Homeಮುಖಪುಟಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

ಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಭಾರೀ ಸದ್ದು ಮಾಡಿರುವ ನಿವೃತ್ತ ಹೆಡ್‌ಲೋಡ್‌ ಕಾರ್ಮಿಕ ಗೋಪನ್‌ ಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ, ಕುಟುಂಬಸ್ಥರ ವಿರೋಧದ ನಡುವೆಯೂ ಗುರುವಾರ (ಜ.15) ಪೊಲೀಸರು ಗೋಪನ್‌ ಸ್ವಾಮಿಯವರ ಶವವನ್ನು ಸಮಾಧಿಯಿಂದ ಹೊರ ತೆಗೆದಿದ್ದಾರೆ.

ತಿರುವನಂತಪುರಂ ಜಿಲ್ಲೆಯ ನೆಯ್ಯತ್ತಿಂಕರ ಬಳಿಯ ಅರಳುಮೂಡುವಿನ ಮನೆ ಬಳಿ 72 ವರ್ಷದ ಗೋಪನ್ ಸ್ವಾಮಿಯವರ ಶವ ಹೂತಿದ್ದ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದರು.

ಸ್ವಯಂ ಗೋಷಿತ ಗುರು ಎನ್ನಲಾದ ನಿವೃತ್ತ ಹೆಡ್‌ಲೋಡ್ ಕಾರ್ಮಿಕ ಗೋಪನ್ ಸ್ವಾಮಿ ಜನವರಿ 9ರಿಂದ ನಾಪತ್ತೆಯಾಗಿದ್ದರು. ಆ ಬಳಿಕ ಸ್ಥಳೀಯ ದೇವಸ್ಥಾನದ ಬಳಿ ಅವರ ಸಮಾಧಿ ಕಂಡು ಬಂದಿತ್ತು. ಗೋಪನ್ ಸ್ವಾಮಿ ಆಧ್ಯಾತ್ಮಿಕತೆಯ ಪರಾಕಾಷ್ಠೆಯನ್ನು ತಲುಪಿ ಸ್ವಇಚ್ಛೆಯಿಂದ ಸಮಾಧಿಯಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಈ ಪ್ರಕರಣದ ಹಿಂದೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಜನವರಿ 13ರಂದು ಸಮಾಧಿ ಬಳಿಗೆ ಬಂದ ಪೊಲೀಸರು ಮತ್ತು ಇತರ ಅಧಿಕಾರಿಗಳು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದರು. ಆದರೆ, ಇದಕ್ಕೆ ಗೋಪನ್ ಸ್ವಾಮಿ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗೋಪನ್ ಸ್ವಾಮಿ ಪತ್ನಿ ಸುಲೋಚನಾ, ಮಕ್ಕಳಾದ ಸನಂದನ್, ರಾಜಸೇನನ್ ಸಮಾಧಿ ಬಳಿ ಅಡ್ಡಲಾಗಿ ನಿಂತು ಪೊಲೀಸರನ್ನು ತಡೆದಿದ್ದರು.

“ಗೋಪನ್ ಸ್ವಾಮಿ ಸಾವಿಗೂ ಮುನ್ನ ಆಧ್ಯಾತ್ಮಿಕತೆಯ ಬಗ್ಗೆ ಮಾತನಾಡಿದ್ದಾರೆ. ಅವರ ಸಾವನ್ನು ವೈದ್ಯರಲ್ಲ, ಶಿವನೇ ನಿರ್ಧರಿಸಿದ್ದಾನೆ. ಹಾಗಾಗಿ, ವೈದ್ಯಕೀಯ ದೃಢೀಕರಣದ ಅಗತ್ಯವಿಲ್ಲ ಎಂದು ಗೋಪನ್‌ ಸ್ವಾಮಿ ಪತ್ನಿ ಸುಲೋಚನಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಆದರೆ, ಜಿಲ್ಲಾಧಿಕಾರಿ ಅನು ಕುಮಾರಿ ಅವರು ಗೋಪನ್‌ ಸ್ವಾಮಿ ನಾಪತ್ತೆ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಆದೇಶದ ವಿರುದ್ದ ಗೋಪನ್ ಸ್ವಾಮಿ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನಮ್ಮ ಇಚ್ಛೆಯಂತೆ ಸಮಾಧಿ ಮಾಡುವುದು ನಮ್ಮ ಹಕ್ಕು. ನಮ್ಮ ಧಾರ್ಮಿಕ ನಂಬಿಕೆ ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಗೋಪನ್‌ ಸ್ವಾಮಿ ತನ್ನ ಧಾರ್ಮಿಕ ನಂಬಿಕೆಯಂತೆ ಸಮಾಧಿಯಾಗಿದ್ದಾರೆ. ಹಾಗಾಗಿ, ಸಮಾಧಿಯಿಂದ ಶವ ಹೊರ ತೆಗೆಯುವುದು ಸರಿಯಲ್ಲ ಎಂದು ಕುಟುಂಬಸ್ಥರು ವಾದಿಸಿದ್ದರು.

ಆದರೆ, ಗೋಪನ್ ಸ್ವಾಮಿ ಕುಟುಂಬದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶದಂತೆ ಸಮಾಧಿಯಿಂದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಗೋಪನ್ ಸ್ವಾಮಿ ಸಾವನ್ನಪ್ಪಿದರೆ ನೀವು ಮರಣ ಪ್ರಮಾಣ ಪತ್ರ ಏಕೆ ತೆಗೆದುಕೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

ವರದಿಗಳ ಪ್ರಕಾರ, ಗುರುವಾರ ಪೊಲೀಸರು ಸಮಾಧಿ ತೆರೆದಾಗ ಅದರೊಳಗೆ ಗೋಪನ್ ಸ್ವಾಮಿಯವರ ಶವ ಬೂದಿ ಅಥವಾ ಭಸ್ಮ ಮತ್ತು ಸುಗಂಧ ದ್ರವ್ಯಗಳಿಂದ ಆವೃತ್ತವಾಗಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶವ ಹೊರ ತೆಗೆಯುವ ಹಿನ್ನೆಲೆ ಗುರುವಾರ ಬೆಳಿಗ್ಗೆಯೇ ಸಮಾಧಿ ಸ್ಥಳದಲ್ಲಿ ದೊಡ್ಡ ಮಟ್ಟದಲ್ಲಿ ಪೊಲೀಸ್  ಮತ್ತು ಮೂರು ವಿಧಿವಿಜ್ಞಾನ ತಜ್ಞರ ತಂಡಗಳನ್ನು ನಿಯೋಜಿಸಲಾಗಿತ್ತು. ಗಲಾಟೆಯಾಗುವ ಮುನ್ಸೂಚನೆಯಿದ್ದ ಕಾರಣ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ವರದಿಗಳ ಪ್ರಕಾರ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಮುಂದುವರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಗೋಪನ್ ಸ್ವಾಮಿಯದ್ದು ಕೊಲೆಯೂ, ಇಲ್ಲಾ ಅವರೇ ಸಮಾಧಿಯಾದರೋ ಎಂಬುವುದು ಖಚಿತವಾಗಬೇಕಿದೆ.

ಕೋಮು ಬಣ್ಣ ಬಳಿದ ಹಿಂದುತ್ವ ಸಂಘಟನೆಗಳು :

ಗೋಪನ್ ಸ್ವಾಮಿ ಸಮಾಧಿ ಪ್ರಕರಣ ಅವರ ಕುಟುಂಬ ಮತ್ತು ಪೊಲೀಸರ ನಡುವಿನ ಸಂಘರ್ಷ. ಆದರೆ, ‘ಹಿಂದೂ ಐಕ್ಯ ವೇದಿ’ ಮತ್ತು ‘ವಿಎಸ್‌ಡಿಪಿ’ಯಂತಹ ಕೆಲ ಹಿಂದುತ್ವ ಸಂಘಟನೆಗಳು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದೆ.

ಮುಸ್ಲಿಮರು ಗೋಪನ್ ಸ್ವಾಮಿಯವರ ಸಮಾಧಿಯನ್ನು ಬಲವಂತವಾಗಿ ತೆರೆಯುವಂತೆ ಮಾಡಿ, ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಆದರೆ, ಪೊಲೀಸರು ಗೋಪನ್ ಸ್ವಾಮಿ ಸಮಾಧಿ ತೆರೆದಿರುವುದು ಹೈಕೋರ್ಟ್ ಆದೇಶದ ಹಿನ್ನಲೆಯಾಗಿದೆ.

ಸೈಫ್ ಅಲಿ ಖಾನ್ ಇರಿತ ಪ್ರಕರಣ; ದಾಳಿಕೋರನಿಗಾಗಿ 7 ಪೊಲೀಸ್ ತಂಡಗಳಿಂದ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...