Homeಮುಖಪುಟಲಿಂಗ ಸಮಾನತೆಗೆ ಒತ್ತು : ಪೊಲೀಸ್ ಪಾಸಿಂಗ್-ಔಟ್ ಪ್ರತಿಜ್ಞೆ ಪರಿಷ್ಕರಿಸಿದ ಕೇರಳ ಸರ್ಕಾರ

ಲಿಂಗ ಸಮಾನತೆಗೆ ಒತ್ತು : ಪೊಲೀಸ್ ಪಾಸಿಂಗ್-ಔಟ್ ಪ್ರತಿಜ್ಞೆ ಪರಿಷ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

ಲಿಂಗ ಸಮಾನತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಕೇರಳ ರಾಜ್ಯ ಸರ್ಕಾರವು ಪೊಲೀಸ್ ಪಡೆಗಳ ಪಾಸಿಂಗ್-ಔಟ್ ಪರೇಡ್‌ ಪ್ರತಿಜ್ಞೆಯನ್ನು ತಿದ್ದುಪಡಿ ಮಾಡಿದೆ.

ಪರಿಷ್ಕೃತ ಪ್ರತಿಜ್ಞೆಯಲ್ಲಿ ‘ಪೊಲೀಸ್‌ಮ್ಯಾನ್’ (Police Man) ಎಂಬ ಪದವನ್ನು ತೆಗೆದು ಹಾಕಿ ಲಿಂಗ-ತಟಸ್ಥ ಪದ ‘ಪೊಲೀಸ್ ಸಿಬ್ಬಂದಿ’ (Police Personnel) ಎಂದು ಬದಲಾಯಿಸಿದೆ ಎಂದು ವರದಿಯಾಗಿದೆ.

ಜನವರಿ 3, ಶುಕ್ರವಾರ ಹೆಚ್ಚುವರಿ ಮಹಾನಿರ್ದೇಶಕ ಮನೋಜ್ ಅಬ್ರಹಾಂ ಅವರು ಪ್ರತಿಜ್ಞೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಗೃಹ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದಾರೆ. ಪರಿಷ್ಕರಣೆ ಕಾರಣದಿಂದ ಪೊಲೀಸರು ಇನ್ನು ಮುಂದೆ ಪಾಸಿಂಗ್ ಔಟ್‌ ವೇಳೆ “ಪೊಲೀಸ್ ಸಿಬ್ಬಂದಿಯಾಗಿ’ ನಾನು ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸುವುದಾಗಿ ಪ್ರತಿಜ್ಞೆ ಮಾಡುತ್ತೇನೆ” ಎಂದು ಹೇಳಲಿದ್ದಾರೆ.

2011ರಲ್ಲಿ ಸುತ್ತೋಲೆ ಹೊರಡಿಸಿದ್ದ ರಾಜ್ಯ ಪೊಲೀಸ್ ಮುಖ್ಯಸ್ಥರು, ಮಹಿಳಾ ಪೊಲೀಸ್ ಸಿಬ್ಬಂದಿ ತಮ್ಮ ಹುದ್ದೆಯ ಮುಂದೆ ‘ಮಹಿಳೆ’ ಎಂದು ಉಲ್ಲೇಖಿಸುವುದನ್ನು ನಿಷೇಧಿಸಿದ್ದರು. ಉದಾ : ವುಮೆನ್ ಪೊಲೀಸ್ ಕಾನ್‌ಸ್ಟೇಬಲ್, ವುಮೆನ್‌ ಹೆಡ್‌ ಕಾನ್‌ಸ್ಟೇಬಲ್, ವುಮೆನ್‌ ಸಬ್‌-ಇನ್‌ಸ್ಪೆಕ್ಟರ್, ವುಮೆನ್ ಸರ್ಕಲ್ ಇನ್‌ಸ್ಪೆಕ್ಟರ್‌ ಮತ್ತು ವುಮೆನ್‌ ಸೂಪರಿಡೆಂಟ್‌ ಆಫ್ ಪೊಲೀಸ್.

ಕೇರಳ ಪೊಲೀಸ್ ಕಾಯ್ದೆ- 2011ರ ಪರಿಚ್ಛೇದ 87ರ ಪ್ರಕಾರ, ಪೊಲೀಸ್ ಪಡೆಗೆ ಸೇರುವ ಪ್ರತಿಯೊಬ್ಬ ವ್ಯಕ್ತಿಯೂ ತರಬೇತಿಯನ್ನು ತೃಪ್ತಿಕರವಾಗಿ ಪೂರ್ಣಗೊಳಿಸಿದ ನಂತರ, ನೇಮಕಾತಿ ಪ್ರಾಧಿಕಾರ ಅಥವಾ ನಾಮ ನಿರ್ದೇಶನಗೊಂಡ ಅಧಿಕಾರಿಯ ಮುಂದೆ (ನಿಗದಿತ ಸ್ವರೂಪದಲ್ಲಿ) ಪ್ರಮಾಣ ವಚನ ಸ್ವೀಕರಿಸಬೇಕು.

ಲಿಂಗ-ನಿರ್ದಿಷ್ಟ ಅರ್ಹತೆ ಇಲ್ಲದೆ ಬೆಟಾಲಿಯನ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಉಲ್ಲೇಖಿಸಲು ‘ಹವಾಲ್ದಾರ್’ ಪದವನ್ನು ಬಳಸಲು ಪೊಲೀಸ್ ಪಡೆ ಚಿಂತನೆ ನಡೆಸುತ್ತಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ವಚಾತಿ ನಾಯಕ ಷಣ್ಮುಗಂ ತಮಿಳುನಾಡು ಸಿಪಿಎಂ (ಎಂ) ಮೊದಲ ದಲಿತ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...