Homeಮುಖಪುಟಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

- Advertisement -
- Advertisement -

ಕೊಚ್ಚಿ: ಫೆಬ್ರವರಿ 7ರಂದು ಕೊಚ್ಚಿಯಲ್ಲಿ ಸಹಾಯಕ ಮೇಕಪ್ ಕಲಾವಿದೆಯಾಗಿ ಕೆಲಸ ಮಾಡುತ್ತಿರುವ 33 ವರ್ಷದ ಟ್ರಾನ್ಸ್‌ಜೆಂಡರ್ ಮಹಿಳೆ ಏಂಜೆಲ್ ಶಿವಾನಿ ಎಂಬುವರು ಪಳರಿವತ್ತಂ ಮೆಟ್ರೋ ನಿಲ್ದಾಣದ ಹೊರಗೆ ಕಾಯುತ್ತಿದ್ದರು. ಅವರನ್ನು ನೋಡಿದಾಗ ಪಲ್ಲೂರುತಿಯ ವ್ಯಕ್ತಿಯೊಬ್ಬ ಯಾವುದೇ ಪ್ರಚೋದನೆಯಿಲ್ಲದೆ ಕಬ್ಬಿಣದ ರಾಡ್‌ನಿಂದ ಅವರನ್ನು ಹೊಡೆದನು. ಇದರಿಂದಾಗಿ ಏಂಜೆಲ್‌ ಮೈಮೂಳೆ ಮುರಿತಕ್ಕೊಳಗಾದರು.

ಕೇರಳದಾದ್ಯಂತ ಟ್ರಾನ್ಸ್‌ಜೆಂಡರ್ ಸಮುದಾಯದ ವಿರುದ್ಧ ಇತ್ತೀಚೆಗೆ ಹೆಚ್ಚುತ್ತಿರುವ ದಾಳಿಗಳನ್ನು ಪರಿಗಣಿಸಿ, ರಾಜ್ಯದ ಪ್ರತಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕ(ಟಿಪಿಸಿ) ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ. ಕಳೆದ ವಾರ ಈ ಆದೇಶ ಹೊರಡಿಸಲಾಗಿದೆ.

2021ರಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MoHA) ದೇಶದ ಎಲ್ಲಾ ಜಿಲ್ಲೆಗಳಲ್ಲಿ ಅಂತಹ ಘಟಕಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು.

ಈ ಹಿಂದೆ ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು, ಮಕ್ಕಳು ಮತ್ತು ದುರ್ಬಲ ವಿಭಾಗ (WCWS) ಘಟಕಗಳು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ಸಲ್ಲಿಸಿದ ದೂರುಗಳನ್ನು ನಿರ್ವಹಿಸುತ್ತಿತ್ತು. ಆದಾಗ್ಯೂ ಈಗ ರಾಜ್ಯದ ಎಲ್ಲಾ 20 ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟಿಪಿಸಿಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಎಲ್ಲಾ ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಟಿಪಿಸಿಗಳು ಈ ಘಟಕಗಳ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತವೆ. ವರ್ಷದ ಅಂತ್ಯದ ವೇಳೆಗೆ ಅವು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತವೆ”ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಟಿಪಿಸಿಗಳು ಟ್ರಾನ್ಸ್ಜೆಂಡರ್ ಜನರ ಮೇಲಿನ ದೌರ್ಜನ್ಯದ ದೂರುಗಳನ್ನು ನಿಭಾಯಿಸುತ್ತವೆ. ಅದೇ ರೀತಿ ಸಮುದಾಯದ ಸದಸ್ಯರನ್ನು ಅಪರಾಧ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಟಿಪಿಸಿಗಳು ಟ್ರಾನ್ಸ್ಜೆಂಡರ್ ಜನರನ್ನು ಸಮಾಜದ ಮುಂಚೂಣಿಗೆ ತರಲು ಕೌನ್ಸೆಲಿಂಗ್ ಅವಧಿಗಳನ್ನು ಸಹ ಏರ್ಪಡಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಘಟಕಗಳ ಜೊತೆ ಕೌನ್ಸೆಲಿಂಗ್ ಘಟಕಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಮಹಿಳಾ ಘಟಕಗಳನ್ನು ಪ್ರಸ್ತುತ ಮಹಿಳಾ ವೃತ್ತ ನಿರೀಕ್ಷಕರು ನೇತೃತ್ವ ವಹಿಸುತ್ತಾರೆ. ಅವರು ಟಿಪಿಸಿಗಳ ಮುಖ್ಯಸ್ಥರಾಗಿರುತ್ತಾರೆ. ಸರ್ಕಾರದ ಆದೇಶದ ಪ್ರಕಾರ, ಟಿಪಿಸಿಗಳಿಗೆ ಸಂಬಂಧಿಸಿದ ಅಧಿಕಾರಿಗಳು ಟ್ರಾನ್ಸ್ಜೆಂಡರ್ ವ್ಯಕ್ತಿಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ ವ್ಯಕ್ತಿಗಳ ದಾಖಲೆಗಳನ್ನು ಪಡೆಯಬಹುದು ಮತ್ತು ಸಂದರ್ಶನ ಮಾಡಬಹುದು ”ಎಂದು ಅಧಿಕಾರಿ ಹೇಳಿದರು.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮೊದಲ ಟ್ರಾನ್ಸ್ಜೆಂಡರ್ ಸದಸ್ಯೆ ಅರುಣಿಮಾ, ಟ್ರಾನ್ಸ್ಜೆಂಡರ್‌ ಘಟಕಗಳನ್ನು ಪ್ರಾರಂಭಿಸುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಸಮುದಾಯದ ರಕ್ಷಣೆ ಮತ್ತು ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಇದು ಸಾಕಾಗುವುದಿಲ್ಲ ಎಂದು ತಿಳಿಸಿದರು.

ನಮ್ಮ ಸಮಸ್ಯೆಗಳನ್ನು ನಿಭಾಯಿಸುವ ಟಿಪಿಸಿಗಳನ್ನು ಸ್ಥಾಪಿಸುವುದು ಖಂಡಿತವಾಗಿಯೂ ಒಳ್ಳೆಯದು. ಆದಾಗ್ಯೂ ಈ ಉಪಕ್ರಮದ ಬಗ್ಗೆ ನಮಗೆ ಹಲವಾರು ಆತಂಕಗಳಿವೆ. ಟಿಪಿಸಿಗಳನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ನಿರ್ವಹಿಸುತ್ತಾರೆ. ಇದು ಟ್ರಾನ್ಸ್ಜೆಂಡರ್ ಆಗಿರುವಂತಹ ಜನರ ಪ್ರಾತಿನಿಧ್ಯವಿಲ್ಲ ಎಂದು ಅರುಣಿಮಾ ಆರೋಪಿಸಿದರು.

ಕೇರಳ ಪೊಲೀಸರು ತಮ್ಮ ನಿರ್ದಿಷ್ಟ ಸಮಸ್ಯೆಗಳನ್ನು ನಿಭಾಯಿಸಲು ಸಮುದಾಯದ ಸದಸ್ಯರನ್ನು ಪೊಲೀಸ್ ಪಡೆಗೆ ನೇಮಿಸಿಕೊಳ್ಳಬೇಕು. ಎಲ್ಲಾ ಜಿಲ್ಲೆಗಳಲ್ಲಿ ಟ್ರಾನ್ಸ್ಜೆಂಡರ್‌ಗಳಿಗಾಗಿ ಮೀಸಲಾದ ಪೊಲೀಸ್ ಠಾಣೆ ಇರಬೇಕು ಎಂದು ಅರುಣಿಮಾ ತಿಳಿಸಿದರು.

ನಮ್ಮ ಸಮುದಾಯದ ಜನರು ಕಳಪೆ ಸಂಬಳದಿಂದಾಗಿ ಕೊಚ್ಚಿ ಮೆಟ್ರೋಗೆ ರಾಜೀನಾಮೆ ನೀಡಿದ್ದಾರೆ ಎಂದು ಅರುಣಿಮಾ ಹೇಳಿದರು,

ನಮ್ಮ ಸಮಸ್ಯೆಗಳನ್ನು ನಾವು ಮಾತ್ರ ಅರ್ಥಮಾಡಿಕೊಳ್ಳಬಲ್ಲೆವು. ಇತರೆ ರಾಜ್ಯಗಳು ಟ್ರಾನ್ಸ್ಜೆಂಡರ್‌ ವ್ಯಕ್ತಿಗಳನ್ನು ಪೊಲೀಸ್ ಪಡೆಗೆ ನೇಮಿಸಿಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ನಾವು ಹಲವಾರು ವರ್ಷಗಳ ಹಿಂದೆ ಸರ್ಕಾರಕ್ಕೆ ವಿನಂತಿಸಿದ್ದೇವೆ. ಆದಾಗ್ಯೂ ಈ ಕುರಿತು ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...