Homeಮುಖಪುಟಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

ಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಭಾರೀ ಸದ್ದು ಮಾಡಿರುವ ನಿವೃತ್ತ ಹೆಡ್‌ಲೋಡ್‌ ಕಾರ್ಮಿಕ ಗೋಪನ್‌ ಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ, ಕುಟುಂಬಸ್ಥರ ವಿರೋಧದ ನಡುವೆಯೂ ಗುರುವಾರ (ಜ.15) ಪೊಲೀಸರು ಗೋಪನ್‌ ಸ್ವಾಮಿಯವರ ಶವವನ್ನು ಸಮಾಧಿಯಿಂದ ಹೊರ ತೆಗೆದಿದ್ದಾರೆ.

ತಿರುವನಂತಪುರಂ ಜಿಲ್ಲೆಯ ನೆಯ್ಯತ್ತಿಂಕರ ಬಳಿಯ ಅರಳುಮೂಡುವಿನ ಮನೆ ಬಳಿ 72 ವರ್ಷದ ಗೋಪನ್ ಸ್ವಾಮಿಯವರ ಶವ ಹೂತಿದ್ದ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದರು.

ಸ್ವಯಂ ಗೋಷಿತ ಗುರು ಎನ್ನಲಾದ ನಿವೃತ್ತ ಹೆಡ್‌ಲೋಡ್ ಕಾರ್ಮಿಕ ಗೋಪನ್ ಸ್ವಾಮಿ ಜನವರಿ 9ರಿಂದ ನಾಪತ್ತೆಯಾಗಿದ್ದರು. ಆ ಬಳಿಕ ಸ್ಥಳೀಯ ದೇವಸ್ಥಾನದ ಬಳಿ ಅವರ ಸಮಾಧಿ ಕಂಡು ಬಂದಿತ್ತು. ಗೋಪನ್ ಸ್ವಾಮಿ ಆಧ್ಯಾತ್ಮಿಕತೆಯ ಪರಾಕಾಷ್ಠೆಯನ್ನು ತಲುಪಿ ಸ್ವಇಚ್ಛೆಯಿಂದ ಸಮಾಧಿಯಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಈ ಪ್ರಕರಣದ ಹಿಂದೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಜನವರಿ 13ರಂದು ಸಮಾಧಿ ಬಳಿಗೆ ಬಂದ ಪೊಲೀಸರು ಮತ್ತು ಇತರ ಅಧಿಕಾರಿಗಳು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದರು. ಆದರೆ, ಇದಕ್ಕೆ ಗೋಪನ್ ಸ್ವಾಮಿ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗೋಪನ್ ಸ್ವಾಮಿ ಪತ್ನಿ ಸುಲೋಚನಾ, ಮಕ್ಕಳಾದ ಸನಂದನ್, ರಾಜಸೇನನ್ ಸಮಾಧಿ ಬಳಿ ಅಡ್ಡಲಾಗಿ ನಿಂತು ಪೊಲೀಸರನ್ನು ತಡೆದಿದ್ದರು.

“ಗೋಪನ್ ಸ್ವಾಮಿ ಸಾವಿಗೂ ಮುನ್ನ ಆಧ್ಯಾತ್ಮಿಕತೆಯ ಬಗ್ಗೆ ಮಾತನಾಡಿದ್ದಾರೆ. ಅವರ ಸಾವನ್ನು ವೈದ್ಯರಲ್ಲ, ಶಿವನೇ ನಿರ್ಧರಿಸಿದ್ದಾನೆ. ಹಾಗಾಗಿ, ವೈದ್ಯಕೀಯ ದೃಢೀಕರಣದ ಅಗತ್ಯವಿಲ್ಲ ಎಂದು ಗೋಪನ್‌ ಸ್ವಾಮಿ ಪತ್ನಿ ಸುಲೋಚನಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಆದರೆ, ಜಿಲ್ಲಾಧಿಕಾರಿ ಅನು ಕುಮಾರಿ ಅವರು ಗೋಪನ್‌ ಸ್ವಾಮಿ ನಾಪತ್ತೆ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಆದೇಶದ ವಿರುದ್ದ ಗೋಪನ್ ಸ್ವಾಮಿ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನಮ್ಮ ಇಚ್ಛೆಯಂತೆ ಸಮಾಧಿ ಮಾಡುವುದು ನಮ್ಮ ಹಕ್ಕು. ನಮ್ಮ ಧಾರ್ಮಿಕ ನಂಬಿಕೆ ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಗೋಪನ್‌ ಸ್ವಾಮಿ ತನ್ನ ಧಾರ್ಮಿಕ ನಂಬಿಕೆಯಂತೆ ಸಮಾಧಿಯಾಗಿದ್ದಾರೆ. ಹಾಗಾಗಿ, ಸಮಾಧಿಯಿಂದ ಶವ ಹೊರ ತೆಗೆಯುವುದು ಸರಿಯಲ್ಲ ಎಂದು ಕುಟುಂಬಸ್ಥರು ವಾದಿಸಿದ್ದರು.

ಆದರೆ, ಗೋಪನ್ ಸ್ವಾಮಿ ಕುಟುಂಬದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶದಂತೆ ಸಮಾಧಿಯಿಂದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಗೋಪನ್ ಸ್ವಾಮಿ ಸಾವನ್ನಪ್ಪಿದರೆ ನೀವು ಮರಣ ಪ್ರಮಾಣ ಪತ್ರ ಏಕೆ ತೆಗೆದುಕೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

ವರದಿಗಳ ಪ್ರಕಾರ, ಗುರುವಾರ ಪೊಲೀಸರು ಸಮಾಧಿ ತೆರೆದಾಗ ಅದರೊಳಗೆ ಗೋಪನ್ ಸ್ವಾಮಿಯವರ ಶವ ಬೂದಿ ಅಥವಾ ಭಸ್ಮ ಮತ್ತು ಸುಗಂಧ ದ್ರವ್ಯಗಳಿಂದ ಆವೃತ್ತವಾಗಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶವ ಹೊರ ತೆಗೆಯುವ ಹಿನ್ನೆಲೆ ಗುರುವಾರ ಬೆಳಿಗ್ಗೆಯೇ ಸಮಾಧಿ ಸ್ಥಳದಲ್ಲಿ ದೊಡ್ಡ ಮಟ್ಟದಲ್ಲಿ ಪೊಲೀಸ್  ಮತ್ತು ಮೂರು ವಿಧಿವಿಜ್ಞಾನ ತಜ್ಞರ ತಂಡಗಳನ್ನು ನಿಯೋಜಿಸಲಾಗಿತ್ತು. ಗಲಾಟೆಯಾಗುವ ಮುನ್ಸೂಚನೆಯಿದ್ದ ಕಾರಣ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ವರದಿಗಳ ಪ್ರಕಾರ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಮುಂದುವರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಗೋಪನ್ ಸ್ವಾಮಿಯದ್ದು ಕೊಲೆಯೂ, ಇಲ್ಲಾ ಅವರೇ ಸಮಾಧಿಯಾದರೋ ಎಂಬುವುದು ಖಚಿತವಾಗಬೇಕಿದೆ.

ಕೋಮು ಬಣ್ಣ ಬಳಿದ ಹಿಂದುತ್ವ ಸಂಘಟನೆಗಳು :

ಗೋಪನ್ ಸ್ವಾಮಿ ಸಮಾಧಿ ಪ್ರಕರಣ ಅವರ ಕುಟುಂಬ ಮತ್ತು ಪೊಲೀಸರ ನಡುವಿನ ಸಂಘರ್ಷ. ಆದರೆ, ‘ಹಿಂದೂ ಐಕ್ಯ ವೇದಿ’ ಮತ್ತು ‘ವಿಎಸ್‌ಡಿಪಿ’ಯಂತಹ ಕೆಲ ಹಿಂದುತ್ವ ಸಂಘಟನೆಗಳು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದೆ.

ಮುಸ್ಲಿಮರು ಗೋಪನ್ ಸ್ವಾಮಿಯವರ ಸಮಾಧಿಯನ್ನು ಬಲವಂತವಾಗಿ ತೆರೆಯುವಂತೆ ಮಾಡಿ, ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಆದರೆ, ಪೊಲೀಸರು ಗೋಪನ್ ಸ್ವಾಮಿ ಸಮಾಧಿ ತೆರೆದಿರುವುದು ಹೈಕೋರ್ಟ್ ಆದೇಶದ ಹಿನ್ನಲೆಯಾಗಿದೆ.

ಸೈಫ್ ಅಲಿ ಖಾನ್ ಇರಿತ ಪ್ರಕರಣ; ದಾಳಿಕೋರನಿಗಾಗಿ 7 ಪೊಲೀಸ್ ತಂಡಗಳಿಂದ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...