Homeಮುಖಪುಟಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

- Advertisement -
- Advertisement -

ಕೊಚ್ಚಿ: ಫೆಬ್ರವರಿ 7ರಂದು ಕೊಚ್ಚಿಯಲ್ಲಿ ಸಹಾಯಕ ಮೇಕಪ್ ಕಲಾವಿದೆಯಾಗಿ ಕೆಲಸ ಮಾಡುತ್ತಿರುವ 33 ವರ್ಷದ ಟ್ರಾನ್ಸ್‌ಜೆಂಡರ್ ಮಹಿಳೆ ಏಂಜೆಲ್ ಶಿವಾನಿ ಎಂಬುವರು ಪಳರಿವತ್ತಂ ಮೆಟ್ರೋ ನಿಲ್ದಾಣದ ಹೊರಗೆ ಕಾಯುತ್ತಿದ್ದರು. ಅವರನ್ನು ನೋಡಿದಾಗ ಪಲ್ಲೂರುತಿಯ ವ್ಯಕ್ತಿಯೊಬ್ಬ ಯಾವುದೇ ಪ್ರಚೋದನೆಯಿಲ್ಲದೆ ಕಬ್ಬಿಣದ ರಾಡ್‌ನಿಂದ ಅವರನ್ನು ಹೊಡೆದನು. ಇದರಿಂದಾಗಿ ಏಂಜೆಲ್‌ ಮೈಮೂಳೆ ಮುರಿತಕ್ಕೊಳಗಾದರು.

ಕೇರಳದಾದ್ಯಂತ ಟ್ರಾನ್ಸ್‌ಜೆಂಡರ್ ಸಮುದಾಯದ ವಿರುದ್ಧ ಇತ್ತೀಚೆಗೆ ಹೆಚ್ಚುತ್ತಿರುವ ದಾಳಿಗಳನ್ನು ಪರಿಗಣಿಸಿ, ರಾಜ್ಯದ ಪ್ರತಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕ(ಟಿಪಿಸಿ) ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ. ಕಳೆದ ವಾರ ಈ ಆದೇಶ ಹೊರಡಿಸಲಾಗಿದೆ.

2021ರಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MoHA) ದೇಶದ ಎಲ್ಲಾ ಜಿಲ್ಲೆಗಳಲ್ಲಿ ಅಂತಹ ಘಟಕಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು.

ಈ ಹಿಂದೆ ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು, ಮಕ್ಕಳು ಮತ್ತು ದುರ್ಬಲ ವಿಭಾಗ (WCWS) ಘಟಕಗಳು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ಸಲ್ಲಿಸಿದ ದೂರುಗಳನ್ನು ನಿರ್ವಹಿಸುತ್ತಿತ್ತು. ಆದಾಗ್ಯೂ ಈಗ ರಾಜ್ಯದ ಎಲ್ಲಾ 20 ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟಿಪಿಸಿಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಎಲ್ಲಾ ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಟಿಪಿಸಿಗಳು ಈ ಘಟಕಗಳ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತವೆ. ವರ್ಷದ ಅಂತ್ಯದ ವೇಳೆಗೆ ಅವು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತವೆ”ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಟಿಪಿಸಿಗಳು ಟ್ರಾನ್ಸ್ಜೆಂಡರ್ ಜನರ ಮೇಲಿನ ದೌರ್ಜನ್ಯದ ದೂರುಗಳನ್ನು ನಿಭಾಯಿಸುತ್ತವೆ. ಅದೇ ರೀತಿ ಸಮುದಾಯದ ಸದಸ್ಯರನ್ನು ಅಪರಾಧ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಟಿಪಿಸಿಗಳು ಟ್ರಾನ್ಸ್ಜೆಂಡರ್ ಜನರನ್ನು ಸಮಾಜದ ಮುಂಚೂಣಿಗೆ ತರಲು ಕೌನ್ಸೆಲಿಂಗ್ ಅವಧಿಗಳನ್ನು ಸಹ ಏರ್ಪಡಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಘಟಕಗಳ ಜೊತೆ ಕೌನ್ಸೆಲಿಂಗ್ ಘಟಕಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಮಹಿಳಾ ಘಟಕಗಳನ್ನು ಪ್ರಸ್ತುತ ಮಹಿಳಾ ವೃತ್ತ ನಿರೀಕ್ಷಕರು ನೇತೃತ್ವ ವಹಿಸುತ್ತಾರೆ. ಅವರು ಟಿಪಿಸಿಗಳ ಮುಖ್ಯಸ್ಥರಾಗಿರುತ್ತಾರೆ. ಸರ್ಕಾರದ ಆದೇಶದ ಪ್ರಕಾರ, ಟಿಪಿಸಿಗಳಿಗೆ ಸಂಬಂಧಿಸಿದ ಅಧಿಕಾರಿಗಳು ಟ್ರಾನ್ಸ್ಜೆಂಡರ್ ವ್ಯಕ್ತಿಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ ವ್ಯಕ್ತಿಗಳ ದಾಖಲೆಗಳನ್ನು ಪಡೆಯಬಹುದು ಮತ್ತು ಸಂದರ್ಶನ ಮಾಡಬಹುದು ”ಎಂದು ಅಧಿಕಾರಿ ಹೇಳಿದರು.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮೊದಲ ಟ್ರಾನ್ಸ್ಜೆಂಡರ್ ಸದಸ್ಯೆ ಅರುಣಿಮಾ, ಟ್ರಾನ್ಸ್ಜೆಂಡರ್‌ ಘಟಕಗಳನ್ನು ಪ್ರಾರಂಭಿಸುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಸಮುದಾಯದ ರಕ್ಷಣೆ ಮತ್ತು ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಇದು ಸಾಕಾಗುವುದಿಲ್ಲ ಎಂದು ತಿಳಿಸಿದರು.

ನಮ್ಮ ಸಮಸ್ಯೆಗಳನ್ನು ನಿಭಾಯಿಸುವ ಟಿಪಿಸಿಗಳನ್ನು ಸ್ಥಾಪಿಸುವುದು ಖಂಡಿತವಾಗಿಯೂ ಒಳ್ಳೆಯದು. ಆದಾಗ್ಯೂ ಈ ಉಪಕ್ರಮದ ಬಗ್ಗೆ ನಮಗೆ ಹಲವಾರು ಆತಂಕಗಳಿವೆ. ಟಿಪಿಸಿಗಳನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ನಿರ್ವಹಿಸುತ್ತಾರೆ. ಇದು ಟ್ರಾನ್ಸ್ಜೆಂಡರ್ ಆಗಿರುವಂತಹ ಜನರ ಪ್ರಾತಿನಿಧ್ಯವಿಲ್ಲ ಎಂದು ಅರುಣಿಮಾ ಆರೋಪಿಸಿದರು.

ಕೇರಳ ಪೊಲೀಸರು ತಮ್ಮ ನಿರ್ದಿಷ್ಟ ಸಮಸ್ಯೆಗಳನ್ನು ನಿಭಾಯಿಸಲು ಸಮುದಾಯದ ಸದಸ್ಯರನ್ನು ಪೊಲೀಸ್ ಪಡೆಗೆ ನೇಮಿಸಿಕೊಳ್ಳಬೇಕು. ಎಲ್ಲಾ ಜಿಲ್ಲೆಗಳಲ್ಲಿ ಟ್ರಾನ್ಸ್ಜೆಂಡರ್‌ಗಳಿಗಾಗಿ ಮೀಸಲಾದ ಪೊಲೀಸ್ ಠಾಣೆ ಇರಬೇಕು ಎಂದು ಅರುಣಿಮಾ ತಿಳಿಸಿದರು.

ನಮ್ಮ ಸಮುದಾಯದ ಜನರು ಕಳಪೆ ಸಂಬಳದಿಂದಾಗಿ ಕೊಚ್ಚಿ ಮೆಟ್ರೋಗೆ ರಾಜೀನಾಮೆ ನೀಡಿದ್ದಾರೆ ಎಂದು ಅರುಣಿಮಾ ಹೇಳಿದರು,

ನಮ್ಮ ಸಮಸ್ಯೆಗಳನ್ನು ನಾವು ಮಾತ್ರ ಅರ್ಥಮಾಡಿಕೊಳ್ಳಬಲ್ಲೆವು. ಇತರೆ ರಾಜ್ಯಗಳು ಟ್ರಾನ್ಸ್ಜೆಂಡರ್‌ ವ್ಯಕ್ತಿಗಳನ್ನು ಪೊಲೀಸ್ ಪಡೆಗೆ ನೇಮಿಸಿಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ನಾವು ಹಲವಾರು ವರ್ಷಗಳ ಹಿಂದೆ ಸರ್ಕಾರಕ್ಕೆ ವಿನಂತಿಸಿದ್ದೇವೆ. ಆದಾಗ್ಯೂ ಈ ಕುರಿತು ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...