Homeಮುಖಪುಟವಯನಾಡ್ ದುರಂತ 'ರಾಷ್ಟ್ರೀಯ ವಿಪತ್ತು' ಅಲ್ಲವೆಂದ ಕೇಂದ್ರ : ಬಂದ್‌ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ

ವಯನಾಡ್ ದುರಂತ ‘ರಾಷ್ಟ್ರೀಯ ವಿಪತ್ತು’ ಅಲ್ಲವೆಂದ ಕೇಂದ್ರ : ಬಂದ್‌ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ

- Advertisement -
- Advertisement -

ವಯನಾಡ್ ಭೂಕುಸಿತ, ಪ್ರಳಯ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಖಂಡಿಸಿ ನವೆಂಬರ್ 19ರಂದು ಜಿಲ್ಲಾ ಬಂದ್‌ಗೆ ಕೇರಳದ ಆಡಳಿತ ಮತ್ತು ಪ್ರತಿಪಕ್ಷಗಳು ಕರೆ ನೀಡಿವೆ.

ಶುಕ್ರವಾರ (ನ.15) ಈ ಕುರಿತು ಘೋಷಣೆ ಮಾಡಿರುವ ಆಡಳಿತರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್‌) ಮತ್ತು ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ನವೆಂಬರ್ 19ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಯನಾಡ್ ಜಿಲ್ಲಾ ಬಂದ್ ಮಾಡಲಾಗುವುದು. ಅಂಗಡಿ-ಮುಂಗಟ್ಟುಗಳು ಮತ್ತು ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುವುದಿಲ್ಲ ಎಂದಿವೆ. ಎಲ್‌ಡಿಎಫ್‌ ಮತ್ತು ಯುಡಿಎಫ್‌ ಪ್ರತ್ಯೇಕವಾಗಿ ಪ್ರತಿಭಟಿಸಲಿವೆ ಎಂದು ತಿಳಿದು ಬಂದಿದೆ.

ರಾಜ್ಯ ಕಂದಾಯ ಸಚಿವ ಕೆ.ರಾಜನ್ ಕೇಂದ್ರದ ನಿಲುವಿನ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದು, ಇದು ‘ದುರದೃಷ್ಟಕರ’ ಎಂದಿದ್ದಾರೆ. ಕೇರಳವನ್ನು ಬದಿಗೆ ಸರಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ಹೇಳಿದ್ದಾರೆ.

ಆದರೆ, ಕೇಂದ್ರ ಮೀನುಗಾರಿಕೆ ಇಲಾಖೆಯ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರದ ನಡೆಯನ್ನು ಸಮರ್ಥಿಸಿಕೊಂಡಿದ್ದು, ಯಾವುದೇ ಪಕ್ಷಪಾತ ಧೋರಣೆಯನ್ನು ಕೇಂದ್ರ ಹೊಂದಿಲ್ಲ. ಸ್ಥಾಪಿತ ನಿಯಮಗಳು ಮತ್ತು ಕಾರ್ಯವಿಧಾನಗಳಿಗೆ ಬದ್ಧವಾಗಿದೆ. ರಾಜ್ಯ ವಿಪತ್ತು ಪರಿಹಾರ ನಿಧಿ (SDRF)ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF)ಯ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಸ್ಥಾಪಿತ ನಿಯಮಗಳು ಮತ್ತು ಕಾರ್ಯವಿಧಾನಗಳ ಪ್ರಕಾರ, ವಯನಾಡ್ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂಬುವುದಾಗಿ ಘೋಷಿಸಲು ಬರುವುದಿಲ್ಲ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.

ಜುಲೈ 30,2024ರಂದು ಕೇರಳದ ವಯನಾಡ್ ಜಿಲ್ಲೆ ವೈತ್ತಿರಿ ತಾಲೂಕಿನ ಮೆಪ್ಪಾಡಿ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಪುಂಜಿರಿಮಟ್ಟಂ, ಮುಂಡಕ್ಕೈ, ಚೂರಲ್ಮಲಾ ಮತ್ತು ವೆಳ್ಳರಿಮಲದಲ್ಲಿ ಭೀಕರ ಭೂಕುಸಿತ ಮತ್ತು ಜಲಪ್ರಳಯ ಸಂಭವಿಸಿತ್ತು. ಈ ಘಟನೆಯಲ್ಲಿ 420 ಜನರು ಸಾವನ್ನಪ್ಪಿದ್ದು, 397 ಮಂದಿ ಗಾಯಗೊಂಡಿದ್ದಾರೆ ಮತ್ತು 118 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಕೇರಳದ ಇತಿಹಾಸದಲ್ಲಿ ಇದೊಂದು ಕರಾಳ ಘಟನೆಯಾಗಿದೆ.

ಈ ಭೂಕುಸಿತ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಿ 2000 ಕೋಟಿ ರೂಪಾಯಿ ನೆರವು ನೀಡಬೇಕು ಎಂದು ಕೇರಳ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಆದರೆ, ಕೇಂದ್ರ ಸರ್ಕಾರ 2024-25 ಹಣಕಾಸು ವರ್ಷದಲ್ಲಿ ರಾಜ್ಯದ ಎಸ್‌ಡಿಆರ್‌ಎಫ್‌ ನಿಧಿಗೆ 388 ಕೋಟಿ ರೂ. ನೀಡಿದೆ. ಕೇರಳ ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು ನೀಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 1, 2024 ರ ಹೊತ್ತಿಗೆ ಎಸ್‌ಡಿಆರ್‌ಎಫ್ ನಿಧಿಯಲ್ಲಿ 394.99 ಕೋಟಿ ರೂ. ಇದೆ ಎಂಬುವುದನ್ನು ಕೇಂದ್ರ ಎತ್ತಿ ತೋರಿಸಿದೆ. ಈ ತಿಂಗಳಾಂತ್ಯಕ್ಕೆ ಕೇರಳಕ್ಕೆ ಹಣ ಮಂಜೂರು ಮಾಡುವ ಕುರಿತು ಕೇಂದ್ರ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಇದನ್ನೂ ಓದಿ : ಮಣಿಪುರದಲ್ಲಿ ತೀವ್ರಗೊಂಡ ಹಿಂಸಾಚಾರ | ಆರು ಮಂದಿಯ ಅಪಹರಣ : ಮೂವರ ಶವ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...