Homeಮುಖಪುಟಕೇರಳ: ಪ್ರಾಧ್ಯಾಪಕರ ಕೈ ಕತ್ತರಿಸಿದ್ದ ಪ್ರಕರಣ; PFIನ ಆರು ಸದಸ್ಯರಿಗೆ NIA ಕೋರ್ಟ್ ಶಿಕ್ಷೆ ಪ್ರಕಟ

ಕೇರಳ: ಪ್ರಾಧ್ಯಾಪಕರ ಕೈ ಕತ್ತರಿಸಿದ್ದ ಪ್ರಕರಣ; PFIನ ಆರು ಸದಸ್ಯರಿಗೆ NIA ಕೋರ್ಟ್ ಶಿಕ್ಷೆ ಪ್ರಕಟ

- Advertisement -
- Advertisement -

2010ರಲ್ಲಿ ಕಾಲೇಜು ಪ್ರಾಧ್ಯಾಪಕರೊಬ್ಬರ ಕೈ ಕಡಿದ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಆರು ಜನ ಸದಸ್ಯರನ್ನು ದೋಷಿ ಎಂದು ರಾಜ್ಯದ ವಿಶೇಷ ಎನ್‌ಐಎ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಪಿಎಫ್‌ಐ ಸಂಘಟನೆಯನ್ನು ಒಕ್ಕೂಟ ಸರ್ಕಾರ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ.

ಪ್ರಕರಣದ ಎರಡನೇ ಹಂತದ ವಿಚಾರಣೆಯಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಕೆ ಭಾಸ್ಕರ್ ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಕೊಲೆ ಯತ್ನ, ಪಿತೂರಿ ಮತ್ತು ಇತರ ವಿವಿಧ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದರು.

ಕೆಲವು ಆರೋಪಿಗಳನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಅಪರಾಧಿಗಳೆಂದು ಪರಿಗಣಿಸಲಾಗಿದೆ. ಪ್ರಕರಣದ ಇತರ ಐವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಮೊದಲ ಹಂತದಲ್ಲಿ, 31 ಆರೋಪಿಗಳು ವಿಚಾರಣೆಯನ್ನು ಎದುರಿಸಿದ್ದರು. ಅವರಲ್ಲಿ 10 ಜನರನ್ನು ನ್ಯಾಯಾಲಯವು 2015 ರ ಏಪ್ರಿಲ್‌ನಲ್ಲಿ ಯುಎಪಿಎ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಶಿಕ್ಷೆ ವಿಧಿಸಿತು. ಮೂವರನ್ನು ಅಪರಾಧಿಗಳಿಗೆ ಆಶ್ರಯ ನೀಡಿದ ಕಾರಣಕ್ಕೆ ತಪ್ಪಿತಸ್ಥರೆಂದು ತೀರ್ಪು ನೀಡಿತು. ಈ ವೇಳೆ ಪ್ರಕರಣದಲ್ಲಿ 18 ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಜುಲೈ 4, 2010 ರಂದು ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿರುವ ನ್ಯೂಮನ್ ಕಾಲೇಜಿನ ಪ್ರೊಫೆಸರ್ ಟಿ ಜೆ ಜೋಸೆಫ್ ಅವರ ಬಲಗೈಯನ್ನು ಇಸ್ಲಾಮಿಕ್ ಸಂಘಟನೆಯಾದ ಪಿಎಫ್‌ಐ ಕಾರ್ಯಕರ್ತರು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಎರ್ನಾಕುಲಂ ಜಿಲ್ಲೆಯ ಮುವಾಟ್ಟುಪುಳದಲ್ಲಿರುವ ಚರ್ಚ್‌ನಲ್ಲಿ ಭಾನುವಾರದ ಸಾಮೂಹಿಕ ಪೂಜೆಯಲ್ಲಿ ಪಾಲ್ಗೊಂಡು ಕುಟುಂಬದೊಂದಿಗೆ ಮನೆಗೆ ಮರಳುತ್ತಿದ್ದಾಗ ಈ ದಾಳಿ ನಡೆದಿತ್ತು.

ಏಳು ಜನರಿದ್ದ ಗುಂಪಿನ ದಾಳಿಕೋರರು ಪ್ರೊಫೆಸರ್ ಅವರನ್ನು ವಾಹನದಿಂದ ಹೊರಗೆಳೆದು, ಅವರ ಮೇಲೆ ಹಲ್ಲೆ ನಡೆಸಿದರು. ಆನಂತರ ಅವರ ಬಲಗೈಯನ್ನು ಪ್ರಮುಖ ಆರೋಪಿ ಸವಾದ್ ಕತ್ತರಿಸಿದ ಅವರು ಇನ್ನೂ ತಲೆಮರೆಸಿಕೊಂಡಿದ್ದಾರೆ.

”ನ್ಯೂಮನ್ ಕಾಲೇಜಿನಲ್ಲಿ ಬಿಕಾಂ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧಪಡಿಸಿದ ಪ್ರಶ್ನೆ ಪತ್ರಿಕೆಯಲ್ಲಿ ಧಾರ್ಮಿಕ ಅವಹೇಳನಕಾರಿ ಹೇಳಿಕೆಗಳಿಗಾಗಿ ಜೋಸೆಫ್ ಅವರನ್ನು ಕೊಲ್ಲಲು ಬಯಸಿದ್ದರು” ಎಂದು ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೇಳಿದ್ದರು.

ಇದನ್ನೂ ಓದಿ: ಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...