Homeಮುಖಪುಟಕೇರಳ | ಡಿಎಂಕೆ ಚಳವಳಿ ಪ್ರಾರಂಭಿಸಿದ ಪಿವಿ ಅನ್ವರ್ : ರಾಜಕೀಯ ಪಕ್ಷ ಅಲ್ಲ ಎಂದ...

ಕೇರಳ | ಡಿಎಂಕೆ ಚಳವಳಿ ಪ್ರಾರಂಭಿಸಿದ ಪಿವಿ ಅನ್ವರ್ : ರಾಜಕೀಯ ಪಕ್ಷ ಅಲ್ಲ ಎಂದ ಬಂಡಾಯ ಶಾಸಕ

- Advertisement -
- Advertisement -

ಕೇರಳದ ನಿಲಂಬೂರ್‌ನ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಬಂಡಾಯ ಶಾಸಕ ಪಿವಿ ಅನ್ವರ್ ಅವರು ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿ ಅಕ್ಟೋಬರ್ 6ರ ಭಾನುವಾರದಂದು ‘ಡೆಮಾಕ್ರಟಿಕ್ ಮೂವ್‌ಮೆಂಟ್ ಕೇರಳ’ (ಡಿಎಂಕೆ) ಎಂಬ ತಮ್ಮ ‘ಸಾಮಾಜಿಕ ಚಳುವಳಿ’ಯನ್ನು ಅಧಿಕೃತವಾಗಿ ಪ್ರಾರಂಭಿಸಿದ್ದಾರೆ.

ಆಡಳಿತ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳಿಗೆ ಒಲವು ಹೊಂದಿರುವ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜನರು ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವನ್ನು ಹೋಲುವ ಧ್ವಜ ಮತ್ತು ಸ್ಕಾರ್ಫ್‌ಗಳನ್ನು ಧರಿಸಿದ್ದರು. ಗಮನಾರ್ಹವಾಗಿ, ಈ ಹಿಂದೆ ಅನ್ವರ್ ಅವರು ದ್ರಾವಿಡ ಪಕ್ಷಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿ ಪತ್ರ ಬರೆದಿದ್ದರು.

ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅನ್ವರ್, “ಪೊಲೀಸರು ಉದ್ದೇಶಪೂರ್ವಕವಾಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನಮ್ಮ ಬೆಂಬಲಿಗರ ವಾಹನಗಳನ್ನು ತಡೆದಿದ್ದಾರೆ. ಅವರು ಸಾಧ್ಯವಾಗುವ ಎಲ್ಲಾ ರೀತಿಯಲ್ಲೂ ನಮ್ಮ ಕಾರ್ಯಕ್ರಮ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಡಿಎಂಕೆ ಪಕ್ಷದ ರಾಜ್ಯ ಪದಾಧಿಕಾರಿಗಳ ಮನೆಗೆ ಭೇಟಿ ನೀಡಿ ಚಿನ್ನ ಕಳ್ಳಸಾಗಣೆಯಲ್ಲಿ ತೊಡಗಿರುವ ಬಗ್ಗೆ ಪ್ರಶ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅನ್ವರ್, “ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಲು ಹೋಗಿದ್ದು ರಾಜಕೀಯ ಪಕ್ಷ ಪ್ರಾರಂಭಿಸಲು ಅಲ್ಲ, ಬದಲಾಗಿ ಚಳವಳಿಗೆ ಅವರ ಆಶೀರ್ವಾದ ಪಡೆಯಲು ಎಂದಿದ್ದಾರೆ. ಕೇರಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅನ್ವರ್, ಡಿಎಂಕೆ ಭಾರತದಲ್ಲಿ ಅತ್ಯಂತ ಜಾತ್ಯತೀತ ಪ್ರಜಾಪ್ರಭುತ್ವ ಪಕ್ಷವಾಗಿರುವ ಕಾರಣ ನಾನು ಸ್ಟಾಲಿನ್ ಅವರನ್ನು ಭೇಟಿ ಮಾಡಲು ಹೋಗಿದ್ದೆ, ಈ ನಡುವೆ ಸಿಪಿಐ(ಎಂ)ನ ಒಬ್ಬ ವ್ಯಕ್ತಿ ಸ್ಟಾಲಿನ್ ಅವರನ್ನು ಭೇಟಿಯಾಗಿ, ನನ್ನ ವಿರುದ್ಧ ಹೇಳಿಕೆ ನೀಡುವಂತೆ ಕೋರಿದ್ದಾರೆ” ಎಂದು ಆರೋಪಿಸಿದ್ದಾರೆ. ವರದಿಗಳ ಪ್ರಕಾರ, ಸ್ಟಾಲಿನ್ ಅವರು ಅನ್ವರ್ ಅವರನ್ನು ಭೇಟಿಗೆ ನಿರಾಕರಿಸಿದ್ದಾರೆ.

“ಲೋಕಸಭೆ ಚುನಾವಣೆಯ ಸಂದರ್ಭ ಕೊಯಮತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಕೆ ಅಣ್ಣಾಮಲೈ ವಿರುದ್ಧ ಸ್ಪರ್ಧಿಸಲು ಡಿಎಂಕೆ ಸಿಪಿಐನ ಸೀಟು ಕಿತ್ತುಕೊಂಡಿದ್ದಕ್ಕೆ ತ್ರಿಶೂರ್‌ನಲ್ಲಿ ಬಿಜೆಪಿ ಗೆಲುವಿಗೆ ಕೇರಳ ಮುಖ್ಯಮಂತ್ರಿಯೇ ದಾರಿ ಮಾಡಿಕೊಟ್ಟಿದ್ದಾರೆ ಎಂದು ಪಿಣರಾಯಿ ವಿಜಯನ್‌ರ ಹೆಸರನ್ನು ಉಲ್ಲೇಖಿಸದೆ ಅನ್ವರ್ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಉಪಚುನಾವಣೆಗೆ ಬಿಜೆಪಿ ಮತ್ತು ಸಿಪಿಎಂ ನಡುವೆ ಒಳ ಒಪ್ಪಂದ ಆಗಿದೆ. ಸಿಪಿಐ(ಎಂ) ನೆರವಿನಿಂದ ಪಾಲಕ್ಕಾಡ್ ಕ್ಷೇತ್ರವನ್ನು ಬಿಜೆಪಿ ಭದ್ರಪಡಿಸಿಕೊಳ್ಳಲಿದೆ ಮತ್ತು ಚೇಲಕ್ಕರಾದಲ್ಲಿ ಬಿಜೆಪಿ ಸಿಪಿಐಎಂಗೆ ಮತ ಹಾಕಲಿದೆ” ಎಂದಿದ್ದಾರೆ. ಡಿಎಂಕೆ ಮತ್ತು ಸ್ಟಾಲಿನ್ ಅವರನ್ನು ಅನ್ವರ್ ಹಾಡಿ ಹೊಗಲಿದ್ದಾರೆ.

“ತ್ರಿಶೂರ್ ಪೂರಂ ವೇಳೆ ಉದ್ದೇಶಪೂರ್ವಕವಾಗಿ ವಿವಾದ ಎಬ್ಬಿಸಿದ್ದು ಎಡಿಜಿಪಿ ಅಜಿತ್ ಕುಮಾರ್. ನಾನು ತ್ರಿಶೂರ್ ಪೂರಂ ಸಮಯದಲ್ಲಿ ನಡೆದ ತಂತ್ರಗಳನ್ನು ಎತ್ತಿ ತೋರಿಸಿದೆ. ಅದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಯಿತು ಎಂದೆ. ಆದರೆ, ಎಡಿಜಿಪಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಿಎಂ ಸಿದ್ಧರಿರಲಿಲ್ಲ” ಎಂದು ಹೇಳಿದ್ದಾರೆ.

ತನ್ನ ಹೊಸ ಆಂದೋಲನದ ಪ್ರಣಾಳಿಕೆಯನ್ನು ಅನ್ವರ್ ಬಿಡುಗಡೆ ಮಾಡಿದ್ದು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾಭಿಮಾನ ಮತ್ತು ಫೆಡರಲಿಸಂಗೆ ಒತ್ತು ನೀಡುವ ಮೂಲಕ ಡಿಎಂಕೆ ಪ್ರಣಾಳಿಕೆಗೆ ಸಾಮ್ಯತೆ ಇರುವ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಮಲಬಾರ್ ಪ್ರದೇಶವನ್ನು ದೀರ್ಘಕಾಲದಿಂದ ನಿರ್ಲಕ್ಷಿಸಲಾಗಿದೆ ಎಂದು ಪ್ರಣಾಳಿಕೆಯಲ್ಲಿ ಒತ್ತಿ ಹೇಳಿರುವ ಅನ್ವರ್ ಅವರು, ಕೇರಳದ 14 ಜಿಲ್ಲೆಗಳ ಜೊತೆಗೆ ಹೊಸ ಜಿಲ್ಲೆಯ ರಚನೆ, ಜಾತಿ ಜನ ಗಣತಿ ನಡೆಸುವುದು, ವಲಸೆ ನಿವಾಸಿಗಳಿಗೆ ಮತದಾನದ ಹಕ್ಕು ನೀಡುವುದು, ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನ, ಶಾಲಾ ಅವಧಿ ಕಡಿತಗೊಳಿಸುವುದು, ಕೃಷಿ ಬಜೆಟ್, ಕೃಷಿ ಪ್ರವಾಸೋದ್ಯಮ ಸೇರಿದಂತೆ ಹಲವು ವಿಷಯಗಳ ಭರವಸೆ ನೀಡಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಒನ್ ನೇಷನ್ ಒನ್ ಎಲೆಕ್ಷನ್‌ನಂತಹ ಫೆಡರಲಿಸಂ ಅನ್ನು ನಾಶಪಡಿಸುವ ಕೇಂದ್ರ ಸರ್ಕಾರದ ನೀತಿಗಳನ್ನು ಅವರು ವಿರೋಧಿಸಿದ್ದಾರೆ.

ಮಲಪ್ಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳನ್ನು ವಿಭಜಿಸಿ 15ನೇ ಜಿಲ್ಲೆ ರಚಿಸುವ ಪ್ರಸ್ತಾಪವನ್ನು ಅನ್ವರ್ ಮುಂದಿಟ್ಟಿದ್ದಾರೆ. ಕೇರಳ ಡೆಮಾಕ್ರಟಿಕ್ ಮೂವ್‌ಮೆಂಟ್ (ಡಿಎಂಕೆ) ರಾಜಕೀಯ ಪಕ್ಷ ಅಲ್ಲ ಎಂದಿದ್ದಾರೆ. ಆದರೆ, ಅನ್ವರ್ ಅವರು ಡಿಎಂಕೆ ಮತ್ತು ಎಂ.ಕೆ ಸ್ಟಾಲಿನ್ ಅವರನ್ನು ಹೊಗಳುವುದು ನೋಡಿದ್ರೆ, ತಮಿಳುನಾಡಿನ ಡಿಎಂಕೆಯನ್ನು ಕೇರಳಕ್ಕೆ ವಿಸ್ತರಿಸಿರುವ ಎಲ್ಲಾ ಲಕ್ಷಣ ಕಾಣುತ್ತಿದೆ.

ಇದನ್ನೂ ಓದಿ : ಬಹುಜನರಿಗೆ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ : ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...