Homeಮುಖಪುಟ2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ತೀವ್ರ ಹೊಡೆತ ಬಿದ್ದಿದ್ದ ಪ್ರವಾಸೋದ್ಯಮವು ಇದೀಗ ಮತ್ತೆ ಚೇತರಿಸಿಕೊಳ್ಳುತ್ತಿದೆ. 2023ರಲ್ಲಿ ಪ್ರವಾಸ ಮಾಡಲು ಅತ್ಯುತ್ತಮ 52 ಸ್ಥಳಗಳನ್ನು ನ್ಯೂಯಾರ್ಕ್‌ ಟೈಮ್ಸ್‌ ಪಟ್ಟಿ ಮಾಡಿದ್ದು ಅದರಲ್ಲಿ ಕೇರಳವು ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಕಂಡು ಬಂದ ಭಾರತದ ಏಕೈಕ ಪ್ರದೇಶವಾಗಿ ಕೇರಳ ಕಾಣಿಸಿಕೊಂಡಿದೆ.

ನೈಸರ್ಗಿಕ ಸೌಂದರ್ಯಕ್ಕಾಗಿ ‘ದೇವರ ಸ್ವಂತ ನಾಡು’ ಎಂದು ಕರೆಯಲ್ಪಡುವ ಕೇರಳ, ತನ್ನ ರಮಣೀಯ ಪ್ರಕೃತಿ, ಪಾಕಪದ್ಧತಿ ಮತ್ತು ಹಿನ್ನೀರು ಹೆಸರುವಾಸಿಯಾಗಿದೆ. ಕೇರಳದ ಜೊತೆಗೆ ಲಂಡನ್, ಮೊರಿಯೊಕಾ, ಪಾಮ್ ಸ್ಪ್ರಿಂಗ್ಸ್ ಮತ್ತು ಗ್ರೀನ್‌ವಿಲ್ಲೆ ಸೇರಿದಂತೆ ಒಟ್ಟು 52 ಸ್ಥಳಗಳನ್ನು ನ್ಯೂಯಾರ್ಕ್ ಟೈಮ್ಸ್‌‌ ಪಟ್ಟಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳವು ಕಡಲತೀರಗಳು, ಗಿರಿಧಾಮಗಳು ಮತ್ತು ವಿವಿಧ ಪ್ರಕೃತಿಯ ಸ್ಥಳಾಕೃತಿಗಳಿಂದ ಕೂಡಿದೆ. ಇದು ಎಲ್ಲಾ ರೀತಿಯ ಪ್ರಯಾಣಿಕರನ್ನು ಆಕರ್ಷಿಸುವ ಪ್ರಯಾಣದ ತಾಣವಾಗಿದೆ.

ಸುಮಾರು ಎರಡು ವರ್ಷಗಳ ಕೊರೊನಾ ನಿರ್ಬಂಧಗಳ ನಂತರ ಪ್ರವಾಸೋದ್ಯಮ ಮತ್ತೆ ತೆರೆದುಕೊಳ್ಳುತ್ತುದ್ದು, ಹೆಚ್ಚಿನ ಜನರು ಪ್ರವಾಸ ಹೋಗಲು ಸ್ಥಳಗಳನ್ನು ಹುಡುಕುತ್ತಿದ್ದಾರೆ. ನ್ಯೂಯಾರ್ಕ್ ಟೈಮ್ಸ್‌ ಪಟ್ಟಿಯಲ್ಲಿ ಕೇರಳದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಗುರುತಿಸಿರುವುದು ರಾಜ್ಯಕ್ಕೆ ವಿಶ್ವದಾದ್ಯಂತ ಜನರನ್ನು ಆಕರ್ಷಿಸುತ್ತದೆ.

ರಾಜ್ಯಕ್ಕೆ ಪ್ರಯಾಣಿಸಲು ಯೋಜಿಸುತ್ತಿದ್ದರೆ ಕೇರಳದ ಹಲವಾರು ಸ್ಥಳಗಳಿದ್ದು, ಅವುಗಳಲ್ಲಿ ಕುಮಾರಕೋಮ್ ತನ್ನ ಸುಂದರವಾದ ಹಿನ್ನೀರಿಗೆ ಪ್ರಸಿದ್ದವಾಗಿದೆ. ಅಲಪ್ಪುಳದ ಕಡಲತೀರಗಳು, ಮುನ್ನಾರ್‌ನ ಮಂಜಿನ ಬೆಟ್ಟಗಳು ಮತ್ತು ಕಣ್ಣೂರು ಮತ್ತು ತಿರುವನಂತಪುರಂನ ಐತಿಹಾಸಿಕ ಸ್ಥಳಗಳು ಸೇರಿವೆ.

ರಾಜ್ಯವು ತನ್ನ ಪಾಕಪದ್ಧತಿಯಲ್ಲಿ ವೈವಿಧ್ಯಮಯ ಸಮುದ್ರಾಹಾರ ಭಕ್ಷ್ಯಗಳು, ಸಸ್ಯಾಹಾರಿ ಭಕ್ಷ್ಯಗಳು, ತಿಂಡಿಗಳು, ಪಾನೀಯಗಳಿಗೆ ಕೂಡಾ ಹೆಸರವಾಸಿಯಾಗಿದೆ. ಕೋಝಿಕ್ಕೋಡ್‌ನ ಉತ್ತರದ ಜಿಲ್ಲೆಯನ್ನು ವಿಶೇಷವಾಗಿ ರಾಜ್ಯದ ಆಹಾರ ನಗರ ಎಂದು ಕರೆಯಲಾಗುತ್ತದೆ. ಇಷ್ಟೆ ಅಲ್ಲದೆ, ಕಲಾಭಿಮಾನಿಗಳಿಗೆ ಕೇರಳ ಆಕರ್ಷನೆಯ ತಾಣವಾಗಿದ್ದು, ಹಲವಾರು ಜಾನಪದ ಆಚರಣೆಗಳನ್ನು ವೀಕ್ಷಿಸಲು ಸಾಧ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...