Homeಮುಖಪುಟಕೇರಳ: ಪ್ರಾಧ್ಯಾಪಕರ ಕೈ ಕತ್ತರಿಸಿದ್ದ ಪ್ರಕರಣ; PFIನ ಆರು ಸದಸ್ಯರಿಗೆ NIA ಕೋರ್ಟ್ ಶಿಕ್ಷೆ ಪ್ರಕಟ

ಕೇರಳ: ಪ್ರಾಧ್ಯಾಪಕರ ಕೈ ಕತ್ತರಿಸಿದ್ದ ಪ್ರಕರಣ; PFIನ ಆರು ಸದಸ್ಯರಿಗೆ NIA ಕೋರ್ಟ್ ಶಿಕ್ಷೆ ಪ್ರಕಟ

- Advertisement -
- Advertisement -

2010ರಲ್ಲಿ ಕಾಲೇಜು ಪ್ರಾಧ್ಯಾಪಕರೊಬ್ಬರ ಕೈ ಕಡಿದ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಆರು ಜನ ಸದಸ್ಯರನ್ನು ದೋಷಿ ಎಂದು ರಾಜ್ಯದ ವಿಶೇಷ ಎನ್‌ಐಎ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಪಿಎಫ್‌ಐ ಸಂಘಟನೆಯನ್ನು ಒಕ್ಕೂಟ ಸರ್ಕಾರ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ.

ಪ್ರಕರಣದ ಎರಡನೇ ಹಂತದ ವಿಚಾರಣೆಯಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಕೆ ಭಾಸ್ಕರ್ ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಕೊಲೆ ಯತ್ನ, ಪಿತೂರಿ ಮತ್ತು ಇತರ ವಿವಿಧ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದರು.

ಕೆಲವು ಆರೋಪಿಗಳನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಅಪರಾಧಿಗಳೆಂದು ಪರಿಗಣಿಸಲಾಗಿದೆ. ಪ್ರಕರಣದ ಇತರ ಐವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಮೊದಲ ಹಂತದಲ್ಲಿ, 31 ಆರೋಪಿಗಳು ವಿಚಾರಣೆಯನ್ನು ಎದುರಿಸಿದ್ದರು. ಅವರಲ್ಲಿ 10 ಜನರನ್ನು ನ್ಯಾಯಾಲಯವು 2015 ರ ಏಪ್ರಿಲ್‌ನಲ್ಲಿ ಯುಎಪಿಎ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಶಿಕ್ಷೆ ವಿಧಿಸಿತು. ಮೂವರನ್ನು ಅಪರಾಧಿಗಳಿಗೆ ಆಶ್ರಯ ನೀಡಿದ ಕಾರಣಕ್ಕೆ ತಪ್ಪಿತಸ್ಥರೆಂದು ತೀರ್ಪು ನೀಡಿತು. ಈ ವೇಳೆ ಪ್ರಕರಣದಲ್ಲಿ 18 ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಜುಲೈ 4, 2010 ರಂದು ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿರುವ ನ್ಯೂಮನ್ ಕಾಲೇಜಿನ ಪ್ರೊಫೆಸರ್ ಟಿ ಜೆ ಜೋಸೆಫ್ ಅವರ ಬಲಗೈಯನ್ನು ಇಸ್ಲಾಮಿಕ್ ಸಂಘಟನೆಯಾದ ಪಿಎಫ್‌ಐ ಕಾರ್ಯಕರ್ತರು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಎರ್ನಾಕುಲಂ ಜಿಲ್ಲೆಯ ಮುವಾಟ್ಟುಪುಳದಲ್ಲಿರುವ ಚರ್ಚ್‌ನಲ್ಲಿ ಭಾನುವಾರದ ಸಾಮೂಹಿಕ ಪೂಜೆಯಲ್ಲಿ ಪಾಲ್ಗೊಂಡು ಕುಟುಂಬದೊಂದಿಗೆ ಮನೆಗೆ ಮರಳುತ್ತಿದ್ದಾಗ ಈ ದಾಳಿ ನಡೆದಿತ್ತು.

ಏಳು ಜನರಿದ್ದ ಗುಂಪಿನ ದಾಳಿಕೋರರು ಪ್ರೊಫೆಸರ್ ಅವರನ್ನು ವಾಹನದಿಂದ ಹೊರಗೆಳೆದು, ಅವರ ಮೇಲೆ ಹಲ್ಲೆ ನಡೆಸಿದರು. ಆನಂತರ ಅವರ ಬಲಗೈಯನ್ನು ಪ್ರಮುಖ ಆರೋಪಿ ಸವಾದ್ ಕತ್ತರಿಸಿದ ಅವರು ಇನ್ನೂ ತಲೆಮರೆಸಿಕೊಂಡಿದ್ದಾರೆ.

”ನ್ಯೂಮನ್ ಕಾಲೇಜಿನಲ್ಲಿ ಬಿಕಾಂ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧಪಡಿಸಿದ ಪ್ರಶ್ನೆ ಪತ್ರಿಕೆಯಲ್ಲಿ ಧಾರ್ಮಿಕ ಅವಹೇಳನಕಾರಿ ಹೇಳಿಕೆಗಳಿಗಾಗಿ ಜೋಸೆಫ್ ಅವರನ್ನು ಕೊಲ್ಲಲು ಬಯಸಿದ್ದರು” ಎಂದು ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೇಳಿದ್ದರು.

ಇದನ್ನೂ ಓದಿ: ಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...