿದ್ದರು, ಅದಕ್ಕೂ ಮೊದಲು ಅವರು ಯೆಮೆನ್‌ನ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು.

ಈ ನಡುವೆ ಪ್ರಿಯಾ ಮತ್ತು ಅವರ ವ್ಯಾಪಾರದ ಪಾಲುದಾರರಾದ ಮೆಹದಿ ನಡುವೆ ಭಿನ್ನಾಭಿಪ್ರಾಯಗಳು ಬಂದಿದ್ದವು. ಅವರು ಹಣದ ದುರುಪಯೋಗದ ಬಗ್ಗೆ ಮೆಹದಿಯನ್ನು ಪ್ರಶ್ನಿಸಿದ್ದು ಈ ಭಿನ್ನಾಭಿಪ್ರಾಯಕ್ಕೆ ಕಾರಣ ಎಂದು ಅವರ ಕುಟುಂಬವು ಹೇಳಿಕೊಂಡಿದೆ. ಕೇರಳ ನರ್ಸ್

ಕೊಲೆಗೀಡಾದ ಮೆಹದಿ ತನ್ನ ಮಗಳಿಗೆ ಮಾದಕದ್ರವ್ಯದ ಅಮಲಿನಲ್ಲಿ ವರ್ಷಗಟ್ಟಲೆ ಚಿತ್ರಹಿಂಸೆ ನೀಡಿದ್ದಾನೆ ಮತ್ತು ಹಲವಾರು ಬಾರಿ ಬಂದೂಕು ತೋರಿಸಿ ಅವರ ಮೇಲೆ ದೌರ್ಜನ್ಯ ನಡೆಸಿದ್ದಾನೆ ಎಂದು ಪ್ರಿಯಾ ಅವರ ತಾಯಿ ಮನವಿಯಲ್ಲಿ ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ಪ್ರಿಯಾ ದೇಶವನ್ನು ತೊರೆಯಲು ಸಾಧ್ಯವಾಗದಂತೆ ಅವರ ಪಾಸ್‌ಪೋರ್ಟ್ ಅನ್ನು ಕೂಡಾ ಮೆಹದಿ ಮುಟ್ಟುಗೋಲು ಹಾಕಿಕೊಂಡಿದ್ದರು ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಅದಾಗ್ಯೂ, ಪ್ರಿಯಾ ತನ್ನ ಪಾಸ್‌ಪೋರ್ಟ್ ಹಿಂಪಡೆಯುವುದಕ್ಕಾಗಿ ಮೆಹದಿಗೆ ನಿದ್ರೆಯ ಚುಚ್ಚುಮದ್ದನ್ನು ನೀಡಿದ್ದರು. ಆದರೆ, ಇದು ಮಿತಿಮೀರಿದ್ದರಿಂದ ಮೆಹದಿ ಸಾವನ್ನಪ್ಪಿದ್ದರು.

2014 ರಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರು ದೇಶದ ರಾಜಧಾನಿ ಸನಾವನ್ನು ವಶಪಡಿಸಿಕೊಂಡಾಗ ಯೆಮೆನ್‌ನಲ್ಲಿ ಅಂತರ್ಯುದ್ಧ ಪ್ರಾರಂಭವಾಗಿತ್ತು. ಅಂದಿನಿಂದ ಅವರು ದೇಶದ ಬಹುಪಾಲು ಭಾಗವನ್ನು ತಮ್ಮ ನಿಯಂತ್ರಣದಲ್ಲಿ ಇರಿಸಿದ್ದಾರೆ. ಹೌತಿಗಳು ಮುಸ್ಲಿಮರ ಶಿಯಾ ಪಂಗಡದ ಭಾಗವಾಗಿದ್ದು, ಯೆಮೆನ್‌ನ ಸುನ್ನಿ ಬಹುಮತದ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಲೆ ಬಂದಿದೆ.

2015 ರಲ್ಲಿ, ಸೌದಿ ಅರೇಬಿಯಾ ಮತ್ತು ಮುಸ್ಲಿಂ ರಾಜ್ಯಗಳ ಒಕ್ಕೂಟವು ಹೌತಿ ಬಂಡುಕೋರರನ್ನು ಹಿಮ್ಮೆಟ್ಟಿಸಲು ಮಧ್ಯಪ್ರವೇಶಿಸಿತ್ತು. ಅದರ ನಂತರ ಈ ಒಕ್ಕೂಟವು ಅಲಿ ಅಬ್ದುಲ್ಲಾ ಸಲೇಹ್ ಅವರ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಸರ್ಕಾರವನ್ನು ಪದಚ್ಯುತಗೊಳಿಸಿದ್ದರು. ಈ ವೇಳೆ ದೇಶದಲ್ಲಿ ಸಾವಿರಾರು ಜನರು ಸಾವನ್ನಪ್ಪಿ ಮತ್ತು ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದರು.

ಇದನ್ನೂಓದಿ:  ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...