Homeಮುಖಪುಟಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

- Advertisement -
- Advertisement -

ಕೇರಳದಲ್ಲಿ ಸಾರ್ವಜನಿಕ, ಖಾಸಗಿ ಮತ್ತು ಸೈಬರ್‌ ತಾಣಗಳಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದಿಂದ ರಕ್ಷಣೆ ನೀಡಲು ಕೇರಳ ಪೊಲೀಸರು “ಪಿಂಕ್ ಪ್ರೊಟೆಕ್ಷನ್” ಯೋಜನೆ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದ್ದಾರೆ.

ಈ ಯೋಜನೆಗಾಗಿ 10 ಕಾರುಗಳು, ಬುಲೆಟ್ ಬೈಕ್‌ಗಳು ಮತ್ತು 20 ಬೈಸಿಕಲ್‌ಗಳು ಸೇರಿದಂತೆ 40 ದ್ವಿಚಕ್ರ ವಾಹನಗಳನ್ನು ಮಂಜೂರು ಮಾಡಲಾಗಿದ್ದು, ಇವುಗಳನ್ನು ಸೋಮವಾರ (ಜುಲೈ 19) ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆ ಮಾಡಿದ್ದಾರೆ.

“ಪಿಂಕ್ ಪ್ರೊಟೆಕ್ಷನ್” ಯೋಜನೆಯು ವರದಕ್ಷಿಣೆ ಸಂಬಂಧಿತ ಸಮಸ್ಯೆಗಳು, ಸೈಬರ್ ತಾಣಗಳಲ್ಲಿ ಉಂಟಾಗುವ ಬೆದರಿಕೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗಾಗುವ ದೌರ್ಜನ್ಯವನ್ನು ತಡೆಯುವ ಗುರಿಯನ್ನು ಹೊಂದಿದೆ. ಯೋಜನೆಯು 10 ಘಟಕಗಳನ್ನು ಹೊಂದಿದೆ, ಅವುಗಳಲ್ಲಿ ಒಂದು ಈಗಾಗಲೇ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಪಿಂಕ್ ಪೊಲೀಸ್  ಗಸ್ತುದಳವನ್ನು ಒಳಗೊಂಡಿದೆ.

ಇದನ್ನೂ ಓದಿ: ಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!

 

ಈ ವ್ಯವಸ್ಥೆಯನ್ನು “ಪಿಂಕ್ ಜನಮೈತ್ರಿ ಬೀಟ್” ಎಂದು ಹೆಸರಿಸಲಾಗಿದೆ, ಇದರ ಅಡಿಯಲ್ಲಿ ಕೌಟುಂಬಿಕ ಹಿಂಸಾಚಾರದ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸ್ ಅಧಿಕಾರಿಗಳು ನಿಯಮಿತವಾಗಿ ಮನೆಗಳಿಗೆ ಭೇಟಿ ನೀಡುತ್ತಾರೆ. ಅವರು ಪಂಚಾಯತ್ ಸದಸ್ಯರು, ನೆರೆಹೊರೆಯವರು ಮತ್ತು ಇತರ ಸ್ಥಳೀಯರಿಂದ ಮಾಹಿತಿಯನ್ನು ಸಂಗ್ರಹಿಸಿ ಮುಂದಿನ ಕ್ರಮಕ್ಕಾಗಿ ಪೊಲೀಸ್‌ ಠಾಣೆಗೆ ಮಾಹಿತಿ ಹಸ್ತಾಂತರಿಸುತ್ತಾರೆ.

ವಿಶೇಷ ತರಬೇತಿ ಪಡೆದ ಮಹಿಳಾ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿರುವ ಪಿಂಕ್ ಬೀಟ್ ವ್ಯವಸ್ಥೆಯು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಖಾಸಗಿ ಬಸ್‌ಗಳಲ್ಲಿ ಮತ್ತು ಶಾಲೆಗಳು, ಕಾಲೇಜುಗಳು ಮತ್ತು ಬಸ್ ನಿಲ್ದಾಣಗಳು ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳ ಬಳಿ ಕಾರ್ಯ ನಿರ್ವಹಿಸುತ್ತದೆ. ಎಲ್ಲಾ 14 ಜಿಲ್ಲೆಗಳಲ್ಲಿ ಪಿಂಕ್ ಕಂಟ್ರೋಲ್‌ ರೂಮ್‌ಗಳನ್ನು ಸ್ಥಾಪಿಸಲಾಗಿದೆ.

ಕೇರಳ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಅನಿಲ್ ಕಾಂತ್ ಮತ್ತು ಕೇರಳ ಪೊಲೀಸ್ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

“ಮಹಿಳಾ ಪೊಲೀಸ್ ಅಧಿಕಾರಿಗಳು ನಿಯಮಿತವಾಗಿ ಗಸ್ತು ತಿರುಗುತ್ತಾರೆ. ಪೊಲೀಸ್ ಅಧಿಕಾರಿಗಳು ಯೋಜನೆಗೆ ನೀಡಲಾಗಿರುವ ಕಾರುಗಳು, ದ್ವಿಚಕ್ರ ವಾಹನಗಳು ಮತ್ತು ಸೈಕಲ್‌ಗಳಲ್ಲಿ ಗಸ್ತು ತಿರುಗುತ್ತಿರುತ್ತಾರೆ. ಕೌಟುಂಬಿಕ ದೌರ್ಜನ್ಯದ ಬಗ್ಗೆ ಯಾವುದೇ ದೂರು ದಾಖಲಾಗಿದ್ದರೆ, ನಾವು ಪ್ರತಿದಿನ ಗಸ್ತು ನಡೆಸುತ್ತೇವೆ ಮತ್ತು ಕಾಲಕಾಲಕ್ಕೆ ಪರಿಶೀಲಿಸುತ್ತೇವೆ” ಎಂದು ಡಿಜಿಪಿ ಅನಿಲ್ ಕಾಂತ್ ಹೇಳಿದ್ದಾರೆ.


ಇದನ್ನೂ ಓದಿ: ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...