Homeಮುಖಪುಟ2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ತೀವ್ರ ಹೊಡೆತ ಬಿದ್ದಿದ್ದ ಪ್ರವಾಸೋದ್ಯಮವು ಇದೀಗ ಮತ್ತೆ ಚೇತರಿಸಿಕೊಳ್ಳುತ್ತಿದೆ. 2023ರಲ್ಲಿ ಪ್ರವಾಸ ಮಾಡಲು ಅತ್ಯುತ್ತಮ 52 ಸ್ಥಳಗಳನ್ನು ನ್ಯೂಯಾರ್ಕ್‌ ಟೈಮ್ಸ್‌ ಪಟ್ಟಿ ಮಾಡಿದ್ದು ಅದರಲ್ಲಿ ಕೇರಳವು ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಕಂಡು ಬಂದ ಭಾರತದ ಏಕೈಕ ಪ್ರದೇಶವಾಗಿ ಕೇರಳ ಕಾಣಿಸಿಕೊಂಡಿದೆ.

ನೈಸರ್ಗಿಕ ಸೌಂದರ್ಯಕ್ಕಾಗಿ ‘ದೇವರ ಸ್ವಂತ ನಾಡು’ ಎಂದು ಕರೆಯಲ್ಪಡುವ ಕೇರಳ, ತನ್ನ ರಮಣೀಯ ಪ್ರಕೃತಿ, ಪಾಕಪದ್ಧತಿ ಮತ್ತು ಹಿನ್ನೀರು ಹೆಸರುವಾಸಿಯಾಗಿದೆ. ಕೇರಳದ ಜೊತೆಗೆ ಲಂಡನ್, ಮೊರಿಯೊಕಾ, ಪಾಮ್ ಸ್ಪ್ರಿಂಗ್ಸ್ ಮತ್ತು ಗ್ರೀನ್‌ವಿಲ್ಲೆ ಸೇರಿದಂತೆ ಒಟ್ಟು 52 ಸ್ಥಳಗಳನ್ನು ನ್ಯೂಯಾರ್ಕ್ ಟೈಮ್ಸ್‌‌ ಪಟ್ಟಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳವು ಕಡಲತೀರಗಳು, ಗಿರಿಧಾಮಗಳು ಮತ್ತು ವಿವಿಧ ಪ್ರಕೃತಿಯ ಸ್ಥಳಾಕೃತಿಗಳಿಂದ ಕೂಡಿದೆ. ಇದು ಎಲ್ಲಾ ರೀತಿಯ ಪ್ರಯಾಣಿಕರನ್ನು ಆಕರ್ಷಿಸುವ ಪ್ರಯಾಣದ ತಾಣವಾಗಿದೆ.

ಸುಮಾರು ಎರಡು ವರ್ಷಗಳ ಕೊರೊನಾ ನಿರ್ಬಂಧಗಳ ನಂತರ ಪ್ರವಾಸೋದ್ಯಮ ಮತ್ತೆ ತೆರೆದುಕೊಳ್ಳುತ್ತುದ್ದು, ಹೆಚ್ಚಿನ ಜನರು ಪ್ರವಾಸ ಹೋಗಲು ಸ್ಥಳಗಳನ್ನು ಹುಡುಕುತ್ತಿದ್ದಾರೆ. ನ್ಯೂಯಾರ್ಕ್ ಟೈಮ್ಸ್‌ ಪಟ್ಟಿಯಲ್ಲಿ ಕೇರಳದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಗುರುತಿಸಿರುವುದು ರಾಜ್ಯಕ್ಕೆ ವಿಶ್ವದಾದ್ಯಂತ ಜನರನ್ನು ಆಕರ್ಷಿಸುತ್ತದೆ.

ರಾಜ್ಯಕ್ಕೆ ಪ್ರಯಾಣಿಸಲು ಯೋಜಿಸುತ್ತಿದ್ದರೆ ಕೇರಳದ ಹಲವಾರು ಸ್ಥಳಗಳಿದ್ದು, ಅವುಗಳಲ್ಲಿ ಕುಮಾರಕೋಮ್ ತನ್ನ ಸುಂದರವಾದ ಹಿನ್ನೀರಿಗೆ ಪ್ರಸಿದ್ದವಾಗಿದೆ. ಅಲಪ್ಪುಳದ ಕಡಲತೀರಗಳು, ಮುನ್ನಾರ್‌ನ ಮಂಜಿನ ಬೆಟ್ಟಗಳು ಮತ್ತು ಕಣ್ಣೂರು ಮತ್ತು ತಿರುವನಂತಪುರಂನ ಐತಿಹಾಸಿಕ ಸ್ಥಳಗಳು ಸೇರಿವೆ.

ರಾಜ್ಯವು ತನ್ನ ಪಾಕಪದ್ಧತಿಯಲ್ಲಿ ವೈವಿಧ್ಯಮಯ ಸಮುದ್ರಾಹಾರ ಭಕ್ಷ್ಯಗಳು, ಸಸ್ಯಾಹಾರಿ ಭಕ್ಷ್ಯಗಳು, ತಿಂಡಿಗಳು, ಪಾನೀಯಗಳಿಗೆ ಕೂಡಾ ಹೆಸರವಾಸಿಯಾಗಿದೆ. ಕೋಝಿಕ್ಕೋಡ್‌ನ ಉತ್ತರದ ಜಿಲ್ಲೆಯನ್ನು ವಿಶೇಷವಾಗಿ ರಾಜ್ಯದ ಆಹಾರ ನಗರ ಎಂದು ಕರೆಯಲಾಗುತ್ತದೆ. ಇಷ್ಟೆ ಅಲ್ಲದೆ, ಕಲಾಭಿಮಾನಿಗಳಿಗೆ ಕೇರಳ ಆಕರ್ಷನೆಯ ತಾಣವಾಗಿದ್ದು, ಹಲವಾರು ಜಾನಪದ ಆಚರಣೆಗಳನ್ನು ವೀಕ್ಷಿಸಲು ಸಾಧ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...