Homeಮುಖಪುಟಕೇರಳ | ಡಿಎಂಕೆ ಚಳವಳಿ ಪ್ರಾರಂಭಿಸಿದ ಪಿವಿ ಅನ್ವರ್ : ರಾಜಕೀಯ ಪಕ್ಷ ಅಲ್ಲ ಎಂದ...

ಕೇರಳ | ಡಿಎಂಕೆ ಚಳವಳಿ ಪ್ರಾರಂಭಿಸಿದ ಪಿವಿ ಅನ್ವರ್ : ರಾಜಕೀಯ ಪಕ್ಷ ಅಲ್ಲ ಎಂದ ಬಂಡಾಯ ಶಾಸಕ

- Advertisement -
- Advertisement -

ಕೇರಳದ ನಿಲಂಬೂರ್‌ನ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಬಂಡಾಯ ಶಾಸಕ ಪಿವಿ ಅನ್ವರ್ ಅವರು ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿ ಅಕ್ಟೋಬರ್ 6ರ ಭಾನುವಾರದಂದು ‘ಡೆಮಾಕ್ರಟಿಕ್ ಮೂವ್‌ಮೆಂಟ್ ಕೇರಳ’ (ಡಿಎಂಕೆ) ಎಂಬ ತಮ್ಮ ‘ಸಾಮಾಜಿಕ ಚಳುವಳಿ’ಯನ್ನು ಅಧಿಕೃತವಾಗಿ ಪ್ರಾರಂಭಿಸಿದ್ದಾರೆ.

ಆಡಳಿತ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳಿಗೆ ಒಲವು ಹೊಂದಿರುವ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜನರು ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವನ್ನು ಹೋಲುವ ಧ್ವಜ ಮತ್ತು ಸ್ಕಾರ್ಫ್‌ಗಳನ್ನು ಧರಿಸಿದ್ದರು. ಗಮನಾರ್ಹವಾಗಿ, ಈ ಹಿಂದೆ ಅನ್ವರ್ ಅವರು ದ್ರಾವಿಡ ಪಕ್ಷಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿ ಪತ್ರ ಬರೆದಿದ್ದರು.

ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅನ್ವರ್, “ಪೊಲೀಸರು ಉದ್ದೇಶಪೂರ್ವಕವಾಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನಮ್ಮ ಬೆಂಬಲಿಗರ ವಾಹನಗಳನ್ನು ತಡೆದಿದ್ದಾರೆ. ಅವರು ಸಾಧ್ಯವಾಗುವ ಎಲ್ಲಾ ರೀತಿಯಲ್ಲೂ ನಮ್ಮ ಕಾರ್ಯಕ್ರಮ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಡಿಎಂಕೆ ಪಕ್ಷದ ರಾಜ್ಯ ಪದಾಧಿಕಾರಿಗಳ ಮನೆಗೆ ಭೇಟಿ ನೀಡಿ ಚಿನ್ನ ಕಳ್ಳಸಾಗಣೆಯಲ್ಲಿ ತೊಡಗಿರುವ ಬಗ್ಗೆ ಪ್ರಶ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅನ್ವರ್, “ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಲು ಹೋಗಿದ್ದು ರಾಜಕೀಯ ಪಕ್ಷ ಪ್ರಾರಂಭಿಸಲು ಅಲ್ಲ, ಬದಲಾಗಿ ಚಳವಳಿಗೆ ಅವರ ಆಶೀರ್ವಾದ ಪಡೆಯಲು ಎಂದಿದ್ದಾರೆ. ಕೇರಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅನ್ವರ್, ಡಿಎಂಕೆ ಭಾರತದಲ್ಲಿ ಅತ್ಯಂತ ಜಾತ್ಯತೀತ ಪ್ರಜಾಪ್ರಭುತ್ವ ಪಕ್ಷವಾಗಿರುವ ಕಾರಣ ನಾನು ಸ್ಟಾಲಿನ್ ಅವರನ್ನು ಭೇಟಿ ಮಾಡಲು ಹೋಗಿದ್ದೆ, ಈ ನಡುವೆ ಸಿಪಿಐ(ಎಂ)ನ ಒಬ್ಬ ವ್ಯಕ್ತಿ ಸ್ಟಾಲಿನ್ ಅವರನ್ನು ಭೇಟಿಯಾಗಿ, ನನ್ನ ವಿರುದ್ಧ ಹೇಳಿಕೆ ನೀಡುವಂತೆ ಕೋರಿದ್ದಾರೆ” ಎಂದು ಆರೋಪಿಸಿದ್ದಾರೆ. ವರದಿಗಳ ಪ್ರಕಾರ, ಸ್ಟಾಲಿನ್ ಅವರು ಅನ್ವರ್ ಅವರನ್ನು ಭೇಟಿಗೆ ನಿರಾಕರಿಸಿದ್ದಾರೆ.

“ಲೋಕಸಭೆ ಚುನಾವಣೆಯ ಸಂದರ್ಭ ಕೊಯಮತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಕೆ ಅಣ್ಣಾಮಲೈ ವಿರುದ್ಧ ಸ್ಪರ್ಧಿಸಲು ಡಿಎಂಕೆ ಸಿಪಿಐನ ಸೀಟು ಕಿತ್ತುಕೊಂಡಿದ್ದಕ್ಕೆ ತ್ರಿಶೂರ್‌ನಲ್ಲಿ ಬಿಜೆಪಿ ಗೆಲುವಿಗೆ ಕೇರಳ ಮುಖ್ಯಮಂತ್ರಿಯೇ ದಾರಿ ಮಾಡಿಕೊಟ್ಟಿದ್ದಾರೆ ಎಂದು ಪಿಣರಾಯಿ ವಿಜಯನ್‌ರ ಹೆಸರನ್ನು ಉಲ್ಲೇಖಿಸದೆ ಅನ್ವರ್ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಉಪಚುನಾವಣೆಗೆ ಬಿಜೆಪಿ ಮತ್ತು ಸಿಪಿಎಂ ನಡುವೆ ಒಳ ಒಪ್ಪಂದ ಆಗಿದೆ. ಸಿಪಿಐ(ಎಂ) ನೆರವಿನಿಂದ ಪಾಲಕ್ಕಾಡ್ ಕ್ಷೇತ್ರವನ್ನು ಬಿಜೆಪಿ ಭದ್ರಪಡಿಸಿಕೊಳ್ಳಲಿದೆ ಮತ್ತು ಚೇಲಕ್ಕರಾದಲ್ಲಿ ಬಿಜೆಪಿ ಸಿಪಿಐಎಂಗೆ ಮತ ಹಾಕಲಿದೆ” ಎಂದಿದ್ದಾರೆ. ಡಿಎಂಕೆ ಮತ್ತು ಸ್ಟಾಲಿನ್ ಅವರನ್ನು ಅನ್ವರ್ ಹಾಡಿ ಹೊಗಲಿದ್ದಾರೆ.

“ತ್ರಿಶೂರ್ ಪೂರಂ ವೇಳೆ ಉದ್ದೇಶಪೂರ್ವಕವಾಗಿ ವಿವಾದ ಎಬ್ಬಿಸಿದ್ದು ಎಡಿಜಿಪಿ ಅಜಿತ್ ಕುಮಾರ್. ನಾನು ತ್ರಿಶೂರ್ ಪೂರಂ ಸಮಯದಲ್ಲಿ ನಡೆದ ತಂತ್ರಗಳನ್ನು ಎತ್ತಿ ತೋರಿಸಿದೆ. ಅದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಯಿತು ಎಂದೆ. ಆದರೆ, ಎಡಿಜಿಪಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಿಎಂ ಸಿದ್ಧರಿರಲಿಲ್ಲ” ಎಂದು ಹೇಳಿದ್ದಾರೆ.

ತನ್ನ ಹೊಸ ಆಂದೋಲನದ ಪ್ರಣಾಳಿಕೆಯನ್ನು ಅನ್ವರ್ ಬಿಡುಗಡೆ ಮಾಡಿದ್ದು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾಭಿಮಾನ ಮತ್ತು ಫೆಡರಲಿಸಂಗೆ ಒತ್ತು ನೀಡುವ ಮೂಲಕ ಡಿಎಂಕೆ ಪ್ರಣಾಳಿಕೆಗೆ ಸಾಮ್ಯತೆ ಇರುವ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಮಲಬಾರ್ ಪ್ರದೇಶವನ್ನು ದೀರ್ಘಕಾಲದಿಂದ ನಿರ್ಲಕ್ಷಿಸಲಾಗಿದೆ ಎಂದು ಪ್ರಣಾಳಿಕೆಯಲ್ಲಿ ಒತ್ತಿ ಹೇಳಿರುವ ಅನ್ವರ್ ಅವರು, ಕೇರಳದ 14 ಜಿಲ್ಲೆಗಳ ಜೊತೆಗೆ ಹೊಸ ಜಿಲ್ಲೆಯ ರಚನೆ, ಜಾತಿ ಜನ ಗಣತಿ ನಡೆಸುವುದು, ವಲಸೆ ನಿವಾಸಿಗಳಿಗೆ ಮತದಾನದ ಹಕ್ಕು ನೀಡುವುದು, ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನ, ಶಾಲಾ ಅವಧಿ ಕಡಿತಗೊಳಿಸುವುದು, ಕೃಷಿ ಬಜೆಟ್, ಕೃಷಿ ಪ್ರವಾಸೋದ್ಯಮ ಸೇರಿದಂತೆ ಹಲವು ವಿಷಯಗಳ ಭರವಸೆ ನೀಡಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಒನ್ ನೇಷನ್ ಒನ್ ಎಲೆಕ್ಷನ್‌ನಂತಹ ಫೆಡರಲಿಸಂ ಅನ್ನು ನಾಶಪಡಿಸುವ ಕೇಂದ್ರ ಸರ್ಕಾರದ ನೀತಿಗಳನ್ನು ಅವರು ವಿರೋಧಿಸಿದ್ದಾರೆ.

ಮಲಪ್ಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳನ್ನು ವಿಭಜಿಸಿ 15ನೇ ಜಿಲ್ಲೆ ರಚಿಸುವ ಪ್ರಸ್ತಾಪವನ್ನು ಅನ್ವರ್ ಮುಂದಿಟ್ಟಿದ್ದಾರೆ. ಕೇರಳ ಡೆಮಾಕ್ರಟಿಕ್ ಮೂವ್‌ಮೆಂಟ್ (ಡಿಎಂಕೆ) ರಾಜಕೀಯ ಪಕ್ಷ ಅಲ್ಲ ಎಂದಿದ್ದಾರೆ. ಆದರೆ, ಅನ್ವರ್ ಅವರು ಡಿಎಂಕೆ ಮತ್ತು ಎಂ.ಕೆ ಸ್ಟಾಲಿನ್ ಅವರನ್ನು ಹೊಗಳುವುದು ನೋಡಿದ್ರೆ, ತಮಿಳುನಾಡಿನ ಡಿಎಂಕೆಯನ್ನು ಕೇರಳಕ್ಕೆ ವಿಸ್ತರಿಸಿರುವ ಎಲ್ಲಾ ಲಕ್ಷಣ ಕಾಣುತ್ತಿದೆ.

ಇದನ್ನೂ ಓದಿ : ಬಹುಜನರಿಗೆ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ : ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....