Homeಅಂತರಾಷ್ಟ್ರೀಯಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

- Advertisement -
- Advertisement -

ಕೇರಳ ಮೂಲದ ನಿಮಿಷಾ ಪ್ರಿಯಾಗೆ ವಿಧಿಸಿದ ಮರಣದಂಡನೆ ಶಿಕ್ಷೆಯನ್ನು ದೇಶದ ಅಧ್ಯಕ್ಷ ರಶಾದ್ ಅಲ್-ಅಲಿಮಿ ಅನುಮೋದಿಸಿಲ್ಲ ಎಂದು ಭಾರತದಲ್ಲಿರುವ ಯೆಮೆನ್ ಗಣರಾಜ್ಯದ ರಾಯಭಾರ ಕಚೇರಿ ಸೋಮವಾರ ಹೇಳಿದೆ ಎಂದು ಕಾನ್ಸುಲೇಟ್ ಪತ್ರವನ್ನು ಉಲ್ಲೇಖಿಸಿ ಮನೋರಮಾ ನ್ಯೂಸ್ ವರದಿ ಮಾಡಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಪ್ರಿಯಾ, ಜುಲೈ 2017 ರಲ್ಲಿ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹದಿಯನ್ನು ಹತ್ಯೆಗೈದ ಆರೋಪದಲ್ಲಿ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ. ಕೇರಳ ನರ್ಸ್

“ಇಡೀ ಪ್ರಕರಣವನ್ನು ಹೌತಿ ಬಂಡುಕೋರರು ನಿರ್ವಹಿಸಿದ್ದಾರೆ ಎಂದು ಯೆಮೆನ್ ಸರ್ಕಾರ ಒತ್ತಿಹೇಳುತ್ತದೆ ಮತ್ತು ಆದ್ದರಿಂದ, ಯೆಮೆನ್ ಗಣರಾಜ್ಯದ ಅಧ್ಯಕ್ಷೀಯ ನಾಯಕತ್ವ ಮಂಡಳಿಯ ಅಧ್ಯಕ್ಷರಾದ ಗೌರವಾನ್ವಿತ ಡಾ. ರಶಾದ್ ಅಲ್-ಅಲಿಮಿ ಅವರು ಈ ತೀರ್ಪನ್ನು ಅಂಗೀಕರಿಸಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.

2020 ರಲ್ಲಿ, ರಾಜಧಾನಿ ಸನಾದ ವಿಚಾರಣಾ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತು. ಅವರ ಮನವಿಯನ್ನು ನವೆಂಬರ್ 2023 ರಲ್ಲಿ ಯೆಮೆನ್ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ತಿರಸ್ಕರಿಸಿತ್ತು. ಆದಾಗ್ಯೂ, ಷರಿಯಾ ಅಥವಾ ಇಸ್ಲಾಮಿಕ್ ಕಾನೂನಿನ ಪ್ರಕಾರ, ಹತ್ಯೆಗೀಡಾದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ನೀಡಿದರೆ ಅವರಿಗೆ ಕ್ಷಮೆ ನೀಡುವ ಆಯ್ಕೆಯನ್ನು ಇದು ಮುಕ್ತವಾಗಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 30 ರಂದು, ಯೆಮೆನ್ ಅಧ್ಯಕ್ಷೀಯ ನಾಯಕತ್ವ ಮಂಡಳಿಯ ಅಧ್ಯಕ್ಷರಾಗಿರುವ ಅಲ್-ಅಲಿಮಿ ಅವರು ಪ್ರಿಯಾಗೆ ಮರಣದಂಡನೆ ಶಿಕ್ಷೆಯನ್ನು ಅನುಮೋದಿಸಿದ್ದಾರೆ ಎಂದು  ವರದಿಗಳು ಹೇಳಿತ್ತು. ಈ ವೇಳೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಡಿಸೆಂಬರ್ 31 ರಂದು, ಪರಿಸ್ಥಿತಿಯ ಬಗ್ಗೆ ತಿಳಿದಿದ್ದು, ಈ ಪ್ರಕರಣದಲ್ಲಿ ಪ್ರಿಯಾ ಮತ್ತು ಅವರ ಕುಟುಂಬಕ್ಕೆ ಸಹಾಯವನ್ನು ನೀಡುತ್ತಿದೆ ಎಂದು ಹೇಳಿತ್ತು.

ಈ ನಡುವೆ, ಮರಣದಂಡನೆ ಶಿಕ್ಷೆಯನ್ನು ಮನ್ನಾ ಮಾಡಲು ಪ್ರಿಯಾ ಅವರ ತಾಯಿ ಕೊಲೆಗೀಡಾದ ಮೆಹದಿ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ದಿನಗೂಲಿ ಕಾರ್ಮಿಕರಾಗಿರುವ ತಮ್ಮ ಪೋಷಕರಿಗೆ ಸಹಾಯ ಮಾಡಲು ಪ್ರಿಯಾ ಅವರು 2008 ರಲ್ಲಿ ಯೆಮೆನ್‌ಗೆ ತೆರಳಿದ್ದರು. ಅವರು 2015 ರಲ್ಲಿ ತನ್ನದೆ ಆದ ಕ್ಲಿನಿಕ್ ಅನ್ನು ಪ್ರಾರಂಭಿಸಿದ್ದರು, ಅದಕ್ಕೂ ಮೊದಲು ಅವರು ಯೆಮೆನ್‌ನ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು.

ಈ ನಡುವೆ ಪ್ರಿಯಾ ಮತ್ತು ಅವರ ವ್ಯಾಪಾರದ ಪಾಲುದಾರರಾದ ಮೆಹದಿ ನಡುವೆ ಭಿನ್ನಾಭಿಪ್ರಾಯಗಳು ಬಂದಿದ್ದವು. ಅವರು ಹಣದ ದುರುಪಯೋಗದ ಬಗ್ಗೆ ಮೆಹದಿಯನ್ನು ಪ್ರಶ್ನಿಸಿದ್ದು ಈ ಭಿನ್ನಾಭಿಪ್ರಾಯಕ್ಕೆ ಕಾರಣ ಎಂದು ಅವರ ಕುಟುಂಬವು ಹೇಳಿಕೊಂಡಿದೆ. ಕೇರಳ ನರ್ಸ್

ಕೊಲೆಗೀಡಾದ ಮೆಹದಿ ತನ್ನ ಮಗಳಿಗೆ ಮಾದಕದ್ರವ್ಯದ ಅಮಲಿನಲ್ಲಿ ವರ್ಷಗಟ್ಟಲೆ ಚಿತ್ರಹಿಂಸೆ ನೀಡಿದ್ದಾನೆ ಮತ್ತು ಹಲವಾರು ಬಾರಿ ಬಂದೂಕು ತೋರಿಸಿ ಅವರ ಮೇಲೆ ದೌರ್ಜನ್ಯ ನಡೆಸಿದ್ದಾನೆ ಎಂದು ಪ್ರಿಯಾ ಅವರ ತಾಯಿ ಮನವಿಯಲ್ಲಿ ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ಪ್ರಿಯಾ ದೇಶವನ್ನು ತೊರೆಯಲು ಸಾಧ್ಯವಾಗದಂತೆ ಅವರ ಪಾಸ್‌ಪೋರ್ಟ್ ಅನ್ನು ಕೂಡಾ ಮೆಹದಿ ಮುಟ್ಟುಗೋಲು ಹಾಕಿಕೊಂಡಿದ್ದರು ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಅದಾಗ್ಯೂ, ಪ್ರಿಯಾ ತನ್ನ ಪಾಸ್‌ಪೋರ್ಟ್ ಹಿಂಪಡೆಯುವುದಕ್ಕಾಗಿ ಮೆಹದಿಗೆ ನಿದ್ರೆಯ ಚುಚ್ಚುಮದ್ದನ್ನು ನೀಡಿದ್ದರು. ಆದರೆ, ಇದು ಮಿತಿಮೀರಿದ್ದರಿಂದ ಮೆಹದಿ ಸಾವನ್ನಪ್ಪಿದ್ದರು.

2014 ರಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರು ದೇಶದ ರಾಜಧಾನಿ ಸನಾವನ್ನು ವಶಪಡಿಸಿಕೊಂಡಾಗ ಯೆಮೆನ್‌ನಲ್ಲಿ ಅಂತರ್ಯುದ್ಧ ಪ್ರಾರಂಭವಾಗಿತ್ತು. ಅಂದಿನಿಂದ ಅವರು ದೇಶದ ಬಹುಪಾಲು ಭಾಗವನ್ನು ತಮ್ಮ ನಿಯಂತ್ರಣದಲ್ಲಿ ಇರಿಸಿದ್ದಾರೆ. ಹೌತಿಗಳು ಮುಸ್ಲಿಮರ ಶಿಯಾ ಪಂಗಡದ ಭಾಗವಾಗಿದ್ದು, ಯೆಮೆನ್‌ನ ಸುನ್ನಿ ಬಹುಮತದ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಲೆ ಬಂದಿದೆ.

2015 ರಲ್ಲಿ, ಸೌದಿ ಅರೇಬಿಯಾ ಮತ್ತು ಮುಸ್ಲಿಂ ರಾಜ್ಯಗಳ ಒಕ್ಕೂಟವು ಹೌತಿ ಬಂಡುಕೋರರನ್ನು ಹಿಮ್ಮೆಟ್ಟಿಸಲು ಮಧ್ಯಪ್ರವೇಶಿಸಿತ್ತು. ಅದರ ನಂತರ ಈ ಒಕ್ಕೂಟವು ಅಲಿ ಅಬ್ದುಲ್ಲಾ ಸಲೇಹ್ ಅವರ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಸರ್ಕಾರವನ್ನು ಪದಚ್ಯುತಗೊಳಿಸಿದ್ದರು. ಈ ವೇಳೆ ದೇಶದಲ್ಲಿ ಸಾವಿರಾರು ಜನರು ಸಾವನ್ನಪ್ಪಿ ಮತ್ತು ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದರು.

ಇದನ್ನೂಓದಿ:  ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...