Homeಮುಖಪುಟ2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ತೀವ್ರ ಹೊಡೆತ ಬಿದ್ದಿದ್ದ ಪ್ರವಾಸೋದ್ಯಮವು ಇದೀಗ ಮತ್ತೆ ಚೇತರಿಸಿಕೊಳ್ಳುತ್ತಿದೆ. 2023ರಲ್ಲಿ ಪ್ರವಾಸ ಮಾಡಲು ಅತ್ಯುತ್ತಮ 52 ಸ್ಥಳಗಳನ್ನು ನ್ಯೂಯಾರ್ಕ್‌ ಟೈಮ್ಸ್‌ ಪಟ್ಟಿ ಮಾಡಿದ್ದು ಅದರಲ್ಲಿ ಕೇರಳವು ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಕಂಡು ಬಂದ ಭಾರತದ ಏಕೈಕ ಪ್ರದೇಶವಾಗಿ ಕೇರಳ ಕಾಣಿಸಿಕೊಂಡಿದೆ.

ನೈಸರ್ಗಿಕ ಸೌಂದರ್ಯಕ್ಕಾಗಿ ‘ದೇವರ ಸ್ವಂತ ನಾಡು’ ಎಂದು ಕರೆಯಲ್ಪಡುವ ಕೇರಳ, ತನ್ನ ರಮಣೀಯ ಪ್ರಕೃತಿ, ಪಾಕಪದ್ಧತಿ ಮತ್ತು ಹಿನ್ನೀರು ಹೆಸರುವಾಸಿಯಾಗಿದೆ. ಕೇರಳದ ಜೊತೆಗೆ ಲಂಡನ್, ಮೊರಿಯೊಕಾ, ಪಾಮ್ ಸ್ಪ್ರಿಂಗ್ಸ್ ಮತ್ತು ಗ್ರೀನ್‌ವಿಲ್ಲೆ ಸೇರಿದಂತೆ ಒಟ್ಟು 52 ಸ್ಥಳಗಳನ್ನು ನ್ಯೂಯಾರ್ಕ್ ಟೈಮ್ಸ್‌‌ ಪಟ್ಟಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳವು ಕಡಲತೀರಗಳು, ಗಿರಿಧಾಮಗಳು ಮತ್ತು ವಿವಿಧ ಪ್ರಕೃತಿಯ ಸ್ಥಳಾಕೃತಿಗಳಿಂದ ಕೂಡಿದೆ. ಇದು ಎಲ್ಲಾ ರೀತಿಯ ಪ್ರಯಾಣಿಕರನ್ನು ಆಕರ್ಷಿಸುವ ಪ್ರಯಾಣದ ತಾಣವಾಗಿದೆ.

ಸುಮಾರು ಎರಡು ವರ್ಷಗಳ ಕೊರೊನಾ ನಿರ್ಬಂಧಗಳ ನಂತರ ಪ್ರವಾಸೋದ್ಯಮ ಮತ್ತೆ ತೆರೆದುಕೊಳ್ಳುತ್ತುದ್ದು, ಹೆಚ್ಚಿನ ಜನರು ಪ್ರವಾಸ ಹೋಗಲು ಸ್ಥಳಗಳನ್ನು ಹುಡುಕುತ್ತಿದ್ದಾರೆ. ನ್ಯೂಯಾರ್ಕ್ ಟೈಮ್ಸ್‌ ಪಟ್ಟಿಯಲ್ಲಿ ಕೇರಳದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಗುರುತಿಸಿರುವುದು ರಾಜ್ಯಕ್ಕೆ ವಿಶ್ವದಾದ್ಯಂತ ಜನರನ್ನು ಆಕರ್ಷಿಸುತ್ತದೆ.

ರಾಜ್ಯಕ್ಕೆ ಪ್ರಯಾಣಿಸಲು ಯೋಜಿಸುತ್ತಿದ್ದರೆ ಕೇರಳದ ಹಲವಾರು ಸ್ಥಳಗಳಿದ್ದು, ಅವುಗಳಲ್ಲಿ ಕುಮಾರಕೋಮ್ ತನ್ನ ಸುಂದರವಾದ ಹಿನ್ನೀರಿಗೆ ಪ್ರಸಿದ್ದವಾಗಿದೆ. ಅಲಪ್ಪುಳದ ಕಡಲತೀರಗಳು, ಮುನ್ನಾರ್‌ನ ಮಂಜಿನ ಬೆಟ್ಟಗಳು ಮತ್ತು ಕಣ್ಣೂರು ಮತ್ತು ತಿರುವನಂತಪುರಂನ ಐತಿಹಾಸಿಕ ಸ್ಥಳಗಳು ಸೇರಿವೆ.

ರಾಜ್ಯವು ತನ್ನ ಪಾಕಪದ್ಧತಿಯಲ್ಲಿ ವೈವಿಧ್ಯಮಯ ಸಮುದ್ರಾಹಾರ ಭಕ್ಷ್ಯಗಳು, ಸಸ್ಯಾಹಾರಿ ಭಕ್ಷ್ಯಗಳು, ತಿಂಡಿಗಳು, ಪಾನೀಯಗಳಿಗೆ ಕೂಡಾ ಹೆಸರವಾಸಿಯಾಗಿದೆ. ಕೋಝಿಕ್ಕೋಡ್‌ನ ಉತ್ತರದ ಜಿಲ್ಲೆಯನ್ನು ವಿಶೇಷವಾಗಿ ರಾಜ್ಯದ ಆಹಾರ ನಗರ ಎಂದು ಕರೆಯಲಾಗುತ್ತದೆ. ಇಷ್ಟೆ ಅಲ್ಲದೆ, ಕಲಾಭಿಮಾನಿಗಳಿಗೆ ಕೇರಳ ಆಕರ್ಷನೆಯ ತಾಣವಾಗಿದ್ದು, ಹಲವಾರು ಜಾನಪದ ಆಚರಣೆಗಳನ್ನು ವೀಕ್ಷಿಸಲು ಸಾಧ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...