Homeಮುಖಪುಟಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

ಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

- Advertisement -
- Advertisement -

ಕೇರಳದಲ್ಲಿ ನಡೆದ ರಾಜ್ಯ ಮಟ್ಟದ ರಾಮಾಯಣ ರಸಪ್ರಶ್ನೆಯಲ್ಲಿ ವಿಜೇತರಾದ ಐವರು ವಿದ್ಯಾರ್ಥಿಗಳಲ್ಲಿ ಇಸ್ಲಾಮಿಕ್ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಾದ ಮುಹಮ್ಮದ್ ಬಾಸಿತ್‌ ಎಂ. ಮತ್ತು ಮುಹಮ್ಮದ್ ಜಾಬಿರ್ ಪಿ.ಕೆ. ಕೂಡಾ ಸ್ಥಾನ ಪಡೆದು ದೇಶದ ಗಮನ ಸೆಳೆದಿದ್ದಾರೆ. ಈ ಇಬ್ಬರೂ ರಾಜ್ಯದ ಮರ್ಕಝ್ ವಲಾಂಚೇರಿಯ ಕೆ.ಕೆ.ಎಚ್‌.ಎಂ. ಇಸ್ಲಾಮಿಕ್ ಮತ್ತು ಆರ್ಟ್ಸ್ ಕಾಲೇಜಿನ ಇಸ್ಲಾಮಿಕ್ ಅಧ್ಯಯನ ಕೋರ್ಸ್‌ (ವಾಫಿ)ನ ವಿದ್ಯಾರ್ಥಿಗಳಾಗಿದ್ದಾರೆ.

ರಾಮಾಯಣದ ಆಳವಾದ ಅಧ್ಯಯನದ ಆಧಾರದ ಮೇಲೆ ಜುಲೈ 23 ರಿಂದ ಜುಲೈ 25 ರ ನಡುವೆ ಕೇರಳದ ಪ್ರಕಾಶನ ಸಂಸ್ಥೆ ಡಿ.ಸಿ. ಬುಕ್ಸ್ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿತ್ತು. ತಮ್ಮ ಕಾಲೇಜಿನಲ್ಲಿ ಅಧ್ಯಯನದ ಭಾಗವಾಗಿ ರಾಮಾಯಣವನ್ನು ಓದಿಕೊಂಡಿದ್ದ ಜಾಬೀರ್ ಮತ್ತು ಬಾಸಿತ್ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಇತರ ವಿದ್ಯಾರ್ಥಿಗಳೆಂದರೆ ನವನೀತ್ ಗೋಪನ್, ಅಭಿರಾಮ್ ಎಂಪಿ ಮತ್ತು ಗೀತು ಕೃಷ್ಣನ್.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾತನಾಡಿದ ಧರ್ಮಶಾಸ್ತ್ರ ಅಧ್ಯಯನದ ಹಿರಿಯ ವಿದ್ಯಾರ್ಥಿಯಾಗಿರುವ ಜಾಬೀರ್, “ಎಲ್ಲಾ ಧರ್ಮಗಳು ಮಾನವೀಯತೆಯ ಶಾಂತಿಯುತ ಜೀವನಕ್ಕಾಗಿ ಮಾಡಲ್ಪಟ್ಟಿವೆ. ಆದರೆ ಅವುಗಳ ಸುತ್ತಲಿನ ಎಲ್ಲಾ ಇತರ ಉದ್ವಿಗ್ನತೆಗಳು ಮಾನವ ನಿರ್ಮಿತ” ಎಂದು ಹೇಳಿದ್ದಾರೆ.

“ನಾಡಿನಲ್ಲಿ ಉತ್ತಮ ಆಡಳಿತ ಮತ್ತು ನ್ಯಾಯವನ್ನು ಹೇಗೆ ಜಾರಿಗೆ ತರಬಹುದು ಎಂಬುದನ್ನು ರಾಮಾಯಣ ವಿವರಿಸುತ್ತದೆ. ರಾಮಾಯಣವು ರಾಮನನ್ನು ಆದರ್ಶ ರಾಜನೆಂದು ತೋರಿಸುತ್ತದೆ ಮತ್ತು ದೇಶದಲ್ಲಿ ಉತ್ತಮ ಆಡಳಿತ, ನ್ಯಾಯ, ಸದ್ಗುಣ ಮತ್ತು ಕರ್ತವ್ಯಗಳನ್ನು ಹೇಗೆ ಕಾರ್ಯಗತಗೊಳಿಸಬಹುದು ಎಂಬುದನ್ನು ತೋರಿಸುತ್ತದೆ. ಇದು ಜಗತ್ತಿನಲ್ಲಿ ಆದರ್ಶಪ್ರಾಯವಾಗಿ ನಡೆಯಬೇಕು. ಪವಿತ್ರ ಗ್ರಂಥದಲ್ಲಿ ದ್ವೇಷದ ಉಲ್ಲೇಖವಿಲ್ಲ. ಯಾವುದೇ ಧರ್ಮವು ದ್ವೇಷವನ್ನು ಉತ್ತೇಜಿಸುವುದಿಲ್ಲ” ಎಂದು ಜಾಬೀರ್ ಹೇಳಿದ್ದಾರೆ.

ಇದನ್ನೂ ಓದಿ: ನೆಲದ ಸೌಹಾರ್ದಕ್ಕೆ ಸರಣಿ ಕೊಲೆಗಳ ಕೊಡಲಿಯೇಟು; ಸಾಂಸ್ಕೃತಿಕ ಕ್ರಾಂತಿಗೆ ಓಗೊಡಬೇಕಿದೆ ಯುವಜನತೆ

“ತಮ್ಮ ಅಧ್ಯಯನದ ಭಾಗವಾಗಿ ವಿದ್ಯಾರ್ಥಿಗಳು ಎಲ್ಲಾ ಧರ್ಮಗಳ ಬಗ್ಗೆ ಕಲಿಯುತ್ತಾರೆ. ಹಾಗಾಗಿ ಧರ್ಮಗಳ ಪುಸ್ತಕಗಳನ್ನು ನೇರವಾಗಿ ಓದಿ ಅರ್ಥ ಮಾಡಿಕೊಳ್ಳಬಹುದು. ನಮ್ಮಲ್ಲಿ ಹೆಚ್ಚಿನವರು ನೇರವಾಗಿ ಓದುವ ಮತ್ತು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಕಲಿಯುತ್ತಾರೆ. ನಮ್ಮ ಕಾಲೇಜಿನ ಗ್ರಂಥಾಲಯವು ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ವಾಫಿ ಕೋರ್ಸ್‌ ವಿದ್ಯಾರ್ಥಿಗಳು ಇಸ್ಲಾಮಿಕ್ ಅಧ್ಯಯನಗಳೊಂದಿಗೆ ತಮ್ಮ ಪದವಿ ಅಧ್ಯಯನವನ್ನು ನಡೆಸುತ್ತಾರೆ. ಈ ಕೋರ್ಸ್‌ನ ಪ್ರಮಾಣಪತ್ರ ಪಡೆಯಬೇಕೆಂದಿದ್ದರೆ ನಾವು ವಿಶ್ವವಿದ್ಯಾಲಯದ ಅನುಮೋದಿತ ಪದವಿಯನ್ನು ಹೊಂದಿರಬೇಕು. ಅದರ ಹೊರತಾಗಿ ನಾವು ಇತರ ಎಲ್ಲಾ ಧರ್ಮಗಳು ಮತ್ತು ಸಂಸ್ಕೃತಿಗಳ ಬಗ್ಗೆ ಕಲಿಯಬೇಕಾಗಿದೆ. ನಮ್ಮ ದೇಶವನ್ನು ವಿಶಾಲ ಮನಸ್ಸಿನ ರೀತಿಯಲ್ಲಿ ತಿಳಿದುಕೊಳ್ಳಲು ಮತ್ತು ಉತ್ತಮ ನಾಗರಿಕರಾಗಲು ನಮಗೆ ಇಲ್ಲಿ ಕಲಿಸಲಾಗುತ್ತದೆ ಎಂದು ಜಾಬಿರ್ ಹೇಳಿದ್ದಾರೆ.

ಮಕ್ಕಳ ನಿಯತಕಾಲಿಕಗಳಲ್ಲಿ ಪ್ರಕಟವಾಗುವ ರಾಮಾಯಣ ಚಿತ್ರಕಥೆಗಳು ಮತ್ತು ಸಣ್ಣ ಕಥೆಗಳನ್ನು ಓದಿದ ಕಾರಣದಿಂದ ಬಾಲ್ಯದಿಂದಲೂ ರಾಮಾಯಣವನ್ನು ಕಲಿಯಲು ಆಸಕ್ತಿ ಹೊಂದಿದ್ದಾಗಿ ರಾಮಾಯಣ ಸ್ಪರ್ಧೆಯಲ್ಲಿ ವಿಜೇತರಾದ ಮತ್ತೊಬ್ಬ ವಿದ್ಯಾರ್ಥಿ ಬಾಸಿತ್ ಹೇಳುತ್ತಾರೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

“ನಾನು ವಾಫಿ ಕೋರ್ಸ್‌‌ಗೆ ಬಂದಾಗ ಇಲ್ಲಿ ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳು ಇದ್ದವು. ಅವರೆಲ್ಲವೂ ಜ್ಞಾನದ ಆಗರಗಳಾಗಿದ್ದು, ರಾಮಾಯಣವು ಹಿಂದೂ ಧಾರ್ಮಿಕ ಜ್ಞಾನದ ಆಗರವಾಗಿದೆ” ಎಂದು ಅವರು ಹೇಳಿದ್ದಾರೆ. ಜಾಬೀರ್ ಮತ್ತು ಬಾಸಿತ್ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ಧರ್ಮದ ಮೂಲಕ ಶಾಂತಿಯನ್ನು ಹರಡಲು ಆಶಿಸುವುದಾಗಿ ಹೇಳಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...