Homeಮುಖಪುಟಮಹಿಳಾ ಪತ್ರಕರ್ತೆ ಜೊತೆ ಅನುಚಿತ ವರ್ತನೆ: ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಸಮನ್ಸ್‌

ಮಹಿಳಾ ಪತ್ರಕರ್ತೆ ಜೊತೆ ಅನುಚಿತ ವರ್ತನೆ: ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಸಮನ್ಸ್‌

- Advertisement -
- Advertisement -

ಮಹಿಳಾ ಪತ್ರಕರ್ತೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಕೇರಳದ ಖ್ಯಾತ ಚಲನಚಿತ್ರ ನಟ ಹಾಗೂ ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಕೋಝಿಕ್ಕೋಡ್‌ನ ನಡಕ್ಕಾವು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ.

ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸುರೇಶ್‌ ಗೋಪಿ ಅವರಿಗೆ ನೊಟೀಸ್‌ ನೀಡಲಾಗಿದೆ.

ಏನಿದು ಪ್ರಕರಣ?

ಅ.27ರಂದು ಬಿಜೆಪಿ ನಾಯಕ ಸುರೇಶ್‌ ಗೋಪಿ ಮಹಿಳಾ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಆಕೆಯ ಭುಜವನ್ನು ಪದೇ ಪದೇ ಸ್ಪರ್ಷಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು.

ಸುರೇಶ್‌ ಗೋಪಿ 2019ರಲ್ಲಿ ಬಿಜೆಪಿಯಿಂದ ತ್ರಿಶೂರ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಿಜೆಪಿಯು ಮತ್ತೊಮ್ಮೆ ತ್ರಿಶೂರ್‌ನಿಂದ ಅವರನ್ನು ಕಣಕ್ಕಿಳಿಸುತ್ತದೆ ಎಂದು ಹೇಳಲಾಗುತ್ತಿತ್ತು. ಮಹಿಳಾ ಪತ್ರಕರ್ತೆ, ಕೇರಳದಲ್ಲಿ ಇಷ್ಟು ವರ್ಷಗಳಿಂದ ಒಂದೇ ಒಂದು ಲೋಕಸಭಾ ಸ್ಥಾನವನ್ನು ಬಿಜೆಪಿ ಪಡೆಯಲು ವೈಫಲ್ಯವಾಗಿದೆ ಎಂದು ಉಲ್ಲೇಖಿಸಿ ಪ್ರಶ್ನೆಯನ್ನು ಕೇಳಿದ್ದರು. ಈ ವೇಳೆ ಸುರೇಶ್ ಗೋಪಿ ಆಕೆಯ ಭುಜದ ಮೇಲೆ ಕೈಯಿಟ್ಟು, ನಾನು ಆಗುತ್ತಾ  ನೋಡುತ್ತೇನೆ ಮಗಳೇ, ಎಲ್ಲರೂ ಕಾದು ನೋಡುವ, ಮನುಷ್ಯನಿಂದ ಅಸಾಧ್ಯವಾದುದು ಯಾವುದೂ ಇಲ್ವಲ್ಲ ಎಂದು ಹೇಳಿದ್ದರು. ಪತ್ರಕರ್ತೆ ಈ ವೇಳೆ ಹಿಂದೆ ಸರಿಯುತ್ತಾಳೆ ಮತ್ತು ಅವಳು ತನ್ನ ಪ್ರಶ್ನೆಯನ್ನು ಪುನರಾವರ್ತಿಸಿದಳು, ಈ ವೇಳೆ ಸುರೇಶ್ ಗೋಪಿ ಮತ್ತೆ ಅವರ ಭುಜದ ಮೇಲೆ ಕೈಯಿಡುತ್ತಾರೆ. ಆಗ ಪತ್ರಕರ್ತೆ ಕೈಯಿಯನ್ನು ಕೆಳಗೆ ಹಾಕಿದ್ದಾರೆ.

ಘಟನೆಯ ನಂತರ ಸುರೇಶ್ ಗೋಪಿ ಅವರ ಅನುಚಿತ ವರ್ತನೆಯ ವಿರುದ್ಧ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ ಮತ್ತು ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ. ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟವೂ ಸುರೇಶ್ ಗೋಪಿ ಅವರ ವರ್ತನೆಯನ್ನು ಖಂಡಿಸಿ ಕ್ಷಮೆಯಾಚಿಸುವಂತೆ ಕೇಳಿದೆ. ಸುರೇಶ್‌ ಗೋಪಿ ಬಳಿಕ ಮಹಿಳಾ ಪತ್ರಕರ್ತೆಯ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. ಪತ್ರಕರ್ತೆಯನ್ನು ಮಗಳಂತೆ ನಡೆಸಿಕೊಂಡಿದ್ದು, ತಂದೆಯಂತೆ ಆಕೆಯಲ್ಲಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಮೀಡಿಯಾ ಒನ್ ಚಾನೆಲ್‌ನ ಮಹಿಳಾ ಪತ್ರಕರ್ತೆ ಶಿದಾ ಜಗತ್ ನೀಡಿದ ದೂರಿನ ಮೇರೆಗೆ ನಡಕ್ಕಾವು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಐಪಿಸಿ ಸೆಕ್ಷನ್ 354 (ಎ-1, 4) ಅಡಿಯಲ್ಲಿ ಮಹಿಳೆಯನ್ನು ದೈಹಿಕವಾಗಿ ಸಂಪರ್ಕಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿತ್ತು. ದೂರುದಾರರ ಹೇಳಿಕೆಯನ್ನು ಕೂಡ ಪೊಲೀಸರು ದಾಖಲಿಸಿಕೊಂಡಿದ್ದರು.

ಇದನ್ನು ಓದಿ: ವಿಶ್ವಸಂಸ್ಥೆಯ ಕಚೇರಿಗಳಲ್ಲಿ ಧ್ವಜ ಅರ್ಧಕ್ಕೆ ಇಳಿಸಿ ಮೌನಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...