Homeಅಂತರಾಷ್ಟ್ರೀಯಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

- Advertisement -
- Advertisement -

ಕೇರಳ ಮೂಲದ ನಿಮಿಷಾ ಪ್ರಿಯಾಗೆ ವಿಧಿಸಿದ ಮರಣದಂಡನೆ ಶಿಕ್ಷೆಯನ್ನು ದೇಶದ ಅಧ್ಯಕ್ಷ ರಶಾದ್ ಅಲ್-ಅಲಿಮಿ ಅನುಮೋದಿಸಿಲ್ಲ ಎಂದು ಭಾರತದಲ್ಲಿರುವ ಯೆಮೆನ್ ಗಣರಾಜ್ಯದ ರಾಯಭಾರ ಕಚೇರಿ ಸೋಮವಾರ ಹೇಳಿದೆ ಎಂದು ಕಾನ್ಸುಲೇಟ್ ಪತ್ರವನ್ನು ಉಲ್ಲೇಖಿಸಿ ಮನೋರಮಾ ನ್ಯೂಸ್ ವರದಿ ಮಾಡಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಪ್ರಿಯಾ, ಜುಲೈ 2017 ರಲ್ಲಿ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹದಿಯನ್ನು ಹತ್ಯೆಗೈದ ಆರೋಪದಲ್ಲಿ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ. ಕೇರಳ ನರ್ಸ್

“ಇಡೀ ಪ್ರಕರಣವನ್ನು ಹೌತಿ ಬಂಡುಕೋರರು ನಿರ್ವಹಿಸಿದ್ದಾರೆ ಎಂದು ಯೆಮೆನ್ ಸರ್ಕಾರ ಒತ್ತಿಹೇಳುತ್ತದೆ ಮತ್ತು ಆದ್ದರಿಂದ, ಯೆಮೆನ್ ಗಣರಾಜ್ಯದ ಅಧ್ಯಕ್ಷೀಯ ನಾಯಕತ್ವ ಮಂಡಳಿಯ ಅಧ್ಯಕ್ಷರಾದ ಗೌರವಾನ್ವಿತ ಡಾ. ರಶಾದ್ ಅಲ್-ಅಲಿಮಿ ಅವರು ಈ ತೀರ್ಪನ್ನು ಅಂಗೀಕರಿಸಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.

2020 ರಲ್ಲಿ, ರಾಜಧಾನಿ ಸನಾದ ವಿಚಾರಣಾ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತು. ಅವರ ಮನವಿಯನ್ನು ನವೆಂಬರ್ 2023 ರಲ್ಲಿ ಯೆಮೆನ್ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ತಿರಸ್ಕರಿಸಿತ್ತು. ಆದಾಗ್ಯೂ, ಷರಿಯಾ ಅಥವಾ ಇಸ್ಲಾಮಿಕ್ ಕಾನೂನಿನ ಪ್ರಕಾರ, ಹತ್ಯೆಗೀಡಾದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ನೀಡಿದರೆ ಅವರಿಗೆ ಕ್ಷಮೆ ನೀಡುವ ಆಯ್ಕೆಯನ್ನು ಇದು ಮುಕ್ತವಾಗಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 30 ರಂದು, ಯೆಮೆನ್ ಅಧ್ಯಕ್ಷೀಯ ನಾಯಕತ್ವ ಮಂಡಳಿಯ ಅಧ್ಯಕ್ಷರಾಗಿರುವ ಅಲ್-ಅಲಿಮಿ ಅವರು ಪ್ರಿಯಾಗೆ ಮರಣದಂಡನೆ ಶಿಕ್ಷೆಯನ್ನು ಅನುಮೋದಿಸಿದ್ದಾರೆ ಎಂದು  ವರದಿಗಳು ಹೇಳಿತ್ತು. ಈ ವೇಳೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಡಿಸೆಂಬರ್ 31 ರಂದು, ಪರಿಸ್ಥಿತಿಯ ಬಗ್ಗೆ ತಿಳಿದಿದ್ದು, ಈ ಪ್ರಕರಣದಲ್ಲಿ ಪ್ರಿಯಾ ಮತ್ತು ಅವರ ಕುಟುಂಬಕ್ಕೆ ಸಹಾಯವನ್ನು ನೀಡುತ್ತಿದೆ ಎಂದು ಹೇಳಿತ್ತು.

ಈ ನಡುವೆ, ಮರಣದಂಡನೆ ಶಿಕ್ಷೆಯನ್ನು ಮನ್ನಾ ಮಾಡಲು ಪ್ರಿಯಾ ಅವರ ತಾಯಿ ಕೊಲೆಗೀಡಾದ ಮೆಹದಿ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ದಿನಗೂಲಿ ಕಾರ್ಮಿಕರಾಗಿರುವ ತಮ್ಮ ಪೋಷಕರಿಗೆ ಸಹಾಯ ಮಾಡಲು ಪ್ರಿಯಾ ಅವರು 2008 ರಲ್ಲಿ ಯೆಮೆನ್‌ಗೆ ತೆರಳಿದ್ದರು. ಅವರು 2015 ರಲ್ಲಿ ತನ್ನದೆ ಆದ ಕ್ಲಿನಿಕ್ ಅನ್ನು ಪ್ರಾರಂಭಿಸಿದ್ದರು, ಅದಕ್ಕೂ ಮೊದಲು ಅವರು ಯೆಮೆನ್‌ನ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು.

ಈ ನಡುವೆ ಪ್ರಿಯಾ ಮತ್ತು ಅವರ ವ್ಯಾಪಾರದ ಪಾಲುದಾರರಾದ ಮೆಹದಿ ನಡುವೆ ಭಿನ್ನಾಭಿಪ್ರಾಯಗಳು ಬಂದಿದ್ದವು. ಅವರು ಹಣದ ದುರುಪಯೋಗದ ಬಗ್ಗೆ ಮೆಹದಿಯನ್ನು ಪ್ರಶ್ನಿಸಿದ್ದು ಈ ಭಿನ್ನಾಭಿಪ್ರಾಯಕ್ಕೆ ಕಾರಣ ಎಂದು ಅವರ ಕುಟುಂಬವು ಹೇಳಿಕೊಂಡಿದೆ. ಕೇರಳ ನರ್ಸ್

ಕೊಲೆಗೀಡಾದ ಮೆಹದಿ ತನ್ನ ಮಗಳಿಗೆ ಮಾದಕದ್ರವ್ಯದ ಅಮಲಿನಲ್ಲಿ ವರ್ಷಗಟ್ಟಲೆ ಚಿತ್ರಹಿಂಸೆ ನೀಡಿದ್ದಾನೆ ಮತ್ತು ಹಲವಾರು ಬಾರಿ ಬಂದೂಕು ತೋರಿಸಿ ಅವರ ಮೇಲೆ ದೌರ್ಜನ್ಯ ನಡೆಸಿದ್ದಾನೆ ಎಂದು ಪ್ರಿಯಾ ಅವರ ತಾಯಿ ಮನವಿಯಲ್ಲಿ ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ಪ್ರಿಯಾ ದೇಶವನ್ನು ತೊರೆಯಲು ಸಾಧ್ಯವಾಗದಂತೆ ಅವರ ಪಾಸ್‌ಪೋರ್ಟ್ ಅನ್ನು ಕೂಡಾ ಮೆಹದಿ ಮುಟ್ಟುಗೋಲು ಹಾಕಿಕೊಂಡಿದ್ದರು ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಅದಾಗ್ಯೂ, ಪ್ರಿಯಾ ತನ್ನ ಪಾಸ್‌ಪೋರ್ಟ್ ಹಿಂಪಡೆಯುವುದಕ್ಕಾಗಿ ಮೆಹದಿಗೆ ನಿದ್ರೆಯ ಚುಚ್ಚುಮದ್ದನ್ನು ನೀಡಿದ್ದರು. ಆದರೆ, ಇದು ಮಿತಿಮೀರಿದ್ದರಿಂದ ಮೆಹದಿ ಸಾವನ್ನಪ್ಪಿದ್ದರು.

2014 ರಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರು ದೇಶದ ರಾಜಧಾನಿ ಸನಾವನ್ನು ವಶಪಡಿಸಿಕೊಂಡಾಗ ಯೆಮೆನ್‌ನಲ್ಲಿ ಅಂತರ್ಯುದ್ಧ ಪ್ರಾರಂಭವಾಗಿತ್ತು. ಅಂದಿನಿಂದ ಅವರು ದೇಶದ ಬಹುಪಾಲು ಭಾಗವನ್ನು ತಮ್ಮ ನಿಯಂತ್ರಣದಲ್ಲಿ ಇರಿಸಿದ್ದಾರೆ. ಹೌತಿಗಳು ಮುಸ್ಲಿಮರ ಶಿಯಾ ಪಂಗಡದ ಭಾಗವಾಗಿದ್ದು, ಯೆಮೆನ್‌ನ ಸುನ್ನಿ ಬಹುಮತದ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಲೆ ಬಂದಿದೆ.

2015 ರಲ್ಲಿ, ಸೌದಿ ಅರೇಬಿಯಾ ಮತ್ತು ಮುಸ್ಲಿಂ ರಾಜ್ಯಗಳ ಒಕ್ಕೂಟವು ಹೌತಿ ಬಂಡುಕೋರರನ್ನು ಹಿಮ್ಮೆಟ್ಟಿಸಲು ಮಧ್ಯಪ್ರವೇಶಿಸಿತ್ತು. ಅದರ ನಂತರ ಈ ಒಕ್ಕೂಟವು ಅಲಿ ಅಬ್ದುಲ್ಲಾ ಸಲೇಹ್ ಅವರ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಸರ್ಕಾರವನ್ನು ಪದಚ್ಯುತಗೊಳಿಸಿದ್ದರು. ಈ ವೇಳೆ ದೇಶದಲ್ಲಿ ಸಾವಿರಾರು ಜನರು ಸಾವನ್ನಪ್ಪಿ ಮತ್ತು ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದರು.

ಇದನ್ನೂಓದಿ:  ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...