Homeಮುಖಪುಟಕೇರಳ | ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆಸ್ಟ್ರೇಲಿಯನ್ ಪ್ರವಾಸಿಯ ವಿರುದ್ಧದ ಪ್ರಕರಣ ರದ್ದು

ಕೇರಳ | ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆಸ್ಟ್ರೇಲಿಯನ್ ಪ್ರವಾಸಿಯ ವಿರುದ್ಧದ ಪ್ರಕರಣ ರದ್ದು

- Advertisement -
- Advertisement -

ಏಪ್ರಿಲ್‌ ತಿಂಗಳ ವೇಳೆ ಕೇರಳದ ಕೊಚ್ಚಿಯಲ್ಲಿ ಪ್ಯಾಲೆಸ್ತೀನ್ ಪರ ಬ್ಯಾನರ್ ಮತ್ತು ಬೋರ್ಡ್‌ಗಳನ್ನು ಹರಿದು ಹಾಕಿದ್ದ ಆರೋಪದ ಮೇಲೆ ಆಸ್ಟ್ರೇಲಿಯಾದ ಪ್ರವಾಸಿ ಜರಾ ಮಿಚೆಲ್ ಶಿಲಾನ್ಸ್ಕಿ ವಿರುದ್ಧದ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ. ಪೋಸ್ಟರ್‌ಗಳು ಯಾವುದೇ ಸಂಘಟನೆಯ ಹೆಸರನ್ನು ಹೊಂದಿಲ್ಲ ಮತ್ತು ಅವುಗಳ ಪ್ರದರ್ಶನಕ್ಕೆ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಯಾವುದೇ ಕಾನೂನು ಅಧಿಕಾರವಿಲ್ಲದೆ ಪೋಸ್ಟರ್‌ಗಳನ್ನು ಹಾಕಲಾಗಿದೆ. ಅವುಗಳಲ್ಲಿ ಜವಾಬ್ದಾರಿಯುತ ಯಾವುದೇ ಸಂಘಟನೆಯ ಹೆಸರನ್ನು ಹೊಂದಿಲ್ಲವಾದ್ದರಿಂದ, ಪೋಸ್ಟರ್‌ಗಳನ್ನು ತೆಗೆದುಹಾಕುವುದು ಅಥವಾ ಹರಿದು ಹಾಕುವುದು ಕಾನೂನುಬಾಹಿರ ಅಥವಾ ಗಲಭೆಯನ್ನು ಪ್ರಚೋದಿಸುವ ಕ್ರಿಯೆ ಎಂದು ಪರಿಗಣಿಸಲಾಗುವುದಿಲ್ಲ” ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು ತೀರ್ಪು ನೀಡಿದ್ದಾರೆ.

“IPC ಯ ಸೆಕ್ಷನ್ 153 ರ ಅಡಿಯಲ್ಲಿ ಅಪರಾಧಕ್ಕಾಗಿ ಅರ್ಜಿದಾರರನ್ನು ವಿಚಾರಣೆಗೆ ಒಳಪಡಿಸುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದ್ದು. ಈ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ ‘ಶುದ್ಧೀಕರಣ’ ಮಾಡಿದ ಬಿಜೆಪಿ ಶಾಸಕ!

ತನ್ನ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಶಿಲಾನ್ಸ್ಕಿ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಶಿಲಾನ್ಸ್ಕಿಯನ್ನು ಪ್ರತಿನಿಧಿಸಿದ ವಕೀಲ ಬ್ಲೇಜ್ ಕೆ. ಜೋಸ್, ಶಿಲಾನ್ಸ್ಕಿ ಅವರ ವಿರುದ್ಧದ ಕಾನೂನು ಪ್ರಕ್ರಿಯೆಗಳು ಕೇವಲ ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ವಾದಿಸಿದ್ದಾರೆ.

ಜಮಾತ್-ಎ-ಇಸ್ಲಾಮಿ ಹಿಂದ್‌ನ ವಿದ್ಯಾರ್ಥಿ ವಿಭಾಗವಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಕಮಲಕ್ಕಡವು ಜುಂಕಾರ್ ಜೆಟ್ಟಿಯಲ್ಲಿ ಅಳವಡಿಸಿದ್ದ ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳು ಮತ್ತು ಬೋರ್ಡ್‌ಗಳನ್ನು ಇಬ್ಬರು ವಿದೇಶಿ ಮಹಿಳಾ ಪ್ರವಾಸಿಗರು ಹರಿದು ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳೊಂದಿಗೆ ವಿವಾದ ಉಂಟಾಗಿದ್ದು, ಆಸ್ಟ್ರೇಲಿಯನ್ ಪ್ರವಾಸಿಗರೊಂದಿಗೆ ವಾಗ್ವಾದ ನಡೆದಿತ್ತು.

ಪೋಸ್ಟರ್‌ಗಳನ್ನು ಪ್ರಚೋದನೆಗಾಗಿ ಹರಿದು ಹಾಕಲಾಗಿದೆ ಅಥವಾ ಅದು ಗಲಭೆಗೆ ಪ್ರಚೋದನೆ ನೀಡುತ್ತದೆ ಎಂದು ಅಂತಿಮ ವರದಿಯಲ್ಲಿ ಸೂಚಿಸಿಲ್ಲ ಎಂದು ನ್ಯಾಯಾಲಯವು ಹೇಳಿದೆ. ಶಿಲಾನ್ಸ್ಕಿಗೆ ತನ್ನ ಕೃತ್ಯದಿಂದ ಗಲಭೆ ನಡೆಯುತ್ತದೆ, ಮತ್ತು ಅದು ಸಂಭಾವ್ಯ ಅಪರಾಧಕ್ಕೆ ಕಾರಣವಾಗಬಹುದು ಅಥವಾ ಇದರಿಂದಾಗಿ ಇತರರು ಪ್ರಚೋದಿತರಾಗುತ್ತಾರೆ ಎಂದು ತಿಳಿದಿತ್ತೆ ಎಂಬ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿಲ್ಲ ಎಂದು ನ್ಯಾಯಾಲಯ ಒತ್ತಿಹೇಳಿದೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...