Homeಮುಖಪುಟಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

- Advertisement -
- Advertisement -

ಕೊಚ್ಚಿ: ಫೆಬ್ರವರಿ 7ರಂದು ಕೊಚ್ಚಿಯಲ್ಲಿ ಸಹಾಯಕ ಮೇಕಪ್ ಕಲಾವಿದೆಯಾಗಿ ಕೆಲಸ ಮಾಡುತ್ತಿರುವ 33 ವರ್ಷದ ಟ್ರಾನ್ಸ್‌ಜೆಂಡರ್ ಮಹಿಳೆ ಏಂಜೆಲ್ ಶಿವಾನಿ ಎಂಬುವರು ಪಳರಿವತ್ತಂ ಮೆಟ್ರೋ ನಿಲ್ದಾಣದ ಹೊರಗೆ ಕಾಯುತ್ತಿದ್ದರು. ಅವರನ್ನು ನೋಡಿದಾಗ ಪಲ್ಲೂರುತಿಯ ವ್ಯಕ್ತಿಯೊಬ್ಬ ಯಾವುದೇ ಪ್ರಚೋದನೆಯಿಲ್ಲದೆ ಕಬ್ಬಿಣದ ರಾಡ್‌ನಿಂದ ಅವರನ್ನು ಹೊಡೆದನು. ಇದರಿಂದಾಗಿ ಏಂಜೆಲ್‌ ಮೈಮೂಳೆ ಮುರಿತಕ್ಕೊಳಗಾದರು.

ಕೇರಳದಾದ್ಯಂತ ಟ್ರಾನ್ಸ್‌ಜೆಂಡರ್ ಸಮುದಾಯದ ವಿರುದ್ಧ ಇತ್ತೀಚೆಗೆ ಹೆಚ್ಚುತ್ತಿರುವ ದಾಳಿಗಳನ್ನು ಪರಿಗಣಿಸಿ, ರಾಜ್ಯದ ಪ್ರತಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕ(ಟಿಪಿಸಿ) ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ. ಕಳೆದ ವಾರ ಈ ಆದೇಶ ಹೊರಡಿಸಲಾಗಿದೆ.

2021ರಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MoHA) ದೇಶದ ಎಲ್ಲಾ ಜಿಲ್ಲೆಗಳಲ್ಲಿ ಅಂತಹ ಘಟಕಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು.

ಈ ಹಿಂದೆ ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು, ಮಕ್ಕಳು ಮತ್ತು ದುರ್ಬಲ ವಿಭಾಗ (WCWS) ಘಟಕಗಳು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ಸಲ್ಲಿಸಿದ ದೂರುಗಳನ್ನು ನಿರ್ವಹಿಸುತ್ತಿತ್ತು. ಆದಾಗ್ಯೂ ಈಗ ರಾಜ್ಯದ ಎಲ್ಲಾ 20 ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟಿಪಿಸಿಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಎಲ್ಲಾ ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಟಿಪಿಸಿಗಳು ಈ ಘಟಕಗಳ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತವೆ. ವರ್ಷದ ಅಂತ್ಯದ ವೇಳೆಗೆ ಅವು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತವೆ”ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಟಿಪಿಸಿಗಳು ಟ್ರಾನ್ಸ್ಜೆಂಡರ್ ಜನರ ಮೇಲಿನ ದೌರ್ಜನ್ಯದ ದೂರುಗಳನ್ನು ನಿಭಾಯಿಸುತ್ತವೆ. ಅದೇ ರೀತಿ ಸಮುದಾಯದ ಸದಸ್ಯರನ್ನು ಅಪರಾಧ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಟಿಪಿಸಿಗಳು ಟ್ರಾನ್ಸ್ಜೆಂಡರ್ ಜನರನ್ನು ಸಮಾಜದ ಮುಂಚೂಣಿಗೆ ತರಲು ಕೌನ್ಸೆಲಿಂಗ್ ಅವಧಿಗಳನ್ನು ಸಹ ಏರ್ಪಡಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಘಟಕಗಳ ಜೊತೆ ಕೌನ್ಸೆಲಿಂಗ್ ಘಟಕಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಮಹಿಳಾ ಘಟಕಗಳನ್ನು ಪ್ರಸ್ತುತ ಮಹಿಳಾ ವೃತ್ತ ನಿರೀಕ್ಷಕರು ನೇತೃತ್ವ ವಹಿಸುತ್ತಾರೆ. ಅವರು ಟಿಪಿಸಿಗಳ ಮುಖ್ಯಸ್ಥರಾಗಿರುತ್ತಾರೆ. ಸರ್ಕಾರದ ಆದೇಶದ ಪ್ರಕಾರ, ಟಿಪಿಸಿಗಳಿಗೆ ಸಂಬಂಧಿಸಿದ ಅಧಿಕಾರಿಗಳು ಟ್ರಾನ್ಸ್ಜೆಂಡರ್ ವ್ಯಕ್ತಿಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ ವ್ಯಕ್ತಿಗಳ ದಾಖಲೆಗಳನ್ನು ಪಡೆಯಬಹುದು ಮತ್ತು ಸಂದರ್ಶನ ಮಾಡಬಹುದು ”ಎಂದು ಅಧಿಕಾರಿ ಹೇಳಿದರು.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮೊದಲ ಟ್ರಾನ್ಸ್ಜೆಂಡರ್ ಸದಸ್ಯೆ ಅರುಣಿಮಾ, ಟ್ರಾನ್ಸ್ಜೆಂಡರ್‌ ಘಟಕಗಳನ್ನು ಪ್ರಾರಂಭಿಸುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಸಮುದಾಯದ ರಕ್ಷಣೆ ಮತ್ತು ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಇದು ಸಾಕಾಗುವುದಿಲ್ಲ ಎಂದು ತಿಳಿಸಿದರು.

ನಮ್ಮ ಸಮಸ್ಯೆಗಳನ್ನು ನಿಭಾಯಿಸುವ ಟಿಪಿಸಿಗಳನ್ನು ಸ್ಥಾಪಿಸುವುದು ಖಂಡಿತವಾಗಿಯೂ ಒಳ್ಳೆಯದು. ಆದಾಗ್ಯೂ ಈ ಉಪಕ್ರಮದ ಬಗ್ಗೆ ನಮಗೆ ಹಲವಾರು ಆತಂಕಗಳಿವೆ. ಟಿಪಿಸಿಗಳನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ನಿರ್ವಹಿಸುತ್ತಾರೆ. ಇದು ಟ್ರಾನ್ಸ್ಜೆಂಡರ್ ಆಗಿರುವಂತಹ ಜನರ ಪ್ರಾತಿನಿಧ್ಯವಿಲ್ಲ ಎಂದು ಅರುಣಿಮಾ ಆರೋಪಿಸಿದರು.

ಕೇರಳ ಪೊಲೀಸರು ತಮ್ಮ ನಿರ್ದಿಷ್ಟ ಸಮಸ್ಯೆಗಳನ್ನು ನಿಭಾಯಿಸಲು ಸಮುದಾಯದ ಸದಸ್ಯರನ್ನು ಪೊಲೀಸ್ ಪಡೆಗೆ ನೇಮಿಸಿಕೊಳ್ಳಬೇಕು. ಎಲ್ಲಾ ಜಿಲ್ಲೆಗಳಲ್ಲಿ ಟ್ರಾನ್ಸ್ಜೆಂಡರ್‌ಗಳಿಗಾಗಿ ಮೀಸಲಾದ ಪೊಲೀಸ್ ಠಾಣೆ ಇರಬೇಕು ಎಂದು ಅರುಣಿಮಾ ತಿಳಿಸಿದರು.

ನಮ್ಮ ಸಮುದಾಯದ ಜನರು ಕಳಪೆ ಸಂಬಳದಿಂದಾಗಿ ಕೊಚ್ಚಿ ಮೆಟ್ರೋಗೆ ರಾಜೀನಾಮೆ ನೀಡಿದ್ದಾರೆ ಎಂದು ಅರುಣಿಮಾ ಹೇಳಿದರು,

ನಮ್ಮ ಸಮಸ್ಯೆಗಳನ್ನು ನಾವು ಮಾತ್ರ ಅರ್ಥಮಾಡಿಕೊಳ್ಳಬಲ್ಲೆವು. ಇತರೆ ರಾಜ್ಯಗಳು ಟ್ರಾನ್ಸ್ಜೆಂಡರ್‌ ವ್ಯಕ್ತಿಗಳನ್ನು ಪೊಲೀಸ್ ಪಡೆಗೆ ನೇಮಿಸಿಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ನಾವು ಹಲವಾರು ವರ್ಷಗಳ ಹಿಂದೆ ಸರ್ಕಾರಕ್ಕೆ ವಿನಂತಿಸಿದ್ದೇವೆ. ಆದಾಗ್ಯೂ ಈ ಕುರಿತು ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...