Homeಮುಖಪುಟಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

ಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

- Advertisement -
- Advertisement -

ಕೇರಳದಲ್ಲಿ ನಡೆದ ರಾಜ್ಯ ಮಟ್ಟದ ರಾಮಾಯಣ ರಸಪ್ರಶ್ನೆಯಲ್ಲಿ ವಿಜೇತರಾದ ಐವರು ವಿದ್ಯಾರ್ಥಿಗಳಲ್ಲಿ ಇಸ್ಲಾಮಿಕ್ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಾದ ಮುಹಮ್ಮದ್ ಬಾಸಿತ್‌ ಎಂ. ಮತ್ತು ಮುಹಮ್ಮದ್ ಜಾಬಿರ್ ಪಿ.ಕೆ. ಕೂಡಾ ಸ್ಥಾನ ಪಡೆದು ದೇಶದ ಗಮನ ಸೆಳೆದಿದ್ದಾರೆ. ಈ ಇಬ್ಬರೂ ರಾಜ್ಯದ ಮರ್ಕಝ್ ವಲಾಂಚೇರಿಯ ಕೆ.ಕೆ.ಎಚ್‌.ಎಂ. ಇಸ್ಲಾಮಿಕ್ ಮತ್ತು ಆರ್ಟ್ಸ್ ಕಾಲೇಜಿನ ಇಸ್ಲಾಮಿಕ್ ಅಧ್ಯಯನ ಕೋರ್ಸ್‌ (ವಾಫಿ)ನ ವಿದ್ಯಾರ್ಥಿಗಳಾಗಿದ್ದಾರೆ.

ರಾಮಾಯಣದ ಆಳವಾದ ಅಧ್ಯಯನದ ಆಧಾರದ ಮೇಲೆ ಜುಲೈ 23 ರಿಂದ ಜುಲೈ 25 ರ ನಡುವೆ ಕೇರಳದ ಪ್ರಕಾಶನ ಸಂಸ್ಥೆ ಡಿ.ಸಿ. ಬುಕ್ಸ್ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿತ್ತು. ತಮ್ಮ ಕಾಲೇಜಿನಲ್ಲಿ ಅಧ್ಯಯನದ ಭಾಗವಾಗಿ ರಾಮಾಯಣವನ್ನು ಓದಿಕೊಂಡಿದ್ದ ಜಾಬೀರ್ ಮತ್ತು ಬಾಸಿತ್ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಇತರ ವಿದ್ಯಾರ್ಥಿಗಳೆಂದರೆ ನವನೀತ್ ಗೋಪನ್, ಅಭಿರಾಮ್ ಎಂಪಿ ಮತ್ತು ಗೀತು ಕೃಷ್ಣನ್.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾತನಾಡಿದ ಧರ್ಮಶಾಸ್ತ್ರ ಅಧ್ಯಯನದ ಹಿರಿಯ ವಿದ್ಯಾರ್ಥಿಯಾಗಿರುವ ಜಾಬೀರ್, “ಎಲ್ಲಾ ಧರ್ಮಗಳು ಮಾನವೀಯತೆಯ ಶಾಂತಿಯುತ ಜೀವನಕ್ಕಾಗಿ ಮಾಡಲ್ಪಟ್ಟಿವೆ. ಆದರೆ ಅವುಗಳ ಸುತ್ತಲಿನ ಎಲ್ಲಾ ಇತರ ಉದ್ವಿಗ್ನತೆಗಳು ಮಾನವ ನಿರ್ಮಿತ” ಎಂದು ಹೇಳಿದ್ದಾರೆ.

“ನಾಡಿನಲ್ಲಿ ಉತ್ತಮ ಆಡಳಿತ ಮತ್ತು ನ್ಯಾಯವನ್ನು ಹೇಗೆ ಜಾರಿಗೆ ತರಬಹುದು ಎಂಬುದನ್ನು ರಾಮಾಯಣ ವಿವರಿಸುತ್ತದೆ. ರಾಮಾಯಣವು ರಾಮನನ್ನು ಆದರ್ಶ ರಾಜನೆಂದು ತೋರಿಸುತ್ತದೆ ಮತ್ತು ದೇಶದಲ್ಲಿ ಉತ್ತಮ ಆಡಳಿತ, ನ್ಯಾಯ, ಸದ್ಗುಣ ಮತ್ತು ಕರ್ತವ್ಯಗಳನ್ನು ಹೇಗೆ ಕಾರ್ಯಗತಗೊಳಿಸಬಹುದು ಎಂಬುದನ್ನು ತೋರಿಸುತ್ತದೆ. ಇದು ಜಗತ್ತಿನಲ್ಲಿ ಆದರ್ಶಪ್ರಾಯವಾಗಿ ನಡೆಯಬೇಕು. ಪವಿತ್ರ ಗ್ರಂಥದಲ್ಲಿ ದ್ವೇಷದ ಉಲ್ಲೇಖವಿಲ್ಲ. ಯಾವುದೇ ಧರ್ಮವು ದ್ವೇಷವನ್ನು ಉತ್ತೇಜಿಸುವುದಿಲ್ಲ” ಎಂದು ಜಾಬೀರ್ ಹೇಳಿದ್ದಾರೆ.

ಇದನ್ನೂ ಓದಿ: ನೆಲದ ಸೌಹಾರ್ದಕ್ಕೆ ಸರಣಿ ಕೊಲೆಗಳ ಕೊಡಲಿಯೇಟು; ಸಾಂಸ್ಕೃತಿಕ ಕ್ರಾಂತಿಗೆ ಓಗೊಡಬೇಕಿದೆ ಯುವಜನತೆ

“ತಮ್ಮ ಅಧ್ಯಯನದ ಭಾಗವಾಗಿ ವಿದ್ಯಾರ್ಥಿಗಳು ಎಲ್ಲಾ ಧರ್ಮಗಳ ಬಗ್ಗೆ ಕಲಿಯುತ್ತಾರೆ. ಹಾಗಾಗಿ ಧರ್ಮಗಳ ಪುಸ್ತಕಗಳನ್ನು ನೇರವಾಗಿ ಓದಿ ಅರ್ಥ ಮಾಡಿಕೊಳ್ಳಬಹುದು. ನಮ್ಮಲ್ಲಿ ಹೆಚ್ಚಿನವರು ನೇರವಾಗಿ ಓದುವ ಮತ್ತು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಕಲಿಯುತ್ತಾರೆ. ನಮ್ಮ ಕಾಲೇಜಿನ ಗ್ರಂಥಾಲಯವು ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ವಾಫಿ ಕೋರ್ಸ್‌ ವಿದ್ಯಾರ್ಥಿಗಳು ಇಸ್ಲಾಮಿಕ್ ಅಧ್ಯಯನಗಳೊಂದಿಗೆ ತಮ್ಮ ಪದವಿ ಅಧ್ಯಯನವನ್ನು ನಡೆಸುತ್ತಾರೆ. ಈ ಕೋರ್ಸ್‌ನ ಪ್ರಮಾಣಪತ್ರ ಪಡೆಯಬೇಕೆಂದಿದ್ದರೆ ನಾವು ವಿಶ್ವವಿದ್ಯಾಲಯದ ಅನುಮೋದಿತ ಪದವಿಯನ್ನು ಹೊಂದಿರಬೇಕು. ಅದರ ಹೊರತಾಗಿ ನಾವು ಇತರ ಎಲ್ಲಾ ಧರ್ಮಗಳು ಮತ್ತು ಸಂಸ್ಕೃತಿಗಳ ಬಗ್ಗೆ ಕಲಿಯಬೇಕಾಗಿದೆ. ನಮ್ಮ ದೇಶವನ್ನು ವಿಶಾಲ ಮನಸ್ಸಿನ ರೀತಿಯಲ್ಲಿ ತಿಳಿದುಕೊಳ್ಳಲು ಮತ್ತು ಉತ್ತಮ ನಾಗರಿಕರಾಗಲು ನಮಗೆ ಇಲ್ಲಿ ಕಲಿಸಲಾಗುತ್ತದೆ ಎಂದು ಜಾಬಿರ್ ಹೇಳಿದ್ದಾರೆ.

ಮಕ್ಕಳ ನಿಯತಕಾಲಿಕಗಳಲ್ಲಿ ಪ್ರಕಟವಾಗುವ ರಾಮಾಯಣ ಚಿತ್ರಕಥೆಗಳು ಮತ್ತು ಸಣ್ಣ ಕಥೆಗಳನ್ನು ಓದಿದ ಕಾರಣದಿಂದ ಬಾಲ್ಯದಿಂದಲೂ ರಾಮಾಯಣವನ್ನು ಕಲಿಯಲು ಆಸಕ್ತಿ ಹೊಂದಿದ್ದಾಗಿ ರಾಮಾಯಣ ಸ್ಪರ್ಧೆಯಲ್ಲಿ ವಿಜೇತರಾದ ಮತ್ತೊಬ್ಬ ವಿದ್ಯಾರ್ಥಿ ಬಾಸಿತ್ ಹೇಳುತ್ತಾರೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

“ನಾನು ವಾಫಿ ಕೋರ್ಸ್‌‌ಗೆ ಬಂದಾಗ ಇಲ್ಲಿ ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳು ಇದ್ದವು. ಅವರೆಲ್ಲವೂ ಜ್ಞಾನದ ಆಗರಗಳಾಗಿದ್ದು, ರಾಮಾಯಣವು ಹಿಂದೂ ಧಾರ್ಮಿಕ ಜ್ಞಾನದ ಆಗರವಾಗಿದೆ” ಎಂದು ಅವರು ಹೇಳಿದ್ದಾರೆ. ಜಾಬೀರ್ ಮತ್ತು ಬಾಸಿತ್ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ಧರ್ಮದ ಮೂಲಕ ಶಾಂತಿಯನ್ನು ಹರಡಲು ಆಶಿಸುವುದಾಗಿ ಹೇಳಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...