Homeಮುಖಪುಟಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

ಕೇರಳ: ರಾಮಾಯಣ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ಇಸ್ಲಾಮಿಕ್ ಅಧ್ಯಯನ ವಿದ್ಯಾರ್ಥಿಗಳು

- Advertisement -
- Advertisement -

ಕೇರಳದಲ್ಲಿ ನಡೆದ ರಾಜ್ಯ ಮಟ್ಟದ ರಾಮಾಯಣ ರಸಪ್ರಶ್ನೆಯಲ್ಲಿ ವಿಜೇತರಾದ ಐವರು ವಿದ್ಯಾರ್ಥಿಗಳಲ್ಲಿ ಇಸ್ಲಾಮಿಕ್ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಾದ ಮುಹಮ್ಮದ್ ಬಾಸಿತ್‌ ಎಂ. ಮತ್ತು ಮುಹಮ್ಮದ್ ಜಾಬಿರ್ ಪಿ.ಕೆ. ಕೂಡಾ ಸ್ಥಾನ ಪಡೆದು ದೇಶದ ಗಮನ ಸೆಳೆದಿದ್ದಾರೆ. ಈ ಇಬ್ಬರೂ ರಾಜ್ಯದ ಮರ್ಕಝ್ ವಲಾಂಚೇರಿಯ ಕೆ.ಕೆ.ಎಚ್‌.ಎಂ. ಇಸ್ಲಾಮಿಕ್ ಮತ್ತು ಆರ್ಟ್ಸ್ ಕಾಲೇಜಿನ ಇಸ್ಲಾಮಿಕ್ ಅಧ್ಯಯನ ಕೋರ್ಸ್‌ (ವಾಫಿ)ನ ವಿದ್ಯಾರ್ಥಿಗಳಾಗಿದ್ದಾರೆ.

ರಾಮಾಯಣದ ಆಳವಾದ ಅಧ್ಯಯನದ ಆಧಾರದ ಮೇಲೆ ಜುಲೈ 23 ರಿಂದ ಜುಲೈ 25 ರ ನಡುವೆ ಕೇರಳದ ಪ್ರಕಾಶನ ಸಂಸ್ಥೆ ಡಿ.ಸಿ. ಬುಕ್ಸ್ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿತ್ತು. ತಮ್ಮ ಕಾಲೇಜಿನಲ್ಲಿ ಅಧ್ಯಯನದ ಭಾಗವಾಗಿ ರಾಮಾಯಣವನ್ನು ಓದಿಕೊಂಡಿದ್ದ ಜಾಬೀರ್ ಮತ್ತು ಬಾಸಿತ್ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಇತರ ವಿದ್ಯಾರ್ಥಿಗಳೆಂದರೆ ನವನೀತ್ ಗೋಪನ್, ಅಭಿರಾಮ್ ಎಂಪಿ ಮತ್ತು ಗೀತು ಕೃಷ್ಣನ್.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾತನಾಡಿದ ಧರ್ಮಶಾಸ್ತ್ರ ಅಧ್ಯಯನದ ಹಿರಿಯ ವಿದ್ಯಾರ್ಥಿಯಾಗಿರುವ ಜಾಬೀರ್, “ಎಲ್ಲಾ ಧರ್ಮಗಳು ಮಾನವೀಯತೆಯ ಶಾಂತಿಯುತ ಜೀವನಕ್ಕಾಗಿ ಮಾಡಲ್ಪಟ್ಟಿವೆ. ಆದರೆ ಅವುಗಳ ಸುತ್ತಲಿನ ಎಲ್ಲಾ ಇತರ ಉದ್ವಿಗ್ನತೆಗಳು ಮಾನವ ನಿರ್ಮಿತ” ಎಂದು ಹೇಳಿದ್ದಾರೆ.

“ನಾಡಿನಲ್ಲಿ ಉತ್ತಮ ಆಡಳಿತ ಮತ್ತು ನ್ಯಾಯವನ್ನು ಹೇಗೆ ಜಾರಿಗೆ ತರಬಹುದು ಎಂಬುದನ್ನು ರಾಮಾಯಣ ವಿವರಿಸುತ್ತದೆ. ರಾಮಾಯಣವು ರಾಮನನ್ನು ಆದರ್ಶ ರಾಜನೆಂದು ತೋರಿಸುತ್ತದೆ ಮತ್ತು ದೇಶದಲ್ಲಿ ಉತ್ತಮ ಆಡಳಿತ, ನ್ಯಾಯ, ಸದ್ಗುಣ ಮತ್ತು ಕರ್ತವ್ಯಗಳನ್ನು ಹೇಗೆ ಕಾರ್ಯಗತಗೊಳಿಸಬಹುದು ಎಂಬುದನ್ನು ತೋರಿಸುತ್ತದೆ. ಇದು ಜಗತ್ತಿನಲ್ಲಿ ಆದರ್ಶಪ್ರಾಯವಾಗಿ ನಡೆಯಬೇಕು. ಪವಿತ್ರ ಗ್ರಂಥದಲ್ಲಿ ದ್ವೇಷದ ಉಲ್ಲೇಖವಿಲ್ಲ. ಯಾವುದೇ ಧರ್ಮವು ದ್ವೇಷವನ್ನು ಉತ್ತೇಜಿಸುವುದಿಲ್ಲ” ಎಂದು ಜಾಬೀರ್ ಹೇಳಿದ್ದಾರೆ.

ಇದನ್ನೂ ಓದಿ: ನೆಲದ ಸೌಹಾರ್ದಕ್ಕೆ ಸರಣಿ ಕೊಲೆಗಳ ಕೊಡಲಿಯೇಟು; ಸಾಂಸ್ಕೃತಿಕ ಕ್ರಾಂತಿಗೆ ಓಗೊಡಬೇಕಿದೆ ಯುವಜನತೆ

“ತಮ್ಮ ಅಧ್ಯಯನದ ಭಾಗವಾಗಿ ವಿದ್ಯಾರ್ಥಿಗಳು ಎಲ್ಲಾ ಧರ್ಮಗಳ ಬಗ್ಗೆ ಕಲಿಯುತ್ತಾರೆ. ಹಾಗಾಗಿ ಧರ್ಮಗಳ ಪುಸ್ತಕಗಳನ್ನು ನೇರವಾಗಿ ಓದಿ ಅರ್ಥ ಮಾಡಿಕೊಳ್ಳಬಹುದು. ನಮ್ಮಲ್ಲಿ ಹೆಚ್ಚಿನವರು ನೇರವಾಗಿ ಓದುವ ಮತ್ತು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಕಲಿಯುತ್ತಾರೆ. ನಮ್ಮ ಕಾಲೇಜಿನ ಗ್ರಂಥಾಲಯವು ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ವಾಫಿ ಕೋರ್ಸ್‌ ವಿದ್ಯಾರ್ಥಿಗಳು ಇಸ್ಲಾಮಿಕ್ ಅಧ್ಯಯನಗಳೊಂದಿಗೆ ತಮ್ಮ ಪದವಿ ಅಧ್ಯಯನವನ್ನು ನಡೆಸುತ್ತಾರೆ. ಈ ಕೋರ್ಸ್‌ನ ಪ್ರಮಾಣಪತ್ರ ಪಡೆಯಬೇಕೆಂದಿದ್ದರೆ ನಾವು ವಿಶ್ವವಿದ್ಯಾಲಯದ ಅನುಮೋದಿತ ಪದವಿಯನ್ನು ಹೊಂದಿರಬೇಕು. ಅದರ ಹೊರತಾಗಿ ನಾವು ಇತರ ಎಲ್ಲಾ ಧರ್ಮಗಳು ಮತ್ತು ಸಂಸ್ಕೃತಿಗಳ ಬಗ್ಗೆ ಕಲಿಯಬೇಕಾಗಿದೆ. ನಮ್ಮ ದೇಶವನ್ನು ವಿಶಾಲ ಮನಸ್ಸಿನ ರೀತಿಯಲ್ಲಿ ತಿಳಿದುಕೊಳ್ಳಲು ಮತ್ತು ಉತ್ತಮ ನಾಗರಿಕರಾಗಲು ನಮಗೆ ಇಲ್ಲಿ ಕಲಿಸಲಾಗುತ್ತದೆ ಎಂದು ಜಾಬಿರ್ ಹೇಳಿದ್ದಾರೆ.

ಮಕ್ಕಳ ನಿಯತಕಾಲಿಕಗಳಲ್ಲಿ ಪ್ರಕಟವಾಗುವ ರಾಮಾಯಣ ಚಿತ್ರಕಥೆಗಳು ಮತ್ತು ಸಣ್ಣ ಕಥೆಗಳನ್ನು ಓದಿದ ಕಾರಣದಿಂದ ಬಾಲ್ಯದಿಂದಲೂ ರಾಮಾಯಣವನ್ನು ಕಲಿಯಲು ಆಸಕ್ತಿ ಹೊಂದಿದ್ದಾಗಿ ರಾಮಾಯಣ ಸ್ಪರ್ಧೆಯಲ್ಲಿ ವಿಜೇತರಾದ ಮತ್ತೊಬ್ಬ ವಿದ್ಯಾರ್ಥಿ ಬಾಸಿತ್ ಹೇಳುತ್ತಾರೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

“ನಾನು ವಾಫಿ ಕೋರ್ಸ್‌‌ಗೆ ಬಂದಾಗ ಇಲ್ಲಿ ಎಲ್ಲಾ ಧಾರ್ಮಿಕ ಪವಿತ್ರ ಪುಸ್ತಕಗಳು ಇದ್ದವು. ಅವರೆಲ್ಲವೂ ಜ್ಞಾನದ ಆಗರಗಳಾಗಿದ್ದು, ರಾಮಾಯಣವು ಹಿಂದೂ ಧಾರ್ಮಿಕ ಜ್ಞಾನದ ಆಗರವಾಗಿದೆ” ಎಂದು ಅವರು ಹೇಳಿದ್ದಾರೆ. ಜಾಬೀರ್ ಮತ್ತು ಬಾಸಿತ್ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ಧರ್ಮದ ಮೂಲಕ ಶಾಂತಿಯನ್ನು ಹರಡಲು ಆಶಿಸುವುದಾಗಿ ಹೇಳಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...