Homeಮುಖಪುಟಕೇರಳ ಭೂಕುಸಿತ: ಮನೆ ಕಳೆದುಕೊಂಡಿದ್ದ ಸಹೋದರಿಯರಿಗೆ ನೆರವಾದ ರಾಹುಲ್ ಗಾಂಧಿ!

ಕೇರಳ ಭೂಕುಸಿತ: ಮನೆ ಕಳೆದುಕೊಂಡಿದ್ದ ಸಹೋದರಿಯರಿಗೆ ನೆರವಾದ ರಾಹುಲ್ ಗಾಂಧಿ!

ರಾಹುಲ್ ಗಾಂಧಿ ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟಿದ್ದ ಸಂತ್ರಸ್ತೆ ನಿರ್ಭಯಾ ಅವರ ಸಹೋದರನ ವಿದ್ಯಾಭ್ಯಾಸದ ಖರ್ಚು ನೋಡಿಕೊಂಡಿದ್ದು, ಆತ ಬಯಸಿದಂತೆ ಪೈಲಟ್ ತರಬೇತಿಯನ್ನು ಕೊಡಿಸಿದ್ದರು.

- Advertisement -
- Advertisement -

ಮೂರು ದಿನಗಳ ಕೇರಳ ರಾಜ್ಯದ ವಯನಾಡು ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಲಪ್ಪುರಂನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಕೊರೊನಾ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿರುವ ಹಿನ್ನೆಲೆ ತಮ್ಮ ಸಂಸದೀಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡಿದ್ದ ಸಹೋದರಿಯರಿಗೆ ನೆರವಾದರು.

ಕಳೆದ ಮೂರು ದಿನಗಳಲ್ಲಿ, ಕೇರಳ ರಾಜ್ಯದಲ್ಲಿ ಮಲಪ್ಪುರಂನಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ. ಭಾನುವಾರ 1,399, ಶನಿವಾರ 1,519 ಮತ್ತು ಶುಕ್ರವಾರ 1,025 ಪ್ರಕರಣಗಳು ವರದಿಯಾಗಿವೆ.

ಜಿಲ್ಲಾಧಿಕಾರಿಗಳ ಸಭೆ ಬಳಿಕ ರಾಹುಲ್ ಗಾಂಧಿ, ಕಳೆದ ವರ್ಷ ಮಲಪ್ಪುರಂನ ಕವಲಪ್ಪರ ಭೂಕುಸಿತದಲ್ಲಿ ಪೋಷಕರು ಮತ್ತು ಮನೆಯನ್ನು ಕಳೆದುಕೊಂಡಿದ್ದ ಕಾವ್ಯ ಮತ್ತು ಕಾರ್ತಿಕಾ ಎಂಬ ಸಹೋದರಿಯರಿಗೆ ಹೊಸ ಮನೆಯ ಕೀ ಹಸ್ತಾಂತರಿಸಿದರು.

ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರಿ ಮಳೆಯಿಂದಾಗಿ ಮಳಪ್ಪುರಂನ ಕವಲಪ್ಪರ ಮತ್ತು ವಯನಾಡ್ ಜಿಲ್ಲೆಯ ಪುತ್ತುಮಾಲದಲ್ಲಿ ಜರುಗಿದ ಭೂಕುಸಿತಗಳು ಕೇರಳದ ಎರಡು ಪ್ರಮುಖ ಭೂಕುಸಿತಗಳಾಗಿವೆ. ಈ ದುರಂತದಲ್ಲಿ ಕನಿಷ್ಠ 113 ಜನರು ಸಾವನ್ನಪ್ಪಿದ್ದಾರೆ.

ಈ ದುರ್ಘಟನೆಯಲ್ಲಿ ಪೋಷಕರೊಂದಿಗೆ, ಇರಲು ಮನೆ ಕೂಡ ಇಲ್ಲದಂತೆ ಎಲ್ಲವನ್ನು ಕಳೆದುಕೊಂಡಿದ್ದ ಸಹೋದರಿಯರಿಗೆ ರಾಹುಲ್ ಗಾಂಧಿ ಹೊಸ ಮನೆ ನಿರ್ಮಿಸಿಕೊಟ್ಟಿದ್ದು, ಇಂದು ವಯನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯ ಕೀಯನ್ನು ನೀಡಿದ್ದಾರೆ.

ಈ ಹಿಂದೆ ಕೂಡ ರಾಹುಲ್ ಗಾಂಧಿ ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟಿದ್ದ ಸಂತ್ರಸ್ತೆ ನಿರ್ಭಯಾ ಅವರ ಕಿರಿಯ ಸಹೋದರರ ವಿದ್ಯಾಭ್ಯಾಸದ ಖರ್ಚು ನೋಡಿಕೊಂಡಿದ್ದು, ಆತ ಬಯಸಿದಂತೆ ಪೈಲಟ್ ತರಬೇತಿಯನ್ನು ಕೊಡಿಸಿದ್ದರು. ತರಬೇತಿ ಮುಗಿಸಿ ಖಾಸಗಿ ವಿಮಾನಯಾನ ಸಂಸ್ಥೆಗೆ ಕೆಲಸಕ್ಕೆ ಸೇರಿದ್ದಾರೆ.

ಅಂದು ಕೂಡ ನಿರ್ಭಯಾ ಪೋಷಕರು ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ದರು. ದುಖಃದಿಂದ ಬಳಲುತ್ತಿದ್ದ ಕುಟುಂಬಕ್ಕೆ ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...