Homeಮುಖಪುಟಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

ಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಭಾರೀ ಸದ್ದು ಮಾಡಿರುವ ನಿವೃತ್ತ ಹೆಡ್‌ಲೋಡ್‌ ಕಾರ್ಮಿಕ ಗೋಪನ್‌ ಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ, ಕುಟುಂಬಸ್ಥರ ವಿರೋಧದ ನಡುವೆಯೂ ಗುರುವಾರ (ಜ.15) ಪೊಲೀಸರು ಗೋಪನ್‌ ಸ್ವಾಮಿಯವರ ಶವವನ್ನು ಸಮಾಧಿಯಿಂದ ಹೊರ ತೆಗೆದಿದ್ದಾರೆ.

ತಿರುವನಂತಪುರಂ ಜಿಲ್ಲೆಯ ನೆಯ್ಯತ್ತಿಂಕರ ಬಳಿಯ ಅರಳುಮೂಡುವಿನ ಮನೆ ಬಳಿ 72 ವರ್ಷದ ಗೋಪನ್ ಸ್ವಾಮಿಯವರ ಶವ ಹೂತಿದ್ದ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದರು.

ಸ್ವಯಂ ಗೋಷಿತ ಗುರು ಎನ್ನಲಾದ ನಿವೃತ್ತ ಹೆಡ್‌ಲೋಡ್ ಕಾರ್ಮಿಕ ಗೋಪನ್ ಸ್ವಾಮಿ ಜನವರಿ 9ರಿಂದ ನಾಪತ್ತೆಯಾಗಿದ್ದರು. ಆ ಬಳಿಕ ಸ್ಥಳೀಯ ದೇವಸ್ಥಾನದ ಬಳಿ ಅವರ ಸಮಾಧಿ ಕಂಡು ಬಂದಿತ್ತು. ಗೋಪನ್ ಸ್ವಾಮಿ ಆಧ್ಯಾತ್ಮಿಕತೆಯ ಪರಾಕಾಷ್ಠೆಯನ್ನು ತಲುಪಿ ಸ್ವಇಚ್ಛೆಯಿಂದ ಸಮಾಧಿಯಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಈ ಪ್ರಕರಣದ ಹಿಂದೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಜನವರಿ 13ರಂದು ಸಮಾಧಿ ಬಳಿಗೆ ಬಂದ ಪೊಲೀಸರು ಮತ್ತು ಇತರ ಅಧಿಕಾರಿಗಳು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದರು. ಆದರೆ, ಇದಕ್ಕೆ ಗೋಪನ್ ಸ್ವಾಮಿ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗೋಪನ್ ಸ್ವಾಮಿ ಪತ್ನಿ ಸುಲೋಚನಾ, ಮಕ್ಕಳಾದ ಸನಂದನ್, ರಾಜಸೇನನ್ ಸಮಾಧಿ ಬಳಿ ಅಡ್ಡಲಾಗಿ ನಿಂತು ಪೊಲೀಸರನ್ನು ತಡೆದಿದ್ದರು.

“ಗೋಪನ್ ಸ್ವಾಮಿ ಸಾವಿಗೂ ಮುನ್ನ ಆಧ್ಯಾತ್ಮಿಕತೆಯ ಬಗ್ಗೆ ಮಾತನಾಡಿದ್ದಾರೆ. ಅವರ ಸಾವನ್ನು ವೈದ್ಯರಲ್ಲ, ಶಿವನೇ ನಿರ್ಧರಿಸಿದ್ದಾನೆ. ಹಾಗಾಗಿ, ವೈದ್ಯಕೀಯ ದೃಢೀಕರಣದ ಅಗತ್ಯವಿಲ್ಲ ಎಂದು ಗೋಪನ್‌ ಸ್ವಾಮಿ ಪತ್ನಿ ಸುಲೋಚನಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಆದರೆ, ಜಿಲ್ಲಾಧಿಕಾರಿ ಅನು ಕುಮಾರಿ ಅವರು ಗೋಪನ್‌ ಸ್ವಾಮಿ ನಾಪತ್ತೆ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಆದೇಶದ ವಿರುದ್ದ ಗೋಪನ್ ಸ್ವಾಮಿ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನಮ್ಮ ಇಚ್ಛೆಯಂತೆ ಸಮಾಧಿ ಮಾಡುವುದು ನಮ್ಮ ಹಕ್ಕು. ನಮ್ಮ ಧಾರ್ಮಿಕ ನಂಬಿಕೆ ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಗೋಪನ್‌ ಸ್ವಾಮಿ ತನ್ನ ಧಾರ್ಮಿಕ ನಂಬಿಕೆಯಂತೆ ಸಮಾಧಿಯಾಗಿದ್ದಾರೆ. ಹಾಗಾಗಿ, ಸಮಾಧಿಯಿಂದ ಶವ ಹೊರ ತೆಗೆಯುವುದು ಸರಿಯಲ್ಲ ಎಂದು ಕುಟುಂಬಸ್ಥರು ವಾದಿಸಿದ್ದರು.

ಆದರೆ, ಗೋಪನ್ ಸ್ವಾಮಿ ಕುಟುಂಬದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶದಂತೆ ಸಮಾಧಿಯಿಂದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಗೋಪನ್ ಸ್ವಾಮಿ ಸಾವನ್ನಪ್ಪಿದರೆ ನೀವು ಮರಣ ಪ್ರಮಾಣ ಪತ್ರ ಏಕೆ ತೆಗೆದುಕೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

ವರದಿಗಳ ಪ್ರಕಾರ, ಗುರುವಾರ ಪೊಲೀಸರು ಸಮಾಧಿ ತೆರೆದಾಗ ಅದರೊಳಗೆ ಗೋಪನ್ ಸ್ವಾಮಿಯವರ ಶವ ಬೂದಿ ಅಥವಾ ಭಸ್ಮ ಮತ್ತು ಸುಗಂಧ ದ್ರವ್ಯಗಳಿಂದ ಆವೃತ್ತವಾಗಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶವ ಹೊರ ತೆಗೆಯುವ ಹಿನ್ನೆಲೆ ಗುರುವಾರ ಬೆಳಿಗ್ಗೆಯೇ ಸಮಾಧಿ ಸ್ಥಳದಲ್ಲಿ ದೊಡ್ಡ ಮಟ್ಟದಲ್ಲಿ ಪೊಲೀಸ್  ಮತ್ತು ಮೂರು ವಿಧಿವಿಜ್ಞಾನ ತಜ್ಞರ ತಂಡಗಳನ್ನು ನಿಯೋಜಿಸಲಾಗಿತ್ತು. ಗಲಾಟೆಯಾಗುವ ಮುನ್ಸೂಚನೆಯಿದ್ದ ಕಾರಣ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ವರದಿಗಳ ಪ್ರಕಾರ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಮುಂದುವರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಗೋಪನ್ ಸ್ವಾಮಿಯದ್ದು ಕೊಲೆಯೂ, ಇಲ್ಲಾ ಅವರೇ ಸಮಾಧಿಯಾದರೋ ಎಂಬುವುದು ಖಚಿತವಾಗಬೇಕಿದೆ.

ಕೋಮು ಬಣ್ಣ ಬಳಿದ ಹಿಂದುತ್ವ ಸಂಘಟನೆಗಳು :

ಗೋಪನ್ ಸ್ವಾಮಿ ಸಮಾಧಿ ಪ್ರಕರಣ ಅವರ ಕುಟುಂಬ ಮತ್ತು ಪೊಲೀಸರ ನಡುವಿನ ಸಂಘರ್ಷ. ಆದರೆ, ‘ಹಿಂದೂ ಐಕ್ಯ ವೇದಿ’ ಮತ್ತು ‘ವಿಎಸ್‌ಡಿಪಿ’ಯಂತಹ ಕೆಲ ಹಿಂದುತ್ವ ಸಂಘಟನೆಗಳು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದೆ.

ಮುಸ್ಲಿಮರು ಗೋಪನ್ ಸ್ವಾಮಿಯವರ ಸಮಾಧಿಯನ್ನು ಬಲವಂತವಾಗಿ ತೆರೆಯುವಂತೆ ಮಾಡಿ, ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಆದರೆ, ಪೊಲೀಸರು ಗೋಪನ್ ಸ್ವಾಮಿ ಸಮಾಧಿ ತೆರೆದಿರುವುದು ಹೈಕೋರ್ಟ್ ಆದೇಶದ ಹಿನ್ನಲೆಯಾಗಿದೆ.

ಸೈಫ್ ಅಲಿ ಖಾನ್ ಇರಿತ ಪ್ರಕರಣ; ದಾಳಿಕೋರನಿಗಾಗಿ 7 ಪೊಲೀಸ್ ತಂಡಗಳಿಂದ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...