Homeಮುಖಪುಟಕೇರಳ | ನರ್ಸಿಂಗ್ ವಿದ್ಯಾರ್ಥಿನಿಯ ಸಾವು ಪ್ರಕರಣ : ಮೂವರು ಸಹಪಾಠಿಗಳ ಬಂಧನ

ಕೇರಳ | ನರ್ಸಿಂಗ್ ವಿದ್ಯಾರ್ಥಿನಿಯ ಸಾವು ಪ್ರಕರಣ : ಮೂವರು ಸಹಪಾಠಿಗಳ ಬಂಧನ

- Advertisement -
- Advertisement -

ಕೇರಳದ ಪತ್ತನಂತಿಟ್ಟದ ಚುಟ್ಟಿಪ್ಪಾರ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮೂವರು ಸಹಪಾಠಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ತನಂತಿಟ್ಟದ ಎಸ್‌ಎಂಇ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಅಮ್ಮು ಎ ಸಜೀವ್ (21) ನವೆಂಬರ್ 15ರಂದು ಶುಕ್ರವಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆ ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆದರೆ, ವಿದ್ಯಾರ್ಥಿನಿಯ ಕುಟುಂಬಸ್ಥರು ಆಕೆಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದರು. ತಂದೆ ಸಜೀವ್, “ಮಗಳು ಸಹಪಾಠಿಗಳಿಂದ ಕಿರುಕುಳ ಅನುಭವಿಸುತ್ತಿದ್ದ ಬಗ್ಗೆ ಈ ಹಿಂದೆಯೇ ಪ್ರಾಂಶುಪಾಲರಿಗೆ ದೂರು ನೀಡಿದ್ದೆ” ಎಂದಿದ್ದರು. ಹಾಗಾಗಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಆದೇಶಿಸಿದೆ.

ಅಮ್ಮು ಸಜೀವ್ ಸಾವಿಗೆ ಸಂಬಂಧಿಸಿದಂತೆ ಗುರುವಾರ (ನ.22) ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದ ಸಹೋದರ ಅಖಿಲ್ ಸಜೀವ್, “ನನ್ನ ಸಹೋದರಿ ಎಂದಿಗೂ ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಆಕೆಯ ಸಾವಿನ ಬಗ್ಗೆ ಕುಟುಂಬಕ್ಕೆ ಅನುಮಾನವಿದೆ. ಕೋಟಯಂ ಮೆಡಿಕಲ್ ಕಾಲೇಜು ಆಸ್ಪತ್ರೆ ಸಮೀಪದಲ್ಲೇ ಇರುವಾಗ ಅಮ್ಮುವನ್ನು ತಿರುವನಂತಪುರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಏಕೆ ಕರೆದುಕೊಂಡು ಹೋಗಲಾಯಿತು?” ಎಂದು ಪ್ರಶ್ನಿಸಿದ್ದರು.

ಈ ಬೆನ್ನಲ್ಲೇ ಮೂವರು ಸಹಪಾಠಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರಲ್ಲಿ ಒಬ್ಬರು ಕೋಟಯಂ ಮತ್ತು ಇಬ್ಬರು ಪತ್ತನಾಪುರಂ ಮೂಲದವರು ಎಂದು ತಿಳಿದು ಬಂದಿದೆ. ಅವರ ಹೆಸರು ಬಹಿರಂಗಗೊಂಡಿಲ್ಲ. ಅಮ್ಮು ತಂದೆ ನೀಡಿದ ದೂರು ಅನುಸರಿಸಿ ಮೂವರನ್ನು ಬಂಧಿಸಲಾಗಿದೆ.

ವರದಿಗಳ ಪ್ರಕಾರ, ನವೆಂಬರ್ 15ರಂದು ರಾತ್ರಿ ಅಮ್ಮುವಿನ ಹಾಸ್ಟೆಲ್ ವಾರ್ಡನ್, ಆಕೆ ಬಿದ್ದು ಮೂಳೆ ಮುರಿತ ಆಗಿದೆ. ತಿರುವನಂತಪುರಂ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದರು. ಪೋಷಕರು ಆಸ್ಪತ್ರೆಗೆ ಹೋದಾಗ, ಅಮ್ಮು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರು.

ಅಮ್ಮು ಸಾವಿಗೆ ಸಂಬಂಧಿಸಿದಂತೆ ಕೇರಳ ಸ್ಟೂಡೆಂಟ್ ಯೂನಿಯನ್ (ಕೆಎಸ್‌ಯು) ಗುರುವಾರ ಚುಟ್ಟಿಪ್ಪಾರ ನರ್ಸಿಂಗ್ ಕಾಲೇಜಿಗೆ ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಪೊಲೀಸರು ಕಾಲೇಜು ಬಳಿ ಮೆರವಣಿಗೆ ತಡೆದಾಗ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ರಾಜ್ಯದ ವಿವಿದೆಡೆಗಳಲ್ಲಿ ಅಮ್ಮು ಸಾವು ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ : ನರ್ಸಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...