Homeಮುಖಪುಟಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

ಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

- Advertisement -
- Advertisement -

ಕೇರಳದಲ್ಲಿ ನಡೆದ ರಾಜ್ಯ ಮಟ್ಟದ ರಾಮಾಯಣ ರಸಪ್ರಶ್ನೆಯಲ್ಲಿ ವಿಜೇತರಾದ ಐವರು ವಿದ್ಯಾರ್ಥಿಗಳಲ್ಲಿ ಇಸ್ಲಾಮಿಕ್ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಾದ ಮುಹಮ್ಮದ್ ಬಾಸಿತ್‌ ಎಂ. ಮತ್ತು ಮುಹಮ್ಮದ್ ಜಾಬಿರ್ ಪಿ.ಕೆ. ಕೂಡಾ ಸ್ಥಾನ ಪಡೆದು ದೇಶದ ಗಮನ ಸೆಳೆದಿದ್ದಾರೆ. ಈ ಇಬ್ಬರೂ ರಾಜ್ಯದ ಮರ್ಕಝ್ ವಲಾಂಚೇರಿಯ ಕೆ.ಕೆ.ಎಚ್‌.ಎಂ. ಇಸ್ಲಾಮಿಕ್ ಮತ್ತು ಆರ್ಟ್ಸ್ ಕಾಲೇಜಿನ ಇಸ್ಲಾಮಿಕ್ ಅಧ್ಯಯನ ಕೋರ್ಸ್‌ (ವಾಫಿ)ನ ವಿದ್ಯಾರ್ಥಿಗಳಾಗಿದ್ದಾರೆ.

ರಾಮಾಯಣದ ಆಳವಾದ ಅಧ್ಯಯನದ ಆಧಾರದ ಮೇಲೆ ಜುಲೈ 23 ರಿಂದ ಜುಲೈ 25 ರ ನಡುವೆ ಕೇರಳದ ಪ್ರಕಾಶನ ಸಂಸ್ಥೆ ಡಿ.ಸಿ. ಬುಕ್ಸ್ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿತ್ತು. ತಮ್ಮ ಕಾಲೇಜಿನಲ್ಲಿ ಅಧ್ಯಯನದ ಭಾಗವಾಗಿ ರಾಮಾಯಣವನ್ನು ಓದಿಕೊಂಡಿದ್ದ ಜಾಬೀರ್ ಮತ್ತು ಬಾಸಿತ್ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಇತರ ವಿದ್ಯಾರ್ಥಿಗಳೆಂದರೆ ನವನೀತ್ ಗೋಪನ್, ಅಭಿರಾಮ್ ಎಂಪಿ ಮತ್ತು ಗೀತು ಕೃಷ್ಣನ್.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾತನಾಡಿದ ಧರ್ಮಶಾಸ್ತ್ರ ಅಧ್ಯಯನದ ಹಿರಿಯ ವಿದ್ಯಾರ್ಥಿಯಾಗಿರುವ ಜಾಬೀರ್, “ಎಲ್ಲಾ ಧರ್ಮಗಳು ಮಾನವೀಯತೆಯ ಶಾಂತಿಯುತ ಜೀವನಕ್ಕಾಗಿ ಮಾಡಲ್ಪಟ್ಟಿವೆ. ಆದರೆ ಅವುಗಳ ಸುತ್ತಲಿನ ಎಲ್ಲಾ ಇತರ ಉದ್ವಿಗ್ನತೆಗಳು ಮಾನವ ನಿರ್ಮಿತ” ಎಂದು ಹೇಳಿದ್ದಾರೆ.

“ನಾಡಿನಲ್ಲಿ ಉತ್ತಮ ಆಡಳಿತ ಮತ್ತು ನ್ಯಾಯವನ್ನು ಹೇಗೆ ಜಾರಿಗೆ ತರಬಹುದು ಎಂಬುದನ್ನು ರಾಮಾಯಣ ವಿವರಿಸುತ್ತದೆ. ರಾಮಾಯಣವು ರಾಮನನ್ನು ಆದರ್ಶ ರಾಜನೆಂದು ತೋರಿಸುತ್ತದೆ ಮತ್ತು ದೇಶದಲ್ಲಿ ಉತ್ತಮ ಆಡಳಿತ, ನ್ಯಾಯ, ಸದ್ಗುಣ ಮತ್ತು ಕರ್ತವ್ಯಗಳನ್ನು ಹೇಗೆ ಕಾರ್ಯಗತಗೊಳಿಸಬಹುದು ಎಂಬುದನ್ನು ತೋರಿಸುತ್ತದೆ. ಇದು ಜಗತ್ತಿನಲ್ಲಿ ಆದರ್ಶಪ್ರಾಯವಾಗಿ ನಡೆಯಬೇಕು. ಪವಿತ್ರ ಗ್ರಂಥದಲ್ಲಿ ದ್ವೇಷದ ಉಲ್ಲೇಖವಿಲ್ಲ. ಯಾವುದೇ ಧರ್ಮವು ದ್ವೇಷವನ್ನು ಉತ್ತೇಜಿಸುವುದಿಲ್ಲ” ಎಂದು ಜಾಬೀರ್ ಹೇಳಿದ್ದಾರೆ.

ಇದನ್ನೂ ಓದಿ: ನೆಲದ ಸೌಹಾರ್ದಕ್ಕೆ ಸರಣಿ ಕೊಲೆಗಳ ಕೊಡಲಿಯೇಟು; ಸಾಂಸ್ಕೃತಿಕ ಕ್ರಾಂತಿಗೆ ಓಗೊಡಬೇಕಿದೆ ಯುವಜನತೆ

“ತಮ್ಮ ಅಧ್ಯಯನದ ಭಾಗವಾಗಿ ವಿದ್ಯಾರ್ಥಿಗಳು ಎಲ್ಲಾ ಧರ್ಮಗಳ ಬಗ್ಗೆ ಕಲಿಯುತ್ತಾರೆ. ಹಾಗಾಗಿ ಧರ್ಮಗಳ ಪುಸ್ತಕಗಳನ್ನು ನೇರವಾಗಿ ಓದಿ ಅರ್ಥ ಮಾಡಿಕೊಳ್ಳಬಹುದು. ನಮ್ಮಲ್ಲಿ ಹೆಚ್ಚಿನವರು ನೇರವಾಗಿ ಓದುವ ಮತ್ತು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಕಲಿಯುತ್ತಾರೆ. ನಮ್ಮ ಕಾಲೇಜಿನ ಗ್ರಂಥಾಲಯವು ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ವಾಫಿ ಕೋರ್ಸ್‌ ವಿದ್ಯಾರ್ಥಿಗಳು ಇಸ್ಲಾಮಿಕ್ ಅಧ್ಯಯನಗಳೊಂದಿಗೆ ತಮ್ಮ ಪದವಿ ಅಧ್ಯಯನವನ್ನು ನಡೆಸುತ್ತಾರೆ. ಈ ಕೋರ್ಸ್‌ನ ಪ್ರಮಾಣಪತ್ರ ಪಡೆಯಬೇಕೆಂದಿದ್ದರೆ ನಾವು ವಿಶ್ವವಿದ್ಯಾಲಯದ ಅನುಮೋದಿತ ಪದವಿಯನ್ನು ಹೊಂದಿರಬೇಕು. ಅದರ ಹೊರತಾಗಿ ನಾವು ಇತರ ಎಲ್ಲಾ ಧರ್ಮಗಳು ಮತ್ತು ಸಂಸ್ಕೃತಿಗಳ ಬಗ್ಗೆ ಕಲಿಯಬೇಕಾಗಿದೆ. ನಮ್ಮ ದೇಶವನ್ನು ವಿಶಾಲ ಮನಸ್ಸಿನ ರೀತಿಯಲ್ಲಿ ತಿಳಿದುಕೊಳ್ಳಲು ಮತ್ತು ಉತ್ತಮ ನಾಗರಿಕರಾಗಲು ನಮಗೆ ಇಲ್ಲಿ ಕಲಿಸಲಾಗುತ್ತದೆ ಎಂದು ಜಾಬಿರ್ ಹೇಳಿದ್ದಾರೆ.

ಮಕ್ಕಳ ನಿಯತಕಾಲಿಕಗಳಲ್ಲಿ ಪ್ರಕಟವಾಗುವ ರಾಮಾಯಣ ಚಿತ್ರಕಥೆಗಳು ಮತ್ತು ಸಣ್ಣ ಕಥೆಗಳನ್ನು ಓದಿದ ಕಾರಣದಿಂದ ಬಾಲ್ಯದಿಂದಲೂ ರಾಮಾಯಣವನ್ನು ಕಲಿಯಲು ಆಸಕ್ತಿ ಹೊಂದಿದ್ದಾಗಿ ರಾಮಾಯಣ ಸ್ಪರ್ಧೆಯಲ್ಲಿ ವಿಜೇತರಾದ ಮತ್ತೊಬ್ಬ ವಿದ್ಯಾರ್ಥಿ ಬಾಸಿತ್ ಹೇಳುತ್ತಾರೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

“ನಾನು ವಾಫಿ ಕೋರ್ಸ್‌‌ಗೆ ಬಂದಾಗ ಇಲ್ಲಿ ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳು ಇದ್ದವು. ಅವರೆಲ್ಲವೂ ಜ್ಞಾನದ ಆಗರಗಳಾಗಿದ್ದು, ರಾಮಾಯಣವು ಹಿಂದೂ ಧಾರ್ಮಿಕ ಜ್ಞಾನದ ಆಗರವಾಗಿದೆ” ಎಂದು ಅವರು ಹೇಳಿದ್ದಾರೆ. ಜಾಬೀರ್ ಮತ್ತು ಬಾಸಿತ್ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ಧರ್ಮದ ಮೂಲಕ ಶಾಂತಿಯನ್ನು ಹರಡಲು ಆಶಿಸುವುದಾಗಿ ಹೇಳಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...