Homeಮುಖಪುಟಸಿಎಎ ವಿರುದ್ಧದ ಪ್ರತಿಭಟನೆ: ಕೇರಳ ಪೊಲೀಸರಿಂದ ಲಾಠೀ ಚಾರ್ಜ್‌

ಸಿಎಎ ವಿರುದ್ಧದ ಪ್ರತಿಭಟನೆ: ಕೇರಳ ಪೊಲೀಸರಿಂದ ಲಾಠೀ ಚಾರ್ಜ್‌

- Advertisement -
- Advertisement -

ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿ ಸಂಘಟನೆಯಾದ ಫ್ರೆಟರ್ನಿಟಿ ಮೂವ್‌ಮೆಂಟ್‌ನ ಸದಸ್ಯರ ಮೇಲೆ ಕೇರಳ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಈ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.   ಪ್ರತಿಭಟನೆಗೆ ಸಂಬಂಧಿಸಿ ಒಂಬತ್ತು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅದರಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ.

ಪೊಲೀಸರ ಲಾಠೀ ಚಾರ್ಜ್‌ನಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು  ಕೋಝಿಕ್ಕೋಡ್‌ನ ಬೀಚ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಕೋಝಿಕ್ಕೋಡ್ ಕಾರ್ಪೊರೇಷನ್‌ನಿಂದ ಆರಂಭವಾದ ಮೆರವಣಿಗೆ ರಾತ್ರಿ 11 ಗಂಟೆ ಸುಮಾರಿಗೆ ಬೀಚ್ ಬಳಿಯ ಆಕಾಶವಾಣಿ ಕಚೇರಿ (ಆಕಾಶವಾಣಿ) ತಲುಪಿದೆ.

ಪೊಲೀಸರು ಯಾವುದೇ ಅಹಿತಕರ ಘಟನೆ ಅಥವಾ ಪ್ರಚೋದನೆ ಇಲ್ಲದೆ ಶಾಂತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ಲಾಠೀ ಪ್ರಹಾರ ನಡೆಸಿದ್ದಾರೆ, ಜೊತೆಗೆ ಮಹಿಳಾ ವಿದ್ಯಾರ್ಥಿಗಳಿಗೆ ಪುರುಷ ಪೊಲೀಸ್‌ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಫ್ರಟರ್ನಿಟಿ ಮೂವ್‌ಮೆಂಟ್‌ನ ಕೋಝಿಕ್ಕೋಡ್ ಜಿಲ್ಲಾ ಕಾರ್ಯದರ್ಶಿ ಶಾಹೀನ್ ಅಹಮ್ಮದ್ ಈ ಬಗ್ಗೆ ಮಾತನಾಡಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠೀ ಪ್ರಹಾರ ಮಾಡಲು ಪ್ರಾರಂಭಿಸಿದರು. ರಸ್ತೆ ಅಥವಾ ಸಮುದ್ರ ತೀರದಲ್ಲಿ ಯಾವುದೇ ರಶ್ ಇರಲಿಲ್ಲ ಏಕೆಂದರೆ ಅದು ರಂಜಾನ್ ತಿಂಗಳ ಆರಂಭವಾಗಿದೆ. ನಾವು ರಸ್ತೆಯ ಒಂದು ಬದಿಯನ್ನು ನಿರ್ಬಂಧಿಸಿದ್ದೇವೆ ಆದರೆ ಇನ್ನೊಂದು ಬದಿಯಲ್ಲಿ ವಾಹನಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದೇವೆ. ಪ್ರತಿಭಟನೆಯ ಉದ್ಘಾಟನಾ ಭಾಷಣದ ವೇಳೆ, ಪೊಲೀಸ್ ಸಿಬ್ಬಂದಿ ಬಸ್‌ನಲ್ಲಿ ಬಂದು ಪ್ರತಿಭಟನಾಕಾರರನ್ನು ಬಂಧಿಸಲು ಪ್ರಾರಂಭಿಸಿದರು. ನಾವು ಬಂಧನವನ್ನು ವಿರೋಧಿಸಿದ ನಂತರ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ನಮಗೆ ಯಾವುದೇ ತೊಂದರೆ ಮಾಡುವ ಉದ್ದೇಶ ಇರಲಿಲ್ಲ, ನಾವು ಪ್ರತಿಭಟನಾ ಭಾಷಣದ ಬಳಿಕ ಅಲ್ಲಿಂದ ತೆರಳುತ್ತಿದ್ದೆವು ಆದರೆ ಪೊಲೀಸರು ಲಾಠೀ ಚಾರ್ಜ್‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಪ್ರತಿಭಟನಾಕಾರರು ನಡೆಸಿದ ಬಲ ಪ್ರಯೋಗದಿಂದ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಈ ಕುರಿತು ದಾಖಲಾದ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಒಂಬತ್ತು ವಿದ್ಯಾರ್ಥಿಗಳ ಮೇಲೆ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರಲ್ಲಿ ಸೆಕ್ಷನ್ 147 (ಗಲಭೆಗೆ ಶಿಕ್ಷೆ), 143 (ಕಾನೂನುಬಾಹಿರ ಸಭೆ), 283, 353, 332 ಮತ್ತು ಕೇರಳ ಪೊಲೀಸ್ ಕಾಯಿದೆ 2011ರ 177 (ಇ)ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ತಿರುವನಂತಪುರಂ ಮ್ಯೂಸಿಯಂ ಪೊಲೀಸರು ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದಕ್ಕಾಗಿ ಫ್ರಾಟರ್ನಿಟಿ ಮೂವ್ಮೆಂಟ್, ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ವೆಲ್ಫೇರ್ ಪಾರ್ಟಿಗೆ ಸೇರಿದ 124 ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಿಎಎ ಪ್ರತಿಭಟನೆಯ ಭಾಗವಾಗಿ ಮಾವೇಲಿ ಎಕ್ಸ್‌ಪ್ರೆಸ್‌ನ್ನು ತಡೆದಿದ್ದಕ್ಕಾಗಿ ಎರ್ನಾಕುಲಂ ಪೊಲೀಸರು ಏಳು ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ರೈಲ್ವೇ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸಿಎಎ ಅನುಷ್ಠಾನದ ವಿರುದ್ಧ ಪ್ರತಿಭಟನೆ ನಡೆಸಿದ ಸುಮಾರು 500 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರ ಮೇಲೆ ಆಲುವಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...