Homeಮುಖಪುಟ2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ತೀವ್ರ ಹೊಡೆತ ಬಿದ್ದಿದ್ದ ಪ್ರವಾಸೋದ್ಯಮವು ಇದೀಗ ಮತ್ತೆ ಚೇತರಿಸಿಕೊಳ್ಳುತ್ತಿದೆ. 2023ರಲ್ಲಿ ಪ್ರವಾಸ ಮಾಡಲು ಅತ್ಯುತ್ತಮ 52 ಸ್ಥಳಗಳನ್ನು ನ್ಯೂಯಾರ್ಕ್‌ ಟೈಮ್ಸ್‌ ಪಟ್ಟಿ ಮಾಡಿದ್ದು ಅದರಲ್ಲಿ ಕೇರಳವು ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಕಂಡು ಬಂದ ಭಾರತದ ಏಕೈಕ ಪ್ರದೇಶವಾಗಿ ಕೇರಳ ಕಾಣಿಸಿಕೊಂಡಿದೆ.

ನೈಸರ್ಗಿಕ ಸೌಂದರ್ಯಕ್ಕಾಗಿ ‘ದೇವರ ಸ್ವಂತ ನಾಡು’ ಎಂದು ಕರೆಯಲ್ಪಡುವ ಕೇರಳ, ತನ್ನ ರಮಣೀಯ ಪ್ರಕೃತಿ, ಪಾಕಪದ್ಧತಿ ಮತ್ತು ಹಿನ್ನೀರು ಹೆಸರುವಾಸಿಯಾಗಿದೆ. ಕೇರಳದ ಜೊತೆಗೆ ಲಂಡನ್, ಮೊರಿಯೊಕಾ, ಪಾಮ್ ಸ್ಪ್ರಿಂಗ್ಸ್ ಮತ್ತು ಗ್ರೀನ್‌ವಿಲ್ಲೆ ಸೇರಿದಂತೆ ಒಟ್ಟು 52 ಸ್ಥಳಗಳನ್ನು ನ್ಯೂಯಾರ್ಕ್ ಟೈಮ್ಸ್‌‌ ಪಟ್ಟಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳವು ಕಡಲತೀರಗಳು, ಗಿರಿಧಾಮಗಳು ಮತ್ತು ವಿವಿಧ ಪ್ರಕೃತಿಯ ಸ್ಥಳಾಕೃತಿಗಳಿಂದ ಕೂಡಿದೆ. ಇದು ಎಲ್ಲಾ ರೀತಿಯ ಪ್ರಯಾಣಿಕರನ್ನು ಆಕರ್ಷಿಸುವ ಪ್ರಯಾಣದ ತಾಣವಾಗಿದೆ.

ಸುಮಾರು ಎರಡು ವರ್ಷಗಳ ಕೊರೊನಾ ನಿರ್ಬಂಧಗಳ ನಂತರ ಪ್ರವಾಸೋದ್ಯಮ ಮತ್ತೆ ತೆರೆದುಕೊಳ್ಳುತ್ತುದ್ದು, ಹೆಚ್ಚಿನ ಜನರು ಪ್ರವಾಸ ಹೋಗಲು ಸ್ಥಳಗಳನ್ನು ಹುಡುಕುತ್ತಿದ್ದಾರೆ. ನ್ಯೂಯಾರ್ಕ್ ಟೈಮ್ಸ್‌ ಪಟ್ಟಿಯಲ್ಲಿ ಕೇರಳದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಗುರುತಿಸಿರುವುದು ರಾಜ್ಯಕ್ಕೆ ವಿಶ್ವದಾದ್ಯಂತ ಜನರನ್ನು ಆಕರ್ಷಿಸುತ್ತದೆ.

ರಾಜ್ಯಕ್ಕೆ ಪ್ರಯಾಣಿಸಲು ಯೋಜಿಸುತ್ತಿದ್ದರೆ ಕೇರಳದ ಹಲವಾರು ಸ್ಥಳಗಳಿದ್ದು, ಅವುಗಳಲ್ಲಿ ಕುಮಾರಕೋಮ್ ತನ್ನ ಸುಂದರವಾದ ಹಿನ್ನೀರಿಗೆ ಪ್ರಸಿದ್ದವಾಗಿದೆ. ಅಲಪ್ಪುಳದ ಕಡಲತೀರಗಳು, ಮುನ್ನಾರ್‌ನ ಮಂಜಿನ ಬೆಟ್ಟಗಳು ಮತ್ತು ಕಣ್ಣೂರು ಮತ್ತು ತಿರುವನಂತಪುರಂನ ಐತಿಹಾಸಿಕ ಸ್ಥಳಗಳು ಸೇರಿವೆ.

ರಾಜ್ಯವು ತನ್ನ ಪಾಕಪದ್ಧತಿಯಲ್ಲಿ ವೈವಿಧ್ಯಮಯ ಸಮುದ್ರಾಹಾರ ಭಕ್ಷ್ಯಗಳು, ಸಸ್ಯಾಹಾರಿ ಭಕ್ಷ್ಯಗಳು, ತಿಂಡಿಗಳು, ಪಾನೀಯಗಳಿಗೆ ಕೂಡಾ ಹೆಸರವಾಸಿಯಾಗಿದೆ. ಕೋಝಿಕ್ಕೋಡ್‌ನ ಉತ್ತರದ ಜಿಲ್ಲೆಯನ್ನು ವಿಶೇಷವಾಗಿ ರಾಜ್ಯದ ಆಹಾರ ನಗರ ಎಂದು ಕರೆಯಲಾಗುತ್ತದೆ. ಇಷ್ಟೆ ಅಲ್ಲದೆ, ಕಲಾಭಿಮಾನಿಗಳಿಗೆ ಕೇರಳ ಆಕರ್ಷನೆಯ ತಾಣವಾಗಿದ್ದು, ಹಲವಾರು ಜಾನಪದ ಆಚರಣೆಗಳನ್ನು ವೀಕ್ಷಿಸಲು ಸಾಧ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...